ಕೋವಿಡ್ ಲಸಿಕೆ ಕಾರ್ಯಕ್ರಮ ಮುಗಿದ ಬಳಿಕ ಸಿಎಎ ಜಾರಿ: ಅಮಿತ್ ಶಾ
ಕೋಲ್ಕತಾ, ಫೆಬ್ರವರಿ 11: ಕೋವಿಡ್-19 ಲಸಿಕೆ ನೀಡುವ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದರು. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೂ ಮುನ್ನ ಅವರು ಅಲ್ಲಿನ ವಲಸಿಗ ಹಿಂದೂ ಸಮುದಾಯಗಳಿಗೆ ಈ ಭರವಸೆ ನೀಡಿದ್ದಾರೆ.
2015ಕ್ಕೂ ಮುನ್ನ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳಿಂದ ಭಾರತಕ್ಕೆ ಬಂದ ಇತರೆ ಮುಸ್ಲಿಮೇತರ ವಲಸಿಗರ ನಡುವೆ ಮತುವಾ ಸಮುದಾಯಕ್ಕೆ ಸಿಎಎ ಜಾರಿಯಿಂದ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.
ಸಿಎಎ ಅನುಷ್ಠಾನದಿಂದ ಭಾರತದಲ್ಲಿನ ಅಲ್ಪಸಂಖ್ಯಾತರ ಪೌರತ್ವ ಸ್ಥಿತಿಗತಿಗೆ ಯಾವುದೇ ಧಕ್ಕೆಯಾಗುವುದಿಲ್ಲ. ಭಾರತೀಯ ರಾಷ್ಟ್ರೀಯತೆಗೆ ಧರ್ಮವನ್ನು ಮಾನದಂಡವಾಗಿಸುವ ತಾರತಮ್ಯ ಮಾಡಲಾಗುತ್ತಿದೆ ಎಂದು ವಿರೋಧಪಕ್ಷಗಳು ಟೀಕಿಸುವ ಮೂಲಕ ದೇಶದಲ್ಲಿನ ಅಲ್ಪಸಂಖ್ಯಾತರನ್ನು ದಾರಿತಪ್ಪಿಸುತ್ತಿವೆ ಎಂದು ಆರೋಪಿಸಿದ್ದಾರೆ.

ನೂತನ ಪೌರತ್ವ ಕಾನೂನನ್ನು ತರುವುದಾಗಿ 2018ರಲ್ಲಿ ಮೋದಿ ಸರ್ಕಾರ ಮಾತು ನೀಡಿತ್ತು. 2019ರಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದ ಬಳಿಕ ಅದನ್ನು ಈಡೇರಿಸಿತು. ಆದರೆ 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಪಿಡುಗು ದೇಶಕ್ಕೆ ಅಪ್ಪಳಿಸಿದ್ದರಿಂದ ಸಿಎಎ ಜಾರಿಯನ್ನು ತಡೆಹಿಡಿಯಲಾಗಿದೆ ಎಂದಿದ್ದಾರೆ.
'ನಾವು ಸುಳ್ಳು ಭರವಸೆ ನೀಡಿದ್ದೆವು ಎಂದು ಮಮತಾ ದೀದಿ ಹೇಳುತ್ತಾರೆ. ಸಿಎಎಯನ್ನು ವಿರೋಧಿಸಲು ಆರಂಭಿಸಿದ ಅವರು ಅದಕ್ಕೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ತಾನು ನೀಡುವ ಭರವಸೆಗಳನ್ನು ಬಿಜೆಪಿ ಯಾವಾಗಲೂ ಈಡೇರಿಸುತ್ತದೆ. ನಾವು ಈ ಕಾನೂನು ತಂದಿದ್ದೇವೆ ಮತ್ತು ನಿರಾಶ್ರಿತರಿಗೆ ಪೌರತ್ವ ಸಿಗಲಿದೆ' ಎಂದು ಹೇಳಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications