ಆಗ ಸಿಪಿಎಂನವರು ಹೊಡೆದರು, ಈಗ ಬಿಜೆಪಿಯವರು ನನಗೆ ಹೊಡೆಯುತ್ತಿದ್ದಾರೆ: ಮಮತಾ ಬ್ಯಾನರ್ಜಿ
ಕೋಲ್ಕತಾ, ಮಾರ್ಚ್ 17: ವಿಧಾನಸಭೆ ಚುನಾವಣೆಗೂ ಮುನ್ನ ತಮ್ಮನ್ನು ಮನೆಯೊಳಗೇ ಇರುವಂತೆ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಝಾರ್ಗ್ರಾಮ್ ಜಿಲ್ಲೆಯ ಗೋಪಿಬಳ್ಳವಪುರ್ನಲ್ಲಿ ಬುಧವಾರ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಮಮತಾ, ನಂದಿಗ್ರಾಮದ ಘಟನೆಯನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಈ ಮೊದಲು ಸಿಪಿಎಂ ತಮ್ಮ ಮೇಲೆ ದೈಹಿಕ ಹಲ್ಲೆ ನಡೆಸುತ್ತಿತ್ತು ಎಂದಿದ್ದಾರೆ.
'ಬಿಜೆಪಿಯವರು ನಾನು ಮನೆಯ ಒಳಗೆ ಇರಬೇಕು, ನಾನು ಚುನಾವಣೆ ವೇಳೆ ಹೊರಗೆ ಬರಬಾರದು ಎಂದು ಬಯಸುತ್ತಿದೆ. ಅವರು ನನ್ನ ಕಾಲಿಗೆ ಗಾಯ ಮಾಡಿದ್ದಾರೆ. ಆದರೆ ಅವರು ನನ್ನ ಧ್ವನಿಯನ್ನು ಹಿಸುಕಲು ಸಾಧ್ಯವಿಲ್ಲ. ನಾವು ಬಿಜೆಪಿಯನ್ನು ಸೋಲಿಸುತ್ತೇವೆ' ಎಂದು ಹೇಳಿದ್ದಾರೆ.

'ನನ್ನ ಜೀವನದಲ್ಲಿ ನಾನು ಅನೇಕ ಬಾರಿ ಏಟು ತಿಂದಿದ್ದೇನೆ. ಈ ಮೊದಲು ಸಿಪಿಎಂ ನನಗೆ ಹೊಡೆಯುತ್ತಿತ್ತು. ಈಗ ಬಿಜೆಪಿ ಅದನ್ನೇ ಮಾಡಲು ಶುರುಮಾಡಿದೆ. ಆದರೆ ಸಿಪಿಎಂನ ಜನರೇ ಈಗ ಬಿಜೆಪಿಯವರು ಆಗಿದ್ದಾರೆ. ಕೆಲವು ವಂಚಕರು, ಆಸೆಬುರುಕ ಜನರು ಕೂಡ ಬಿಜೆಪಿ ಸೇರಿಕೊಂಡಿದ್ದಾರೆ' ಎಂದು ಮಮತಾ ಟೀಕಿಸಿದ್ದಾರೆ.
'ಅವರು ಎನ್ಪಿಆರ್ ಮತ್ತು ಎನ್ಆರ್ಸಿ ಹೇರುತ್ತಾರೆ. ನನ್ನ ತಂದೆಯ ಜನ್ಮ ಪ್ರಮಾಣಪತ್ರವನ್ನು ಅವರು ಕೇಳುತ್ತಾರೆ. ಅದನ್ನು ನಾನು ಎಲ್ಲಿಂದ ತರುವುದು? ಹಿಂದಿನ ಕಾಲದ ಸ್ಥಿತಿ ಹೀಗಿತ್ತು. ಮನೆಯಲ್ಲಿಯೇ ಜನರು ಹುಟ್ಟುತ್ತಿದ್ದರು. ಜನರಿಗೆ ಪ್ರಮಾಣಪತ್ರವೂ ಸಿಗುತ್ತಿರಲಿಲ್ಲ' ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications