ಪ.ಬಂಗಾಳದಲ್ಲಿ ಟಿವಿ ನೋಡಿದರೆ, ಸಂಗೀತ ಕೇಳಿದರೆ, ಕೇರಂ ಆಡಿದರೆ ದಂಡ
ಮುರ್ಶಿದಾಬಾದ್, ಆಗಸ್ಟ್ 21: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಟಿವಿ ನೋಡುವುದು, ಸಂಗೀತ ಕೇಳುವುದು, ಕೇರಂ ಆಡಿದರೆ ಅವರ ಮೇಲೆ ದಂಡ ವಿಧಿಸಲಾಗುತ್ತಿದೆ. ಇದೇನಿದು ಪಶ್ಚಿಮ ಬಂಗಾಳದಲ್ಲಿ ಸಕಾರವೇ ಈ ರೀತಿಯ ನಿರ್ಧಾರ ತೆಗೆದುಕೊಂಡಿದೆ ಎಂದುಕೊಳ್ಳಬೇಡಿ ಇದು ಅಲ್ಪಸಂಖ್ಯಾತ ಸಮುದಾಯ ತೆಗೆದುಕೊಂಡಿರುವ ನಿರ್ಧಾರವಾಗಿದೆ.
ಮುರ್ಶಿದಾಬಾದ್ ಜಿಲ್ಲೆಯಲ್ಲಿ ಪ್ರಬಲವಾಗಿರುವ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಕೆಲವೊಂದು ಚಟುವಟಿಕೆಗಳ ಮೇಲೆ ನಿಷೇಧ(ಫತ್ವಾ) ಹೇರಿದೆ. ಈ ಪೈಕಿ ಟಿ.ವಿ ನೋಡುವುದು, ಸಂಗೀತ ಕೇಳುವುದು, ಲಾಟರಿ ಟಿಕೆಟ್ ಮಾರಾಟ ಮಾಡುವುದು, ಮದ್ಯ ಮಾರಾಟ ಮಾಡುವುದು, ಕೇರಂ ಆಡುವುದೂ ಸಹ ಸೇರ್ಪಡೆಯಾಗಿದೆ.
ಒಂದು ವೇಳೆ ಈ ಫತ್ವಾವನ್ನು ಉಲ್ಲಂಘನೆ ಮಾಡಿದವರು 500 ರೂಪಾಯಿಗಳಿಂದ 7,000 ರೂಪಾಯಿಗಳ ವರೆಗೆ ದಂಡ ತೆರಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.

ಫತ್ವಾ ಉಲ್ಲಂಘಿಸಿದವರ ಬಗ್ಗೆ ಮಾಹಿತಿ ನೀಡುವವರಿಗೂ 200-2000 ರೂಪಾಯಿ ವರೆಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಈ ಅಂಶಗಳೆಲ್ಲವೂ ಯುವ ಪೀಳಿಗೆಯನ್ನು ಸಂಸ್ಕೃತಿ ಮತ್ತು ನೈತಿಕ ಅಧಃಪತನದತ್ತ ಕೊಂಡೊಯ್ಯುವುದನ್ನು ತಪ್ಪಿಸಲು ಸಮಿತಿ ಈ ರೀತಿಯ ನಿಷೇಧ, ಫತ್ವಾ ವಿಧಿಸಿದೆ ಎಂಬ ಸಮರ್ಥನೆಯೂ ವ್ಯಕ್ತವಾಗತೊಡಗಿದೆ.
ಸಾಮಾಜಿಕ ಸುಧಾರಣಾ ಸಮಿತಿಯ ಬ್ಯಾನರ್ ನ ಅಡಿಯಲ್ಲಿ ಈ ಫತ್ವಾ ಹೊರಡಿಸಲಾಗಿದೆ. ಈ ಆದೇಶವನ್ನೂ ಮೀರಿ ನಡೆದರೆ ಸಂಗೀತ ಕೇಳಿದರೆ 1,000 ರೂಪಾಯಿ ದಂಡ, ಕೇರಮ್ ಆಡಿದರೆ 500 ರೂಪಾಯಿ ದಂಡ ಲಾಟರಿ ಖರೀದಿಸಿದರೆ 2,000 ರೂಪಾಯಿ ದಂಡ, ಮದ್ಯ ಮಾರಾಟ ಮಾಡಿದರೆ, 7,000 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಫತ್ವಾದಲ್ಲಿ ತಿಳಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications