ದೀದಿ-ಸಿಬಿಐ ವಿವಾದ LIVE: ತನಿಖೆಗೆ ಸಹಕರಿಸುವಂತೆ ಸುಪ್ರೀಂ ಆದೇಶ
ಕೋಲ್ಕತ್ತ, ಫೆಬ್ರವರಿ 04: ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸಿಬಿಐ ನಡುವೆ ಉಂಟಾಗಿರುವ ವಿವಾದ ಪ್ರಕರಣ ಬಿಗಡಾಯಿಸಿದ್ದು, ಪಶ್ಚಿಮ ಬಂಗಾಳದಲ್ಲಿ ತುರ್ತು ಪರಿಸ್ಥಿತಿಯಂಥ ಸನ್ನಿವೇಶ ನಿರ್ಮಾಣವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬಹುಕೋಟಿ ಶಾರದಾ ಸಮೂಹ ಸಂಸ್ಥೆ ಚಿಟ್ ಫಂಡ್ ಹಗರಣ ಹಾಗೂ ರೋಸ್ ವ್ಯಾಲಿ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಮಹಾನಗರದ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಬಂಧಿಸಲು ಸಿಬಿಐ ಮುಂದಾಗಿತ್ತು.
ಪಟ್ಟು ಬಿಡದ ದೀದಿ: ಸುಪ್ರೀಂ ಕೋರ್ಟ್ ಮೊರೆಹೋದ ಸಿಬಿಐ
ಆದರೆ ಸಿಬಿಐಯ ಈ ಕ್ರಮವನ್ನು ಖಂಡಿಸಿರುವ ದೀದಿ, 'ಸಂವಿಧಾನ ಉಳಿಸಿ' ಎಂದು ಕೋಲ್ಕತ್ತದ ಮೆಟ್ರೋ ಚಾನೆಲ್ ಬಳಿ ಧರಣಿ ಆರಂಭಿಸಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲಿ, ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಮಮತಾ ಈ ವಿವಾದವನ್ನು ಎಷ್ಟು ಜಾಣತನದಿಂದ ನಿಭಾಯಿಸುತ್ತಾರೆ ಎಂಬುದು ಕುತೂಹಲದ ವಿಷಯವಾಗಿದೆ.
ಕೋಲ್ಕತ್ತಾ ವಿವಾದಕ್ಕೆ ಸಂಬಂಧಿಸಿದ ಇಂದಿನ ಆಗುಹೋಗುಗಳ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡವು 'ಲೈವ್' ಮೂಲಕ ನೀಡಲಿದೆ.
ಕಮಿಷನರ್ ಮನೆಗೆ ಬರಲು ಎಷ್ಟು ಧೈರ್ಯ : ದೀದಿ ಕೆಂಡಾಮಂಡಲ
ಕೋಲ್ಕತ್ತ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅವರನ್ನು ವಿಚಾರಣೆ ಮಾಡಲು ಅವಕಾಶ ನೀಡದ ಮಮತಾ ಬ್ಯಾನರ್ಜಿ ಅವರ ನಡೆ ಖಂಡಿಸಿ ಸಿಬಿಐ ಇಂದು ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ.
West Bengal CM Mamata Banerjee on SC order that no coercive steps would be taken against Rajeev Kumar: It’s a moral victory. We have great respect for judiciary&all institutions. We are so grateful. We're so obliged. pic.twitter.com/yErxZ1QK20
— ANI (@ANI) February 5, 2019
West Bengal: Actress and TMC's Indrani Halder meets Chief Minister Mamata Banerjee at 'Save the Constitution' dharna in Kolkata. The CM has been on the dharna since the night of February 3. pic.twitter.com/ZTdoUwy50T
— ANI (@ANI) February 5, 2019
West Bengal: TMC workers protest against PM Narendra Modi and Central govt over CBI issue in Kolkata. pic.twitter.com/gg7w2MLusR
— ANI (@ANI) February 4, 2019