ಆಗ ಸಿಪಿಎಂನವರು ಹೊಡೆದರು, ಈಗ ಬಿಜೆಪಿಯವರು ನನಗೆ ಹೊಡೆಯುತ್ತಿದ್ದಾರೆ: ಮಮತಾ ಬ್ಯಾನರ್ಜಿ
ಕೋಲ್ಕತಾ, ಮಾರ್ಚ್ 17: ವಿಧಾನಸಭೆ ಚುನಾವಣೆಗೂ ಮುನ್ನ ತಮ್ಮನ್ನು ಮನೆಯೊಳಗೇ ಇರುವಂತೆ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಝಾರ್ಗ್ರಾಮ್ ಜಿಲ್ಲೆಯ ಗೋಪಿಬಳ್ಳವಪುರ್ನಲ್ಲಿ ಬುಧವಾರ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಮಮತಾ, ನಂದಿಗ್ರಾಮದ ಘಟನೆಯನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಈ ಮೊದಲು ಸಿಪಿಎಂ ತಮ್ಮ ಮೇಲೆ ದೈಹಿಕ ಹಲ್ಲೆ ನಡೆಸುತ್ತಿತ್ತು ಎಂದಿದ್ದಾರೆ.
'ಬಿಜೆಪಿಯವರು ನಾನು ಮನೆಯ ಒಳಗೆ ಇರಬೇಕು, ನಾನು ಚುನಾವಣೆ ವೇಳೆ ಹೊರಗೆ ಬರಬಾರದು ಎಂದು ಬಯಸುತ್ತಿದೆ. ಅವರು ನನ್ನ ಕಾಲಿಗೆ ಗಾಯ ಮಾಡಿದ್ದಾರೆ. ಆದರೆ ಅವರು ನನ್ನ ಧ್ವನಿಯನ್ನು ಹಿಸುಕಲು ಸಾಧ್ಯವಿಲ್ಲ. ನಾವು ಬಿಜೆಪಿಯನ್ನು ಸೋಲಿಸುತ್ತೇವೆ' ಎಂದು ಹೇಳಿದ್ದಾರೆ.

'ನನ್ನ ಜೀವನದಲ್ಲಿ ನಾನು ಅನೇಕ ಬಾರಿ ಏಟು ತಿಂದಿದ್ದೇನೆ. ಈ ಮೊದಲು ಸಿಪಿಎಂ ನನಗೆ ಹೊಡೆಯುತ್ತಿತ್ತು. ಈಗ ಬಿಜೆಪಿ ಅದನ್ನೇ ಮಾಡಲು ಶುರುಮಾಡಿದೆ. ಆದರೆ ಸಿಪಿಎಂನ ಜನರೇ ಈಗ ಬಿಜೆಪಿಯವರು ಆಗಿದ್ದಾರೆ. ಕೆಲವು ವಂಚಕರು, ಆಸೆಬುರುಕ ಜನರು ಕೂಡ ಬಿಜೆಪಿ ಸೇರಿಕೊಂಡಿದ್ದಾರೆ' ಎಂದು ಮಮತಾ ಟೀಕಿಸಿದ್ದಾರೆ.
'ಅವರು ಎನ್ಪಿಆರ್ ಮತ್ತು ಎನ್ಆರ್ಸಿ ಹೇರುತ್ತಾರೆ. ನನ್ನ ತಂದೆಯ ಜನ್ಮ ಪ್ರಮಾಣಪತ್ರವನ್ನು ಅವರು ಕೇಳುತ್ತಾರೆ. ಅದನ್ನು ನಾನು ಎಲ್ಲಿಂದ ತರುವುದು? ಹಿಂದಿನ ಕಾಲದ ಸ್ಥಿತಿ ಹೀಗಿತ್ತು. ಮನೆಯಲ್ಲಿಯೇ ಜನರು ಹುಟ್ಟುತ್ತಿದ್ದರು. ಜನರಿಗೆ ಪ್ರಮಾಣಪತ್ರವೂ ಸಿಗುತ್ತಿರಲಿಲ್ಲ' ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications