ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರಗಳು : ಸಾಂತ್ರಗಚಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ

|
Google Oneindia Kannada News

ಕೋಲ್ಕತ್ತಾ, ಅಕ್ಟೋಬರ್ 24 : ಪಶ್ಚಿಮ ಬಂಗಾಳದ ಸಾಂತ್ರಗಚಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದಲ್ಲಿ ಇಬ್ಬರು ಮೃತಪಟ್ಟಿದ್ದು, 12 ಜನರು ಗಾಯಗೊಂಡಿದ್ದಾರೆ. ಮೃತಪಟ್ಟ ಪ್ರಯಾಣಿಕರ ಕುಟುಂಬ ವರ್ಗಕ್ಕೆ ಭಾರತೀಯ ರೈಲ್ವೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

ಮಂಗಳವಾರ ಸಂಜೆ 6.30ರ ವೇಳೆಗೆ ಸಾಂತ್ರಗಚಿ ರೈಲು ನಿಲ್ದಾಣದ ಪಾದಚಾರಿ ಮೇಲ್ಸೇತುವೆಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಎರಡು ರೈಲು ಒಟ್ಟಿಗೆ ಬಂದಿದ್ದರಿಂದ ಮೇಲ್ಸೇತುವೆಯಲ್ಲಿ ಜನಜಂಗುಳಿ ಹೆಚ್ಚಾಗಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೋಲ್ಕತ್ತಾದ ಸಂತ್ರಗಚಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಇಬ್ಬರು ಸಾವುಕೋಲ್ಕತ್ತಾದ ಸಂತ್ರಗಚಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಇಬ್ಬರು ಸಾವು

ಕಾಲ್ತುಳಿತದಲ್ಲಿ ಕಾಲಕಾಂತ್ ಸಿಂಗ್ (32) ಮತ್ತು ತಸೀರ್ ಸರ್ದಾರ್ (61) ಮೃತಪಟ್ಟಿದ್ದಾರೆ ಎಂದು ರೈಲ್ವೆ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಮೃತಪಟ್ಟವರ ಕುಟುಂಬಕ್ಕೆ ರೈಲ್ವೆ ಇಲಾಖೆ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ.

ಬಿಹಾರ: ಕಾರ್ತಿಕ ಪೂರ್ಣಿಮೆ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಮೂವರು ಬಲಿಬಿಹಾರ: ಕಾರ್ತಿಕ ಪೂರ್ಣಿಮೆ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಮೂವರು ಬಲಿ

ಪಶ್ಚಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೌರಾ ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಕಾಲ್ತಿಳಿತದ ಘಟನೆ ಬಗ್ಗೆ ತನಿಖೆ ನಡೆಸಲು ರೈಲ್ವೆ ಇಲಾಖೆ ಆದೇಶ ನೀಡಿದೆ....

ಕೋಲ್ಕತ್ತಾ : ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಆಕಸ್ಮಿಕಕೋಲ್ಕತ್ತಾ : ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಆಕಸ್ಮಿಕ

ಒಟ್ಟಿಗೆ ಬಂದ ಎರಡು ರೈಲುಗಳು

ಒಟ್ಟಿಗೆ ಬಂದ ಎರಡು ರೈಲುಗಳು

ಮಂಗಳವಾರ ಸಂಜೆ 6.30ರ ಸುಮಾರಿಗೆ ಸಾಂತ್ರಗಚಿ ರೈಲು ನಿಲ್ದಾಣಕ್ಕೆ ಎರಡು ರೈಲುಗಳು ಒಟ್ಟಿಗೆ ಬಂದವು. ಪ್ರಯಾಣಿಕರು ರೈಲನ್ನು ಏರಲು ಧಾವಂತಗೊಂಡರು ಆಗ ಮೇಲ್ಸೇತುವೆಯಲ್ಲಿ ಜನಜಂಗುಳಿ ಹೆಚ್ಚಾಗಿ ಕಾಲ್ತುಳಿತ ನಡೆಯಿತು. ಘಟನೆಯಲ್ಲಿ ಇಬ್ಬರು ಮೃತಪಟ್ಟರು.

ಆಗ್ನೇಯ ರೈಲ್ವೆ ಹೇಳಿದ್ದೇನು?

ಆಗ್ನೇಯ ರೈಲ್ವೆ ಹೇಳಿದ್ದೇನು?

ನಾಗರ್‌ಕೊಯಿಲ್-ಶಾಲಿಮಾರ್ ಎಕ್ಸ್‌ಪ್ರೆಸ್ ಮತ್ತು ಎರಡು ಸ್ಥಳೀಯ ರೈಲುಗಳು ಏಕಕಾಲಕ್ಕೆ ಸಾಂತ್ರಗಚಿ ರೈಲು ನಿಲ್ದಾಣಕ್ಕೆ ಆಗಮಿಸಿವೆ. ಇದರಿಂದಾಗಿ ಪ್ರಯಾಣಿಕರು ಧಾವಂತಗೊಂಡು ಕಾಲ್ತುಳಿತ ನಡೆದಿದೆ ಎಂದು ಆಗ್ನೇಯ ರೈಲ್ವೆ ಘಟನೆ ಬಗ್ಗೆ ವಿವರಣೆ ನೀಡಿದೆ.

12 ಜನರಿಗೆ ಗಾಯ

12 ಜನರಿಗೆ ಗಾಯ

ಕಾಲ್ತುಳಿತದಲ್ಲಿ 12 ಜನರು ಗಾಯಗೊಂಡರು ಅವರನ್ನು ಹೌರಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಭಾರತೀಯ ರೈಲ್ವೆ ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ, ಸಾಮಾನ್ಯವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ಘೋಷಣೆ ಮಾಡಿದೆ. ಪಶ್ಚಿಮ ಬಂಗಾಳ ಸರ್ಕಾರ ಮೃತಪಟ್ಟವರಿಗೆ 5 ಲಕ್ಷ ಮತ್ತು ಗಾಯಗೊಂಡವರಿಗೆ 1 ಲಕ್ಷ ಪರಿಹಾರ ಘೋಷಿಸಿದೆ.

ತನಿಖೆಗೆ ಆದೇಶ

ತನಿಖೆಗೆ ಆದೇಶ

ಎರಡು ರೈಲುಗಳು ಒಟ್ಟಿಗೆ ಬಂದಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಈ ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಶಾಲಿಮಾರ್-ವಿಶಾಖಪಟ್ಟಣ ಎಕ್ಸ್‌ಪ್ರೆಸ್, ಸಾಂತ್ರಗಚಿ-ಚೆನ್ನೈ ಎಕ್ಸ್‌ಪ್ರೆಸ್ ರೈಲುಗಳು ನಿಲ್ದಾಣಕ್ಕೆ ಬಂದವು. ಇನ್ನು ಕಾಲ್ತುಳಿತ ಘಟನೆ ಬಗ್ಗೆ ತನಿಖೆ ನಡೆಸಲು ಆಗ್ನೇಯ ರೈಲ್ವೆ ಆದೇಶ ನೀಡಿದೆ.

English summary
2 people were killed and 12 injured in a rush-hour stampede at Santragachi railway station over-bridge in West Bengal. Railway department ordered for probe on incident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X