ಪೆಟ್ರೋಲ್, ಡೀಸೆಲ್ ಬೆಲೆ ಇನ್ನಷ್ಟು ತಗ್ಗುತ್ತದೆ; ಪೆಟ್ರೋಲಿಯಂ ಸಚಿವ
ಕೋಲ್ಕತ್ತಾ, ಏಪ್ರಿಲ್ 5: ದೇಶದ ತೈಲ ಬೆಲೆಯಲ್ಲಿ ಈಚೆಗಷ್ಟೆ ಸ್ವಲ್ಪ ಇಳಿಕೆಯಾಗಿದ್ದು, ಮುಂದೆ ಪೆಟ್ರೋಲ್, ಡೀಸೆಲ್ ಬೆಲೆ ಇನ್ನಷ್ಟು ಇಳಿಕೆಯಾಗಬಹುದು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಚುನಾವಣೆಗೆ ಸಿದ್ಧತೆ ನಡೆಯುತ್ತಿದ್ದು, ಭಾನುವಾರ ಭೇಟಿ ನೀಡಿದ್ದ ಧರ್ಮೇಂದ್ರ ಪ್ರಧಾನ್, ಬೆಲೆ ಇಳಿಕೆಯಾಗುವ ಭರವಸೆ ನೀಡಿದ್ದಾರೆ.
ಚುನಾವಣಾ ಆಯೋಗ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಚುನಾವಣೆ ಘೋಷಣೆ ಮಾಡಿದ ನಂತರ ಫೆಬ್ರವರಿ 27ರಿಂದಲೂ ತೈಲ ಬೆಲೆಯಲ್ಲಿ ಏರಿಕೆ ಮಾಡಿರಲಿಲ್ಲ. ಆನಂತರ ಕಚ್ಚಾ ತೈಲ ಬೆಲೆ ಇಳಿಕೆಯಾದ ಕಾರಣ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಕೊಂಚ ತಗ್ಗಿಸಲಾಗಿತ್ತು. ಪೆಟ್ರೋಲ್ ಮೇಲೆ 61 ಪೈಸೆ ಹಾಗೂ ಡೀಸೆಲ್ ಮೇಲೆ 60 ಪೈಸೆಯನ್ನು ತಗ್ಗಿಸಲಾಗಿತ್ತು. ಗ್ಯಾಸ್ ಸಿಲಿಂಡರ್ ಬೆಲೆಯನ್ನೂ 10 ರೂಪಾಯಿ ತಗ್ಗಿಸಲಾಗಿತ್ತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದೆ. ಇದರ ಲಾಭವನ್ನು ಗ್ರಾಹಕರಿಗೆ ತಲುಪಿಸಲಾಗುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನು ಇಳಿಸಲಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆಯೂ ಇಳಿಕೆಗೊಂಡಿದೆ. ಪೆಟ್ರೋಲ್, ಡೀಸೆಲ್ ಹಾಗೂ ಅನಿಲ ಬೆಲೆ ಮುಂದಿನ ದಿನಗಳಲ್ಲಿ ಇನ್ನಷ್ಟು ತಗ್ಗಲಿದೆ ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಯುರೋಪ್ ಹಾಗೂ ಏಷ್ಯಾಗಳಲ್ಲಿ ಕೊರೊನಾ ಪ್ರಕರಣಗಳ ಏರಿಕೆ ಬೆನ್ನಲ್ಲೇ ಮಾರ್ಚ್ 15ರ ನಂತರ ಪೆಟ್ರೋಲಿಯಂ ಉತ್ಪನ್ನ ಹಾಗೂ ಕಚ್ಚಾ ತೈಲಗಳ ಬೆಲೆ ಕಡಿಮೆಯಾಗಿತ್ತು. ಈ ಬೆಲೆಯು ಸ್ಥಿರವಾಗಿದ್ದು, ಮುಂದೆ ಏರಿಕೆಯಾಗುವುದಿಲ್ಲ ಎನ್ನುವ ಭರವಸೆ ಇದೆ ಎಂದು ಪೆಟ್ರೋಲಿಯಂ ಸಚಿವಾಲಯದ ಕಾರ್ಯದರ್ಶಿ ತರುಣ್ ಕಪೂರ್ ತಿಳಿಸಿದ್ದಾರೆ.
-
MT Aqua Titan: ಮಂಗಳೂರು ಕರಾವಳಿಗೆ ಆಗಮಿಸಿದ ರಷ್ಯಾದ ಕಚ್ಚಾ ತೈಲ ಹೊತ್ತ ಬೃಹತ್ ನೌಕೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications