ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುವೇಂದು ಅಧಿಕಾರಿ ತಂದೆ, ಸಹೋದರನಿಗೆ ವಿಐಪಿ ಭದ್ರತೆ

|
Google Oneindia Kannada News

ನವದೆಹಲಿ, ಮೇ 22: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ತಂದೆ ಹಾಗೂ ಸಹೋದರನಿಗೆ ಕೇಂದ್ರ ಸರ್ಕಾರ ವಿಐಪಿ ಭದ್ರತೆ ನೀಡಿದೆ.

ಕೇಂದ್ರ ಗೃಹ ಸಚಿವಾಲಯ ಅವರಿಗೆ ಕೇಂದ್ರ ರಕ್ಷಣಾ ಪಡೆಗಳಿಂದ 'ವೈ +' ಭದ್ರತೆ ನೀಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. ಶಿಶಿರ್ ಕುಮಾರ್ ಅಧಿಕಾರಿ ಅವರು ಕಾಂತಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದು, ದಿಬ್ಯೆಂದು ಅಧಿಕಾರಿ ರಾಜ್ಯದ ತಮ್ಲುಕ್‌ ಕ್ಷೇತ್ರದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದರಾಗಿದ್ದಾರೆ.

ಟಿಎಂಸಿಯಲ್ಲಿ ಅತ್ತೆ, ಅಳಿಯನಿಗೆ ಮಾತ್ರ ಮಾತನಾಡಲು ಸ್ವಾತಂತ್ರ್ಯ: ಸುವೇಂದು ಅಧಿಕಾರಿಟಿಎಂಸಿಯಲ್ಲಿ ಅತ್ತೆ, ಅಳಿಯನಿಗೆ ಮಾತ್ರ ಮಾತನಾಡಲು ಸ್ವಾತಂತ್ರ್ಯ: ಸುವೇಂದು ಅಧಿಕಾರಿ

ಈ ಇಬ್ಬರು ಸಂಸದರು ಎದುರಿಸುತ್ತಿರುವ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಉಭಯ ನಾಯಕರಿಗೆ 'ವೈ +' ಭದ್ರತೆ ನೀಡುವಂತೆ ಶಿಫಾರಸು ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Centre Accords VIP Security Cover To Suvendu Adhikaris Father, Brother

ಸುವೇಂದು ಅಧಿಕಾರಿಯ ತಂದೆ ಸಿಸಿರ್ ಕುಮಾರ್ ಅಧಿಕಾರಿ ಮತ್ತು ಸಹೋದರ ದಿಬ್ಯೆಂದು ಅಧಿಕಾರಿಗೆ ಜೀವ ಬೆದರಿಕೆ ಇರುವ ವರದಿ ಆಧರಿಸಿ ಕೇಂದ್ರ ಗೃಹ ಸಚಿವಾಲಯವು ಹೆಚ್ಚಿನ ಭದ್ರತೆ ನೀಡಿದೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಮತದಾನ ನಡೆದು ಮೇ 2 ರಂದು ಫಲಿತಾಂಶ ಹೊರಬಿದ್ದಿತ್ತು, ಮಮತಾ ಬ್ಯಾನರ್ಜಿ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಗದ್ದುಗೆ ಏರಿದ್ದಾರೆ.

English summary
West Bengal BJP leader Suvendu Adhikari's father and brother, both members of Parliament, have been accorded ''Y+'' central security cover by the Union home ministry, official sources said on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X