ಮಮತಾ ಆಪ್ತನ ವಶಕ್ಕೆ ಕೋರಿ ಸುಪ್ರೀಂ ಮೊರೆ ಹೋದ ಸಿಬಿಐ
ಕೋಲ್ಕತಾ, ಡಿ.28: ಕೋಲ್ಕತಾದ ಮಾಜಿ ಪೊಲೀಸ್ ಆಯುಕ್ತ, ಸಿಎಂ ಮಮತಾ ಬ್ಯಾನರ್ಜಿ ಆಪ್ತ ರಾಜೀವ್ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಅವಕಾಶ ಕೋರಿ ಸುಪ್ರೀಂಕೋರ್ಟಿಗೆ ಸಿಬಿಐ ಮನವಿ ಸಲ್ಲಿಸಿದೆ.
ಒಂದು ಕಾಲದಲ್ಲಿ ಮಮತಾ ಸರ್ಕಾರಕ್ಕೆ ಮುಳುವಾಗಿದ್ದ ಶಾರದಾ ಚಿಟ್ಫಂಡ್ ಹಗರಣ ಸದ್ಯಕ್ಕೆ ತಣ್ಣಗಾಗಿದೆ. ಆದರೆ, ಚುನಾವಣೆ ಹತ್ತಿರದಲ್ಲರುವಾಗ ಮತ್ತೊಮ್ಮೆ ಪ್ರಕರಣ ಮುನ್ನೆಲೆಗೆ ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಅವರನ್ನು ವಿಚಾರಣೆಗೊಳಪಡಿಸಲಾಗಿದ್ದು, ಅವರು ತನಿಖೆಗೆ ಸಹಕಾರ ನೀಡುತ್ತಿಲ್ಲ. ಹಗರಣದಲ್ಲಿ ಇತರ ಆರೋಪಿಗಳು ಸಮಾಜದಲ್ಲಿ ಪ್ರಮುಖರು ಭಾಗಿಯಾಗಿರುವ ಬಗ್ಗೆ ಮಾಹಿತಿಯಿದೆ ಈ ಬಗ್ಗೆ ಪತ್ತೆಹಚ್ಚಲು ರಾಜೀವ್ ಅವರ ವಿಚಾರಣೆ ಅಗತ್ಯ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಹೇಳಿದೆ.

ಪ್ರಕರಣ ಒಂದು ವರ್ಷದಿಂದ ಸುಪ್ರೀಂಕೋರ್ಟ್ನಲ್ಲಿ ಬಾಕಿ ಉಳಿದಿದ್ದು ಶೀಘ್ರ ವಿಚಾರಣೆ ನಡೆಸಬೇಕು. ಕಸ್ಟಡಿ ವಿಚಾರಣೆ ನಡೆಸಬೇಕಿರುವುದರಿಂದ ಕುಮಾರ್ ಅವರಿಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಬೇಕು ಎಂದು ಕೂಡ ಸಿಬಿಐ ಕೋರಿದೆ.
ಶಾರದಾ ಚಿಟ್ ಫಂಡ್ ಹಗರಣದ ತನಿಖೆ ವೇಳೆ ಸಂಗ್ರಹಿಸಿದ ಸಾಕ್ಷ್ಯಗಳನ್ನು ಕುಮಾರ್ ಹಾಳುಗೆಡವಿದ್ದಾರೆ. ಹೀಗಾಗಿ, ಕೋರ್ಟ್ ನೀಡಿದ್ದ ಷರತ್ತು ಮುರಿದಿದ್ದಾರೆ. ಅವರ ಜಾಮೀನು ರದ್ದುಗೊಳಿಸಬೇಕು ಎಂದು ಕೂಡಾ ಸಿಬಿಐ ಕೋರಿದೆ.
1989ರ ಬ್ಯಾಚಿನ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ಅವರು 2500 ಕೋಟಿ ರು ಮೌಲ್ಯದ ಶಾರಾದ ಚಿಟ್ ಫಂಡ್ ಹಗರಣದಲ್ಲಿ ಸಿಲುಕಿದ್ದಾರೆ. ಶಾರದಾ ಚಿಟ್ ಫಂಡ್ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ, ಸಾಕ್ಷ್ಯ ನಾಶಪಡಿಸಿದ ಆರೋಪದಲ್ಲಿ ರಾಜೀವ್ ಕುಮಾರ್ ಅವರನ್ನು ಬಂಧಿಸಲು ಮುಂದಾಗಿತ್ತು. ಕೊಲ್ಕತ್ತಾ ಪೊಲೀಸರು ಅವರನ್ನು ಬಂಧಿಸದಂತೆ ತಡೆದಿದ್ದರು, ಮಾತ್ರವಲ್ಲ ಸಿಬಿಐ ಅಧಿಕಾರಿಗಳನ್ನೇ ಬಂಧಿಸಿ ದೊಡ್ಡ ನಾಟಕೀಯ ಬೆಳವಣಿಗೆಗೆ ಕಾರಣರಾಗಿದ್ದರು.
ರಾಜೀವ್ ಬಂಧನಕ್ಕೆ ತಡೆಯೊಡ್ಡಿ ಕಲ್ಕತ್ತಾ ಹೈಕೋರ್ಟ್ ಆದೇಶ ನೀಡಿತ್ತು. 2019 ಈ ಆದೇಶದ ವಿರುದ್ಧ ಸುಪ್ರೀಂಕೋರ್ಟಿಗೆ ಮನವಿ ಸಲ್ಲಿಸಿರುವ ಬಿಜೆಪಿ ಮತ್ತೊಮ್ಮೆ ವಿಚಾರಣೆಗಾಗಿ ಅರ್ಜಿ ಹಾಕಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications