ಪಶ್ಚಿಮ ಬಂಗಾಳದಲ್ಲಿ ಬಡವರಿಗೆ ಜೂನ್ 2021ರವರೆಗೆ ಉಚಿತ ಅಕ್ಕಿ:ಮಮತಾ ಬ್ಯಾನರ್ಜಿ
ಕೊಲ್ಕತ್ತಾ, ಜೂನ್ 30: ಪ್ರಧಾನಿ ನರೇಂದ್ರ ಮೋದಿ ನವೆಂಬರ್ವರೆಗೂ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಉಚಿತ ಅಕ್ಕಿ ನೀಡಲಾಗುವುದು ಎಂದು ಘೋಷಿಸಿದ ಬೆನ್ನಲ್ಲೇ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ರಾಜ್ಯದ ಬಡವರಿಗೆ ಜೂನ್ 2021ರವರೆಗೆ ಉಚಿತ ಅಕ್ಕಿ ನೀಡಲಾಗುವುದು ಎಂದು ಹೇಳಿದ್ದಾರೆ.
Recommended Video
ಮೋದಿಯವರ ಭಾಷಣವು ಮುಖ್ಯವಾಗಿ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಕೇಂದ್ರೀಕರಿಸಿದೆ ಮತ್ತು ಕೇಂದ್ರದ 'ಬಡವರಿಗೆ ಉಚಿತ ಆಹಾರ ಧಾನ್ಯಗಳು' ಯೋಜನೆಯನ್ನು ನವೆಂಬರ್ ಅಂತ್ಯದವರೆಗೆ ವಿಸ್ತರಿಸುವುದಾಗಿ ಘೋಷಿಸಿದ್ದಾರೆ. ಆದರೆ ಈ ಯೋಜನೆ ಅಡಿಯಲ್ಲಿ ಉಚಿತ ಪಡಿತರವನ್ನು ಜೂನ್ 2021 ರವರೆಗೆ ವಿಸ್ತರಿಸುವುದಾಗಿ ಮಮತಾ ಬ್ಯಾನರ್ಜಿ ಪ್ರಕಟಿಸಿದ್ದಾರೆ.
ದೇಶದಲ್ಲಿ 800 ದಶಲಕ್ಷಕ್ಕೂ ಹೆಚ್ಚು ಜನರಿಗೆ ಉಚಿತ ಪಡಿತರ ನೀಡಲಾಗುವ ಯೋಜನೆಯ ವಿಸ್ತರಣೆಗೆ 90 ಸಾವಿರ ಕೋಟಿ ವೆಚ್ಚವಾಗಲಿದೆ. ಮೂರು ತಿಂಗಳ ಹಿಂದೆಯೇ ಲಾಕ್ ಡೌನ್ ಪ್ರಾರಂಭವಾದಾಗಿನಿಂದ ಇದು ಒಟ್ಟು 1.5 ಲಕ್ಷ ಕೋಟಿ ಸರ್ಕಾರದ ಖರ್ಚಾಗುತ್ತದೆ ಎಂದು ಮೋದಿ ಹೇಳಿದ್ದಾರೆ.

ಬಡವರಿಗಾಗಿ ವಿಸ್ತೃತ ಯೋಜನೆಯಲ್ಲಿ, ಮುಂಬರುವ ಐದು ತಿಂಗಳಲ್ಲಿ ಕೇಂದ್ರವು 5 KG ಗೋಧಿ ಅಥವಾ ಅಕ್ಕಿಯನ್ನು ಉಚಿತವಾಗಿ ನೀಡಲಿದೆ. ಪ್ರತಿ ಕುಟುಂಬಕ್ಕೆ ತಿಂಗಳಿಗೆ ಒಂದು ಕಿಲೋ ಬೇಳೆಯನ್ನು ಸರ್ಕಾರ ನೀಡಲಿದೆ.












Click it and Unblock the Notifications