ಕೊರೊನಾ: ಜೈಲಿನಲ್ಲಿ ಕೈದಿಗಳ ದಾಂಧಲೆ, ಪೊಲೀಸ್ ಫೈರಿಂಗ್ ನಲ್ಲಿ ಹಲವರ ಸಾವು?
ಕೋಲ್ಕತ್ತಾ, ಮಾರ್ಚ್ 22: ಅನಿರೀಕ್ಷಿತ ವಿದ್ಯಮಾನವೊಂದರಲ್ಲಿ ನಗರದ ಉತ್ತರದಲ್ಲಿರುವ ಢಂಢಂ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಏಕಾಏಕಿ, ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದರಿಂದ, ಪೊಲೀಸ್ ಫೈರಿಂಗ್ ನಿಂದ ಸಾವುನೋವು ಸಂಭವಿಸಿದೆ.
ಶನಿವಾರ (ಮಾ 21) ಮಧ್ಯಾಹ್ನದ ನಂತರ ಕೈದಿಗಳು, ಜೈಲು ಅಧಿಕಾರಿಗಳ ಮೇಲೆ ಇಟ್ಟಿಗೆಯಿಂದ ದಾಳಿ ನಡೆಸಿ, ಸಿಕ್ಕಸಿಕ್ಕ ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಬೆಂಕಿಯಿಡಲು ಆರಂಭಿಸಿದರು. ಪರಿಸ್ಥಿತಿ ತಹಬಂದಿಗೆ ತರಲು ಹೆಚ್ಚುವರಿ ಪೊಲೀಸರನ್ನು ಕರೆಸಿ, ಆಗಲೂ ನಿಯಂತ್ರಣಕ್ಕೆ ಬರದೇ ಇದ್ದಾಗ, ಫೈರಿಂಗ್ ನಡೆಸಿದ್ದಾರೆಂದು ವರದಿಯಾಗಿದೆ.
ಸಾವುನೋವಿನ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳದಿದ್ದರೂ, ಐದು ಕೈದಿಗಳು ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಪೊಲೀಸರು ಈ ಸುದ್ದಿಯನ್ನು ಅಲ್ಲಗಳೆದಿದ್ದಾರೆ.

ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು ಕೈದಿಗಳ ಕುಟುಂಬದವರು ಜೈಲಿಗೆ ಬರುವುದನ್ನು ನಿಷೇಧಿಸಲಾಗಿತ್ತು. ಕೆಲವರು ಪೆರೋಲ್ ಮೇಲೆ ಬಿಡುಗಡೆಗೊಳಿಸುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದರು.
ಕೆಲವು ಕೈದಿಗಳ ಬೇಲ್ ಅರ್ಜಿಯ ವಿಚಾರಣೆ ಶನಿವಾರ ನಡೆಯಬೇಕಾಗಿತ್ತು. ಆದರೆ, ಕೊರೊನಾದಿಂದಾಗಿ ಕೋರ್ಟ್ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹಾಕಲಾಗಿತ್ತು.
ಈ ಕಾರಣಕ್ಕಾಗಿ ಮತ್ತು ಪೆರೋಲ್ ನಿರಾಕರಿಸಿದ್ದಕ್ಕಾಗಿ, ಕೈದಿಗಳು ಹಿಂಸಾಚಾರಕ್ಕೆ ಇಳಿದರು ಎಂದು ಪಿಟಿಐ ವರದಿ ಮಾಡಿದೆ. ಘಟನೆಯನ್ನು ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆಂದು ಪೊಲೀಸರು ಹೇಳಿದ್ದು, ಯಾರಾದರೂ ಮೃತ ಪಟ್ಟಿದ್ದಾರಾ ಎನ್ನುವುದರ ಬಗ್ಗೆ ಸ್ಪಷ್ಟನೆಯನ್ನು ನೀಡಲಿಲ್ಲ. (ಚಿತ್ರ:ಪಿಟಿಐ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications