Get Updates
Get notified of breaking news, exclusive insights, and must-see stories!

ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪೊಲೀಸರ ಮೇಲೆ ಕಲ್ಲು ತೂರಾಟ

ಕೋಲ್ಕತ್ತಾ (ಪಶ್ಚಿಮ ಬಂಗಾಲ), ಜೂನ್ 12: ಬಿಜೆಪಿ ಕಾರ್ಯಕರ್ತರು ಪೊಲೀಸರ ಮಧ್ಯೆ ಬುಧವಾರ ಹೊಡೆದಾಟ ನಡೆದಿದೆ. ಬಿಜೆಪಿಯವರ ಭಾರೀ ಮೆರವಣಿಗೆ ವೇಳೆ ಈ ಘಟನೆ ಸಂಭವಿಸಿದೆ. ಲೋಕಸಭಾ ಚುನಾವಣೆ ನಂತರ ನಡೆದ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲಿನ ಹಿಂಸಾಚಾರ ಹಾಗೂ ದಾಳಿ ವಿರೋಧಿಸಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿತ್ತು.

ಬಿಜೆಪಿ ಕಾರ್ಯಕರ್ತರು ಬೌಬಜಾರ್ ದಾಟುವ ವೇಳೆ ಪೊಲೀಸರು ಅಶ್ರುವಾಯು ಹಾಗೂ ಜಲಫಿರಂಗಿ ಬಳಸಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ಸಹ ಘೋಷಣೆಗಳನ್ನು ಕೂಗಿದ್ದಾರೆ. ಅಧಿಕಾರಿಗಳ ಮೇಲೆ ಕಲ್ಲು ಹಾಗೂ ಬಾಟಲಿಗಳನ್ನು ತೂರಿದ್ದಾರೆ. ಪಕ್ಷದ ಕೆಲವು ಕಾರ್ಯಕರ್ತರು ಸ್ಥಳದಲ್ಲಿ ಕುಳಿತು ಧರಣಿ ನಡೆಸಿದ್ದಾರೆ.

Clash between BJP workers and Police officers in West Bengal

ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗಿಂತ ಎರಡು ಸ್ಥಾನವಷ್ಟೇ ಕಡಿಮೆ ಪಶ್ಚಿಮ ಬಂಗಾಲದಲ್ಲಿ ಬಿಜೆಪಿಗೆ ಬಂದಿದೆ. ಆ ನಂತರ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ವಿವಿಧೆಡೆ ಹಿಂಸಾಚಾರದ ಘಟನೆಗಳು ವರದಿ ಆಗಿದ್ದು, ಕೇಂದ್ರವು ಈ ಬಗ್ಗೆ ವರದಿ ಕೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+