ಭಾರತದ ಹಿರಿಯ ಹುಲಿ 'ರಾಜ' ಇನ್ನು ನೆನಪು ಮಾತ್ರ
ಕೊಲ್ಕತ್ತಾ ಜು.11: ಭಾರತದ ಅತ್ಯಂತ ಹಿರಿಯ ವಯಸ್ಸಿನ ಹುಲಿಗಳಲ್ಲಿ ಒಂದಾಗಿದ್ದ 'ರಾಜ' ಪಶ್ಚಿಮ ಬಂಗಾಳದ ಅಲಿಪುರ್ದಾರ್ ಜಿಲ್ಲೆಯ ಜಲ್ದಪುರ್ ದಲ್ಲಿರುವ ಖೈರಿಬರಿ ಹುಲಿ ಹಾಗೂ ಚಿರತೆ ರಕ್ಷಣಾ ಕೇಂದ್ರದಲ್ಲಿ ಸೋಮವಾರ ಮೃತಪಟ್ಟಿದೆ.
ರಾಯಲ್ ಬೆಂಗಾಲ್ ಹುಲಿಯಾಗಿದ್ದ 'ರಾಜ' ಗೆ 25ವರ್ಷ 10 ತಿಂಗಳು ವಯಸ್ಸಾಗಿತ್ತು. 2018ರಲ್ಲಿ ಸುಂದರಬನ್ ಅರಣ್ಯ ಪ್ರದೇಶದಲ್ಲಿ ಮೊಸಳೆ ದಾಳಿಯಿಂದ 'ರಾಜ'ನ ಕಾಲು ಸಂಪೂರ್ಣವಾಗಿ ಗಾಯಗೊಂಡಿತ್ತು. ನಂತರ ಕೃತಕ ಕಾಲು ಜೋಡಣೆ ಮಾಡಲಾಗಿತ್ತು. ಅಂದಿನಿಂದಲೂ ದಕ್ಷಿಣ ಖೈರಿಬರಿ ಯಲ್ಲಿನ ರಾಯಲ್ ಬೆಂಗಾಲ್ ಹುಲಿ ಪುನರ್ವಸತಿ ಕೇಂದ್ರದಲ್ಲಿ ವಾಸವಾಗಿತ್ತು.
11 ವರ್ಷದ ಹುಲಿ ಖರೀದಿ; ಸೋಮವಾರ ಬೆಳಗ್ಗೆ ಜಲ್ದಪುರ್ ಅರಣ್ಯ ಪ್ರದೇಶದಲ್ಲಿ ಈ ಹುಲಿ ಸಾವನ್ನಪ್ಪಿದೆ ಎಂದು ಅರಣ್ಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಕಳೆದ ಆಗಸ್ಟ್ ನಲ್ಲಿ ಈ 'ರಾಜ' ಹುಲಿಗೆ 25 ನೇ ವರ್ಷದ ಹುಟ್ಟುವನ್ನು ಸಂಭ್ರಮದಿಂದ ಆಚರಿಸಲಾಗಿತ್ತು.

ಇತ್ತೀಚೆಗೆ ಹುಲಿಗೆ ಯಾವುದೇ ರೀತಿಯಲ್ಲಿ ಗಂಭೀರ ಸಮಸ್ಯೆಗಳು ಕಂಡು ಬಂದಿರಲಿಲ್ಲ. ಖೈರಿ ಬರಿ ಹುಲಿ ಮತ್ತು ಚಿರತೆ ಸಂರಕ್ಷಣಾ ಕೇಂದ್ರವು ಈ ಹುಲಿ ಖರೀದಿಸಿದಾಗ ಅದಕ್ಕೆ 11 ವರ್ಷ ವಯಸ್ಸಾಗಿತ್ತು. ಅತ್ಯಂತ ಉದ್ದನೆಯ ಈ 'ರಾಜ' ಸಾವಿನ ದಿನದಂದು 140 ಕೆಜಿ ಇದೆ ಎಂದು ತಿಳಿದು ಬಂದಿದೆ.
ಆದರೆ ಕಳೆದ ಕೆಲವು ದಿನಗಳಿಂದ ಹುಲಿ ಆರೋಗ್ಯದಲ್ಲಿ ತುಸು ಬದಲಾವಣೆಗಳು ಕಂಡು ಬಂದಿತ್ತು. ಹಿರಿಯ ಹುಲಿ ವಯೋಸಹಜ ಸಂಬಂಧಿತ ಸಮಸ್ಯೆಯಿಂದ ಮೃತಪಟ್ಟಿದೆ ಎಂದು ಪಶುಸಂಗೋಪನೆ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಹಿಂದೆ ಹುಲಿ ದಾಳಿಯ ವೇಳೆ ಗಂಭೀರವಾಗಿ ಗಾಯಗೊಂಡಿದ್ದ 'ರಾಜ'ನಿಗೆ ಇದೇ ವೈದ್ಯರು ಕೃತಕ ಕಾಲು ಜೋಡಣೆ ಮಾಡಿದ್ದರು.
ಹುಲಿ ಸ್ಮಾರಕ ನಿರ್ಮಿಸುವ ಚಿಂತನೆ; ಸುದ್ದಿ ತಿಳಿದು ಖೈರಿಬರಿ ಹುಲಿ ಮತ್ತು ಚಿರತೆ ಸಂರಕ್ಷಣಾ ಕೇಂದ್ರಕ್ಕೆ ಆಗಮಿಸಿದ ಅಲಿಪುರ್ದಾರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುರೇಂದ್ರ ಕುಮಾರ್ ಅವರು ಅಗಲಿದ ಹಿರಿಯ ಹುಲಿ 'ರಾಜ' ಗೆ ಅಂತಿಮ ನಮನ ಸಲ್ಲಿಸಿದರು. ರಾಜ ಸ್ಮರಣಾರ್ಥ ಖೈರಿ ಬರಿ ಹುಲಿ ಮತ್ತು ಚಿರತೆ ಸಂರಕ್ಷಣಾ ಕೇಂದ್ರದಲ್ಲಿ ಸ್ಮಾರಕ ನಿರ್ಮಿಸುವ ಚಿಂತನೆಯು ಇದೆ ಎಂದು ತಿಳಿದು ಬಂದಿದೆ.
ಉತ್ತರ ಪ್ರದೇಶದ ಕಾನ್ಪುರದಲ್ಲಿ 26 ವರ್ಷದ 'ಗುಡ್ಡು' ಅತ್ಯಂತ ಹಿರಿಯ ಹುಲಿ 2014 ರ ಜನವರಿಯಲ್ಲಿ ಮೃತಪಟ್ಟಿತ್ತು. ಅದಾದ ನಂತರ ಇದೀಗ ಮತ್ತೊಂದು ಹಿರಿಯ ಹುಲಿ 'ರಾಜ' ಅಸುನೀಗಿರುವುದು ಅರಣ್ಯ ಸಿಬ್ಬಂದಿಯಲ್ಲಿ ಅತೀವ ದುಃಖ ತರಿಸಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications