ಮೊದಲು ವಾಸ್ತವ ತಿಳಿದುಕೊಳ್ಳಿ: ಸಂಸದೆ ಮೊಯಿತ್ರಾಗೆ ಮಾಜಿ ಸಿಜೆಐ ರಂಜನ್ ಗೊಗೊಯ್ ತಿರುಗೇಟು
ಕೋಲ್ಕತಾ, ಫೆಬ್ರವರಿ 11: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟಿರುವ ಆರೋಪಗಳನ್ನು ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ತಳ್ಳಿಹಾಕಿದ್ದಾರೆ. ತಮ್ಮ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಮಾತನಾಡಿರುವ ಅವರು, ನ್ಯಾಯಾಧೀಶರು ದಾಳಿಗಳಿಂದ ತಲೆಬಾಗಬಾರದು ಎಂದಿದ್ದಾರೆ.
ಬಿಜೆಪಿಯಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ರಂಜನ್ ಗೊಗೊಯ್ ಅವರು, ತಮ್ಮ ವಿರುದ್ಧ ಸಂಸತ್ನಲ್ಲಿ ವಾಗ್ದಾಳಿ ನಡೆಸಿದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ವಿರುದ್ಧ ಯಾವುದೇ ಕಾನೂನು ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
ಮೋಯಿತ್ರಾ ಅಥವಾ ಅವರ ಪಕ್ಷವನ್ನು ನೇರವಾಗಿ ಉಲ್ಲೇಖಿಸದ ಗೊಗೊಯ್, 'ಏನಿದು ದಾಳಿ? ದಾಳಿಗಳಿಂದ ನಿವೃತ್ತ ನ್ಯಾಯಾಧೀಶರು ಎಂದಾದರೂ ಹೆದರಿದ್ದಾರಾ? ಆಕೆ ಮುಖ್ಯವಾಗಿ ವಾಸ್ತವ ಸಂಗತಿಗಳನ್ನೇ ಸರಿಯಾಗಿ ಹೊಂದಿರಲಿಲ್ಲ. ನೀವು ಆರೋಪವೊಂದನ್ನು ಮಾಡುವಾಗ ಕಡೇಪಕ್ಷ ವ್ಯಕ್ತಿಯ ಹೆಸರು ಹೇಳಿ. ನನಗೆ ಒಂದು ಹೆಸರಿದೆ. ಮತ್ತು ಹೆಸರು ಹೇಳಿಸಿಕೊಳ್ಳುವ ಅರ್ಹತೆ ಇದೆ. ವಾಸ್ತವವಾಗಿ ಆ ಆರೋಪಗಳು ಸುಳ್ಳು' ಎಂದು ಹೇಳಿದ್ದಾರೆ.

ಕೋಲ್ಕತಾದಲ್ಲಿ 'ಇಂಡಿಯಾ ಟುಡೆ' ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಂಜನ್ ಗೊಗೊಯ್, ನ್ಯಾಯಾಧೀಶರಿಗೆ ಎಚ್ಚರಿಕೆಯ ಸಂದೇಶ ನೀಡುವ ಸಲುವಾಗಿ ತಮ್ಮನ್ನು ಒಳಗೊಂಡ ಪ್ರಕರಣವನ್ನು ಸಂಸತ್ನಲ್ಲಿ ಉಲ್ಲೇಖಿಸಲಾಗಿದೆ ಎಂದಿದ್ದಾರೆ.
'ನೀವು ಒಂದು ನಿರ್ದಿಷ್ಟ ರೀತಿಯಲ್ಲಿ ವರ್ತಿಸಬೇಕು ಎಂದು ಅವರು ಬಯಸುತ್ತಾರೆ. ಒಂದು ವೇಳೆ ನೀವು ಹಾಗೆ ಮಾಡದೆ ಇದ್ದರೆ ಅವರು ನಿಮ್ಮ ಮೇಲೆ ದಾಳಿ ನಡೆಸುತ್ತಾರೆ. ನ್ಯಾಯಾಧೀಶರು ಅಂತಹ ದಾಳಿಗಳಿಂದ ಹಿಂಜರಿಯಬೇಕೇ? ದುರದೃಷ್ಟವಶಾತ್ ಅನೇಕರು ಮಾಡುತ್ತಾರೆ' ಎಂದು ಹೇಳಿದ್ದಾರೆ.
ಅಂತಹ ಆರೋಪಗಳನ್ನು ಮಾಡುವ ಮುನ್ನ ಕಡೇಪಕ್ಷ ಸರಿಯಾದ ಮಾಹಿತಿಗಳನ್ನು ಪಡೆದುಕೊಳ್ಳಿ. ನಮ್ಮ ದೇಶದ ಸಮಸ್ಯೆಯೆಂದರೆ ವಾಸ್ತವಗಳಿಲ್ಲದೆಯೇ ನಾವು ಮುನ್ನುಗ್ಗುತ್ತೇವೆ. ತಮ್ಮ ವಿರುದ್ಧದ ಪ್ರಕರಣದ ವಿಚಾರಣೆಗೆ ಸಮಿತಿ ರಚಿಸಿದ್ದು ಎರಡನೆಯ ಹಿರಿಯ ನ್ಯಾಯಮೂರ್ತಿಯಾಗಿದ್ದ ಈಗಿನ ಸಿಜೆಐ ಎಸ್ಎ ಬೊಬ್ಡೆ ಎಂದು ಮೊಯಿತ್ರಾ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications