ಶುಭ್ರಾಂಶು ರಕ್ಷಣೆ ವಾಪಾಸ್: ಮುಕುಲ್ ರಾಯ್ ಭದ್ರತೆ ಕೇಂದ್ರ ಹಿಂಪಡೆಯುವ ಸಾಧ್ಯತೆ
ನವದೆಹಲಿ, ಜೂ. 15: ಮುಕುಲ್ ರಾಯ್ ಪುತ್ರ ಶುಭ್ರಾಂಶು ರಾಯ್ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಭದ್ರತಾ ರಕ್ಷಣೆಯನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ. ಮುಕುಲ್ ರಾಯ್ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಭದ್ರತೆಯನ್ನು ಹಿಂಪಡೆಯುವ ಸಾಧ್ಯತೆಯೂ ಇದೆ ಎಂದು ವರದಿಯಾಗಿದೆ.
''ಗೃಹ ಸಚಿವಾಲಯ (ಎಂಎಚ್ಎ) ನಿರ್ಧರಿಸುತ್ತದೆ. ಮುಕುಲ್ ರಾಯ್ ಭದ್ರತೆ ಹಿಂಪಡೆಯಲು ಎಂಎಚ್ಎ ಆದೇಶವನ್ನು ಕಾಯಲಾಗುತ್ತಿದೆ,'' ಎಂದು ಸಿಆರ್ಪಿಎಫ್ ಅಧಿಕಾರಿಯೊಬ್ಬರು ನ್ಯೂಸ್ 18 ಗೆ ಅಧಿಕಾರಿಗಳು ತಿಳಿಸಿದ್ದಾರೆ.
ರಾಯ್ 2017 ರಲ್ಲಿ ಟಿಎಂಸಿಯಿಂದ ಬಿಜೆಪಿಗೆ ಸೇರಿದ ನಂತರ ರಾಯ್ಗೆ ಕೇಂದ್ರ ಭದ್ರತಾ ರಕ್ಷಣೆಯನ್ನು ನೀಡಲಾಗಿತ್ತು. ಪಶ್ಚಿಮ ಬಂಗಾಳದಲ್ಲಿ 2021 ರ ವಿಧಾನಸಭಾ ಚುನಾವಣೆಗೆ ಸ್ವಲ್ಪ ಮೊದಲು ರಾಯ್ ಭದ್ರತೆಯನ್ನು ಡಿ ವರ್ಗಕ್ಕೆ ನವೀಕರಿಸಲಾಯಿತು. ಟಿಎಂಸಿಯಿಂದ ದಾಳಿಯ ಸಾಧ್ಯತೆಯಿಂದ ಚುನಾವಣೆಗೆ ಮುಂಚಿತವಾಗಿ ಭದ್ರತೆ ನವೀಕರಿಸಲಾಗಿತ್ತು.

ಈಗ ರಾಯ್ ಟಿಎಂಸಿಗೆ ಹಿಂತಿರುಗಿದ್ದಾರೆ ಹಾಗಾಗಿ ಬೆದರಿಕೆ ಕಡಿಮೆಯಾಗಿದೆ. ಈ ಹಿನ್ನೆಲೆ ಒದಗಿಸಲಾದ ಕೇಂದ್ರ ಭದ್ರತಾ ರಕ್ಷಣೆಯನ್ನು ಹಿಂಪಡೆಯಲು ಶೀಘ್ರದಲ್ಲೇ ಆದೇಶಗಳನ್ನು ಹೊರಡಿಸುವ ಬಗ್ಗೆ ಚಿಂತನೆ ಇದೆ ಎಂದು ಗೃಹ ಸಚಿವಾಲಯ ಅಧಿಕಾರಿಗಳು ಹೇಳಿದ್ದಾರೆ.
ಈ ಬಗ್ಗೆ ರಾಯ್ ಗೃಹ ಸಚಿವಾಲಯಕ್ಕೆ ಪತ್ರ ಬರೆದು ಕೇಂದ್ರ ಭದ್ರತೆಯನ್ನು ಹಿಂಪಡೆಯುವಂತೆ ಕೋರಿದ್ದಾರೆ. ಕೋಲ್ಕತ್ತಾದ ಮಾಧ್ಯಮ ಪ್ರತಿನಿಧಿಗಳ ಬಳಿ ಶನಿವಾರ ಮಾತನಾಡಿದ ರಾಯ್, ''ಈಗಾಗಲೇ ಸಿಆರ್ಪಿಎಫ್ ಸಿಬ್ಬಂದಿಯನ್ನು ತಮ್ಮ ಭದ್ರತೆಯಿಂದ ಮುಕ್ತಗೊಳಿಸಲಾಗಿದೆ,'' ಎಂದು ಹೇಳಿದ್ದರು. ಆದರೆ ಸಿಆರ್ಪಿಎಫ್ ಮಾತ್ರ ''ನಮ್ಮ ಸಿಬ್ಬಂದಿಗಳು ಕರ್ತವ್ಯ ಮುಂದುವರಿಸುತ್ತಿದ್ದಾರೆ,'' ಎಂದಿದ್ದರು.
ಮುಕುಲ್ ರಾಯ್ ಪುತ್ರ ಶುಭ್ರಾಂಶುಗೆ ವೈ-ವರ್ಗದ ಭದ್ರತೆಯನ್ನು ಒದಗಿಸಿದ್ದ ಸಿಐಎಸ್ಎಫ್, "ಶನಿವಾರ ತನ್ನ ಸಿಬ್ಬಂದಿಯನ್ನು ಹಿಂತೆಗೆದುಕೊಂಡಿತು. ಇದು ನಿಯಮದಂತೆ ನಡೆದಿದೆ. ವ್ಯಕ್ತಿಯು ಭದ್ರತೆಯನ್ನು ಬಯಸದಿದ್ದರೆ, ಅವರಿಗೆ ರಕ್ಷಣೆ ನೀಡಲಾಗುವುದಿಲ್ಲ," ಎಂದು ತಿಳಿಸಿದರು.
ಎಂಟು ಸಿಐಎಸ್ಎಫ್ ಸಿಬ್ಬಂದಿ, ಐದು ಸಶಸ್ತ್ರ ಸ್ಥಾಯೀ ಸಿಬ್ಬಂದಿ ಮತ್ತು ಮೂವರು ವೈಯಕ್ತಿಕ ಭದ್ರತಾ ಅಧಿಕಾರಿಗಳು, ಪ್ರತಿ ಪಾಳಿಯಲ್ಲಿ ಒಬ್ಬರು ಶುಭ್ರಾಂಶುಗೆ ಭದ್ರತೆ ನೀಡುತ್ತಿದ್ದರು. ಮುಕುಲ್ ರಾಯ್ ರಕ್ಷಣೆಗೆ 12 ಸಶಸ್ತ್ರ ಬೆಂಗಾವಲುಗಳು ಸೇರಿದಂತೆ ಮೂವತ್ತಮೂರು ಸಿಆರ್ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ಇನ್ನು ಮುಕುಲ್ ರಾಯ್ ಹಾಗೂ ಪುತ್ರ ಶುಭ್ರಾಂಶು ರಾಯ್ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಗೆ ಮರಳಿದ ಕೂಡಲೇ ಪಶ್ಚಿಮ ಬಂಗಾಳ ಸರ್ಕಾರವು ಇಬ್ಬರಿಗೂ ಭದ್ರತೆ ಒದಗಿಸಿದೆ.
(ಒನ್ಇಂಡಿಯಾ ಸುದ್ದಿ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications