ಕೊರೊನಾ ವಿರುದ್ಧದ ಹೋರಾಟ; ಪಶ್ಚಿಮ ಬಂಗಾಳದ ದಿಟ್ಟ ತೀರ್ಮಾನ

ಕೋಲ್ಕತ್ತಾ, ಜುಲೈ 15 : ಕೊರೊನಾ ವೈರಸ್ ಸೋಂಕಿನ ವಿರುದ್ಧದ ಹೋರಾಟದಲ್ಲಿ ಪಶ್ಚಿಮ ಬಂಗಾಳ ಸರ್ಕಾರ ದಿಟ್ಟ ತೀರ್ಮಾನವೊಂದನ್ನು ಕೈಗೊಂಡಿದೆ. ರಾಜ್ಯದಲ್ಲಿನ ಕೊರೊನಾ ಸೋಂಕಿತರ ಸಂಖ್ಯೆ 34,427ಕ್ಕೆ ಏರಿಕೆಯಾಗಿದೆ.

"ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಟ ಮಾಡುವಾಗ ಕೊರೊನಾ ವಾರಿಯರ್ಸ್ ಮೃತಪಟ್ಟರೆ ಅವರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Government Job For Kin Of Corona Warriors

ಪಶ್ಚಿಮ ಬಂಗಾಳದಲ್ಲಿ ಇದುವರೆಗೂ 12 ಸರ್ಕಾರಿ ಅಧಿಕಾರಿಗಳು ಕೊರೊನಾ ವಿರುದ್ಧ ಹೋರಾಟ ಮಾಡುವಾಗ ಮೃತಪಟ್ಟಿದ್ದಾರೆ. ಮೃತಪಟ್ಟ ಅಧಿಕಾರಿಗಳಿಗೆ ಮೆಡಲ್ ಮತ್ತು ಪ್ರಮಾಣ ಪತ್ರ ನೀಡಿ ಸನ್ಮಾನ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಪಶ್ಚಿಮ ಬಂಗಾಳದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದೆ. ರಾಜ್ಯದ ವಿಧಾನಸಭೆ ಸಿಬ್ಬಂದಿಗೆ ಸೋಂಕು ತಗುಲಿದ್ದು, ಕಟ್ಟಡದಲ್ಲಿರುವ ಎಲ್ಲಾ ಇಲಾಖೆಗಳ ಕಚೇರಿಗಳನ್ನು ಜುಲೈ 24ರ ತನಕ ಬಂದ್ ಮಾಡಲಾಗಿದೆ.

ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಟ ನಡೆಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರನ್ನು ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಬುಧವಾರ 1589 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ, 20 ಜನರು ಮೃತಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+