ರೋಹಿಂಗ್ಯಾ ನಿರಾಶ್ರಿತರ ಬಯೋಮೆಟ್ರಿಕ್ ಮಾಹಿತಿ ಸಂಗ್ರಹಕ್ಕೆ ಸೂಚಿಸಿದ ಕೇಂದ್ರ
ಕೋಲ್ಕತಾ, ಅಕ್ಟೋಬರ್ 1: ದೇಶದೊಳಗೆ ಪ್ರವೇಶಿಸಿರುವ ರೋಹಿಂಗ್ಯಾ ನಿರಾಶ್ರಿತರ ಸ್ಥಿತಿಗತಿಗಳನ್ನು ಗುರುತಿಸಿ ಅವರ ಬಯೋಮೆಟ್ರಿಕ್ ಮಾಹಿತಿಗಳನ್ನು ಸಂಗ್ರಹಿಸಲು ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಹೀಗೆ ರಾಜ್ಯಗಳಿಂದ ಪಡೆದ ಬಯೋಮೆಟ್ರಿಕ್ ವರದಿಗಳನ್ನು ಕೇಂದ್ರ ಸರ್ಕಾರವು ರಾಜತಾಂತ್ರಿಕ ಮಾರ್ಗದ ಮೂಲಕ ಮಯನ್ಮಾರ್ ಸರ್ಕಾರಕ್ಕೆ ಕಳಹಿಸಲಿದೆ ಎಂದು ಹೇಳಿದ್ದಾರೆ.
ರೋಹಿಂಗ್ಯಾ ನಿರಾಶ್ರಿತರ ಮಾಹಿತಿಗಳನ್ನು ಒಮ್ಮೆ ಸಂಗ್ರಹಿಸಿದ ಬಳಿಕ ರಾಜ್ಯ ಆಡಳಿತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಲಿವೆ. ನಂತರ ಕೇಂದ್ರ ಸರ್ಕಾರ ಮಯನ್ಮಾರ್ ಜತೆ ರಾಜತಾಂತ್ರಿಕ ಮಾರ್ಗಗಳ ಮೂಲಕ ಕ್ರಮ ತೆಗೆದುಕೊಂಡು ಸಮಸ್ಯೆಯನ್ನು ಬಗೆಹರಿಸಲಿದೆ ಎಂದಿದ್ದಾರೆ.

ಮಾವೊವಾದಿಗಳ ಬೆದರಿಕೆ ಸೇರಿದಂತೆ ಅಂತರ್ ರಾಜ್ಯ ಸಂಬಂಧಗಳು ಮತ್ತು ಭದ್ರತಾ ವಿಚಾರಗಳ ಕುರಿತು ನಡೆದ ಪೂರ್ವ ವಲಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಜನಾಥ್ ಸಿಂಗ್, ಈ ವಿಷಯ ಪ್ರಸ್ತಾಪಿಸಿದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ ಮುಖ್ಯಮಂತ್ರಿ ರಘುವರ ದಾಸ್ ಮತ್ತು ಬಿಹಾರದ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸಭೆಯಲ್ಲಿ ಭಾಗವಹಿಸಿದ್ದರು.
ತಮ್ಮ ಕುಟುಂಬದವರ ಜತೆ ಗುಂಪುಗಳಲ್ಲಿ ಸಾಗುತ್ತಿರುವ ರೋಹಿಂಗ್ಯಾ ನಿರಾಶ್ರಿತರ ಚಲನವಲನಗಳ ಮೇಲೆ ಹದ್ದಿನಕಣ್ಣುನ ಇರಿಸುವಂತೆ ರೈಲ್ವೆ ರಕ್ಷಣಾ ದಳ (ಆರ್ಪಿಎಫ್) ಕೇರಳದ ಸರ್ಕಾರಕ್ಕೆ ಕಳೆದ ವಾರ ಎಚ್ಚರಿಕೆ ನೀಡಿತ್ತು.
ಭಾರತದ ಈಶಾನ್ಯ ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ನಿರಾಶ್ರಿತರು ಹೆಚ್ಚಾಗಿ ವಿವಿಧ ರಾಜ್ಯಗಳಿಗೆ ಸಂಚರಿಸುವ 14 ರೈಲುಗಳ ಪಟ್ಟಿಯನ್ನು ಆರ್ಪಿಎಫ್ ನೀಡಿದೆ.
ದಕ್ಷಿಣ ರೈಲ್ವೆಯ ಮುಖ್ಯ ಭದ್ರತಾ ಆಯುಕ್ತರು ಚೆನ್ನೈ, ಮದುರೆ, ಸೇಲಂ, ತಿರುವನಂತಪುರಂ, ಪಲಕ್ಕಾಡ್ ಮತ್ತು ತಿರುಚನಾಪಳ್ಳಿಗಳ ವಿಭಾಗೀಯ ಭದ್ರತಾ ಆಯುಕ್ತರಿಗೆ ಪತ್ರ ಕಳುಹಿಸಿದ್ದು, ರೈಲುಗಳಲ್ಲಿ ರೋಹಿಂಗ್ಯಾ ನಿರಾಶ್ರಿತರು ಪ್ರಯಾಣಿಸುತ್ತಿರುವುದು ಕಂಡುಬಂದರೆ ಅವರನ್ನು ಪೊಲೀಸರಿಗೆ ಒಪ್ಪಿಸುವಂತೆ ಸೂಚಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications