ಪಶ್ಚಿಮ ಬಂಗಾಳ ಚುನಾವಣೆ ಕಣದಲ್ಲಿ ಪ್ರಧಾನಿ ಮೋದಿ ಗಡ್ಡದ ವಿಷ್ಯ!
ಕೋಲ್ಕತ್ತಾ, ಮಾರ್ಚ್ 26: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ತೃಣಮೂಲ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.
ದೇಶದಲ್ಲಿ ಎಲ್ಲಾ ಕೈಗಾರಿಕೋದ್ಯಮಗಳ ಅಭಿವೃದ್ಧಿ ನಿಂತು ಹೋಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಡ್ಡ ಮಾತ್ರ ಬೆಳೆಯುತ್ತಲೇ ಇದೆ. ಒಂದೊಂದು ಬಾರಿ ಅವರನ್ನು ಅವರೇ ಸ್ವಾಮಿ ವಿವೇಕಾನಂದರು ಎಂದು ಘೋಷಿಸಿಕೊಳ್ಳುತ್ತಾರೆ. ಇನ್ನು ಕೆಲವು ಬಾರಿ ದೇಶದ ಕ್ರೀಡಾಂಗಣಗಳಿಗೆ ನರೇಂದ್ರ ಮೋದಿಯವರು ಅವರ ಹೆಸರನ್ನೇ ಇಟ್ಟುಕೊಳ್ಳುತ್ತಿದ್ದಾರಲ್ಲ ಎಂದು ಪ್ರಶ್ನೆ ಮಾಡಿದರು.
ಪಂಚ ರಾಜ್ಯಗಳಲ್ಲಿ ಬಿಜೆಪಿ ಪಂಚರಾಗ; ಒಲಿಯೋದ್ಯಾರಿಗೆ ಅಧಿಕಾರ ಯೋಗ?
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇತ್ತೀಚಿನ ನಡುವಳಿಕೆಯನ್ನು ನೋಡುತ್ತಿದ್ದರೆ ಆ ಮನುಷ್ಯನಿಗೆ ಎಲ್ಲೋ "ಸ್ಕ್ರೂ ಲೂಸ್" (ತಲೆ ಕೆಟ್ಟಿರಬೇಕು) ಆಗಿರಬೇಕು ಎಂದು ತೃಣಮೂಲ ಕಾಂಗ್ರೆಸ್ ಪಕ್ಷ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಲೇವಡಿ ಮಾಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ 8 ಹಂತದ ಚುನಾವಣೆ:
ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.