ಮಮತಾ ಭಾಷಣದ ಮಧ್ಯೆ ಜೈ ಶ್ರೀರಾಮ ಘೋಷಣೆ; ಕೋಪದಲ್ಲೇ ಭಾಷಣ ಆರಂಭಿಸಿದ ದೀದಿ
ಕೋಲ್ಕತ್ತಾ, ಜನವರಿ 23: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನೋತ್ಸವವನ್ನು ಕೇಂದ್ರ ಸರ್ಕಾರ ಕೋಲ್ಕತ್ತಾದಲ್ಲಿ ಆಚರಿಸಿದ್ದು, ಕಾರ್ಯಕ್ರಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಭಾಗವಹಿಸಿದ್ದರು.
ನೇತಾಜಿ ಅವರ ಜನ್ಮದಿನವನ್ನು ಪರಾಕ್ರಮ ದಿನವನ್ನಾಗಿ ಶನಿವಾರ ಆಚರಿಸಿದ್ದು, ಕೋಲ್ಕತ್ತಾದ ವಿಕ್ಟೋರಿಯಾ ಮೆಮೋರಿಯಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೋಪಗೊಂಡು ಭಾಷಣ ಮಾಡಲು ನಿರಾಕರಿಸಿದ ಸಂಗತಿಯೂ ನಡೆಯಿತು. ಅದೇನು? ಮುಂದೆ ಓದಿ...

ಮಮತಾ ಬ್ಯಾನರ್ಜಿ ಕೋಪಕ್ಕೆ ಕಾರಣವಾದ ಘೋಷಣೆ
ನೇತಾಜಿ ಅವರ ಜನ್ಮದಿನ ಸಂಬಂಧ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲು ಸಿಎಂ ಮಮತಾ ಬ್ಯಾನರ್ಜಿ ಅವರನ್ನು ವೇದಿಕೆಗೆ ಆಹ್ವಾನಿಸಲಾಯಿತು. ಆದರೆ ಮಮತಾ ಬ್ಯಾನರ್ಜಿ ವೇದಿಕೆಗೆ ಬರುತ್ತಿದ್ದಂತೆಯೇ ಕೆಲವರು "ಜೈ ಶ್ರೀರಾಮ್" ಎಂದು ಘೋಷಣೆ ಕೂಗಿದ್ದು, ಅವರ ಕೋಪಕ್ಕೆ ಕಾರಣವಾಯಿತು.
|
ಭಾಷಣ ಮಾಡಲು ನಿರಾಕರಣೆ
ಈ ಸಂದರ್ಭ ವೇದಿಕೆ ಮೇಲೆ ಬಂದ ಮಮತಾ ಬ್ಯಾನರ್ಜಿ ಭಾಷಣ ಮಾಡಲು ಹಿಂದೇಟು ಹಾಕಿದರು. ಕೊನೆಗೆ ಕೋಪದಲ್ಲೇ ಮಾತು ಆರಂಭಿಸಿದ ಅವರು,"ಸರ್ಕಾರದ ಕಾರ್ಯಕ್ರಮಗಳಲ್ಲಿ ಶಿಸ್ತುಪಾಲನೆ, ಘನತೆ ಅಗತ್ಯ. ಇದು ಯಾವುದೇ ರಾಜಕೀಯ ಪಕ್ಷದ ಕಾರ್ಯಕ್ರಮವಲ್ಲ" ಎಂದೇ ಭಾಷಣ ಶುರು ಮಾಡಿದರು.

"ಸರ್ಕಾರಿ ಕಾರ್ಯಕ್ರಮದಲ್ಲಿ ಘನತೆ ಇರಬೇಕು"
"ನೇತಾಜಿ ಅವರ ಜನ್ಮದಿನ ಕಾರ್ಯಕ್ರಮ ಯಾವುದೇ ಪಕ್ಷಕ್ಕೆ ಸಂಬಂಧಿಸಿದ ಕಾರ್ಯಕ್ರಮವಲ್ಲ. ಎಲ್ಲಾ ಪಕ್ಷಗಳಿಗೆ, ಎಲ್ಲಾ ಜನರಿಗೆ ಸಂಬಂಧಿಸಿದ ಕಾರ್ಯಕ್ರಮ. ಸರ್ಕಾರದ ಕಾರ್ಯಕ್ರಮದಲ್ಲಿ ಶಿಸ್ತು ಪಾಲನೆ, ಘನತೆ ಇರಬೇಕು ಎಂಬ ಬಗ್ಗೆ ಕನಿಷ್ಠ ಅರಿವಿರಬೇಕು" ಎಂದು ಸಿಡಿಮಿಡಿಗೊಂಡರು.

"ಆಹ್ವಾನಿಸಿ ಅವಮಾನಿಸುವುದು ನಿಮಗೆ ಹೊಸತಲ್ಲ"
"ಕೇಂದ್ರ ಸರ್ಕಾರ ನೇತಾಜಿ ಅವರ ಜನ್ಮದಿನಾಚರಣೆಗೆ ಕೋಲ್ಕತ್ತಾ ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದ. ಪ್ರಧಾನಿ ಮೋದಿ ಹಾಗೂ ಕೇಂದ್ರ ಸಂಸ್ಕೃತಿ ಸಚಿವಾಲಯಕ್ಕೆ ಧನ್ಯವಾದ ಅರ್ಪಿಸುವೆ" ಎಂದು ಹೇಳಿದರು. ಕೊನೆಗೆ, "ಯಾರನ್ನಾದರೂ ಕಾರ್ಯಕ್ರಮಕ್ಕೆ ಆಹ್ವಾನಿಸಿ ಅವಮಾನಿಸುವುದು ನಿಮಗೆ ಅಪೇಕ್ಷಿತವೇ ಆಗಿದೆ. ನಾನೇನೂ ಹೆಚ್ಚು ಮಾತನಾಡುವುದಿಲ್ಲ. ಜೈ ಹಿಂದ್, ಜೈ ಬಾಂಗ್ಲಾ" ಎಂದು ಕುಟುಕಿ ವೇದಿಕೆಯಿಂದ ನಡೆದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications