ಟಿಎಂಸಿ ಪರ ಪ್ರಚಾರ ಮಾಡದಂತೆ ಆರ್ಜೆಡಿ, ಎನ್ಸಿಪಿ ಮುಖಂಡರಿಗೆ ಕಾಂಗ್ರೆಸ್ ಪತ್ರ
ಕೋಲ್ಕತ್ತಾ, ಮಾರ್ಚ್ 17: ಅಧಿಕಾರಕ್ಕೆ ಮರಳಲು ಮಾತ್ರವಲ್ಲ, ಪಶ್ಚಿಮ ಬಂಗಾಳದಲ್ಲಿ ನೆಲೆಯೂರುವ ಪ್ರಯತ್ನದಲ್ಲಿರುವ ಬಿಜೆಪಿಯನ್ನು ಹಿಂದಕ್ಕೆ ತಳ್ಳುವ ಮುಖ್ಯ ಉದ್ದೇಶದೊಂದಿಗೆ ತೃಣಮೂಲ ಕಾಂಗ್ರೆಸ್ ಈ ಬಾರಿ ಚುನಾವಣಾ ಕಣದಲ್ಲಿದೆ. ಟಿಎಂಸಿಯ ಈ ಸ್ಪರ್ಧೆಗೆ ಬಿಹಾರದ ಆರ್ಜೆಡಿ, ಎನ್ಸಿಪಿ ಕೂಡ ತಮ್ಮ ಬೆಂಬಲ ವ್ಯಕ್ತಪಡಿಸಿವೆ.
ಆದರೆ ಈ ಒಂದು ನಡೆ ಕಾಂಗ್ರೆಸ್ ಹಾಗೂ ಸಿಪಿಐ (ಎಂ) ಮೈತ್ರಿಯಲ್ಲಿ ಅಸಮಾಧಾನ ಮೂಡಿಸಿದೆ. ಆರ್ಜೆಡಿ, ಎನ್ಸಿಪಿ ಪಕ್ಷಗಳು ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪರ ಪ್ರಚಾರದಲ್ಲಿ ಭಾಗಿಯಾಗಿರುವುದು ಬಂಗಾಳದಲ್ಲಿ ತಮ್ಮ ಪ್ರಚಾರಕ್ಕೆ ಅಡ್ಡಿಯುಂಟು ಮಾಡಬಹುದು ಎಂದು ಕಾಂಗ್ರೆಸ್ ತಿಳಿಸಿದೆ.
ಇದೇ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಪ್ರದೀಪ್ ಭಟ್ಟಾಚಾರ್ಯ ಬುಧವಾರ ಎನ್ಸಿಪಿ ಮುಖಂಡ ಶರದ್ ಪವಾರ್ ಹಾಗೂ ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ಗೆ ಪತ್ರ ಬರೆದಿದ್ದಾರೆ.

"ಟಿಎಂಸಿ ಪರ ಸ್ಟಾರ್ ಪ್ರಚಾರಕರಾಗಿ ನೀವು ಇರುವುದು ಪಶ್ಚಿಮ ಬಂಗಾಳ ಮತದಾರರಲ್ಲಿ ಗೊಂದಲ ಮೂಡಿಸುತ್ತಿದೆ. ಟಿಎಂಸಿ ಪರ ಪ್ರಚಾರ ಮಾಡುವುದನ್ನು ನಿಲ್ಲಿಸಿ" ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಎನ್ಸಿಪಿ, ಕಾಂಗ್ರೆಸ್ ಮೈತ್ರಿಯಲ್ಲಿದ್ದು, ಬಿಹಾರದಲ್ಲಿ ಯುಪಿಎ ಹಾಗೂ ಆರ್ಜೆಡಿ ಮೈತ್ರಿಯಲ್ಲಿದೆ.
-
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ.












Click it and Unblock the Notifications