ಲೋಕಸಭೆ ಚುನಾವಣೆ : ಕೋಲ್ಕತಾದಿಂದ ಅಮಿತ್ ಶಾ ಕಣಕ್ಕೆ?
ಕೋಲ್ಕತಾ, ಅಕ್ಟೋಬರ್ 31: ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಅಧ್ಯಕ್ಷ ಅಮಿತ್ ಶಾ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೋಲ್ಕತ್ತಾ ಉತ್ತರ ಕ್ಷೇತ್ರದಿಂದ ಕಣಕ್ಕಿಳಿಸಲಿ ಬಿಜೆಪಿ ಚಿಂತಿಸುತ್ತಿದೆ ಎಂದು ಸ್ಥಳೀಯ ಪತ್ರಿಕೆಗಳಲ್ಲಿ ವರದಿಯಾಗಿದೆ.
ಆನಂದ್ ಬಜಾರ್ ಪತ್ರಿಕಾದಲ್ಲಿನ ವರದಿಯಂತೆ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡನೇ ಕ್ಷೇತ್ರವಾಗಿ ಒಡಿಶಾ ರಾಜ್ಯದ ಒಂದು ರಾಜ್ಯವನ್ನು ಆಯ್ಕೆ ಮಾಡಬಹುದಾಗಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕೋಲ್ಕತಾದಿಂದ ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ.
ಪಶ್ಚಿಮ ಬಂಗಾಲ ಹಾಗೂ ಒಡಿಶಾದಲ್ಲಿ ಒಟ್ಟು 63 ಸಂಸತ್ ಸ್ಥಾನಗಳಿವೆ. 2014ರಲ್ಲಿ ಬೆಂಗಾಲದಲ್ಲಿ 42 ಕ್ಷೇತ್ರಗಳ ಪೈಕಿ 2 ಸ್ಥಾನ ಮಾತ್ರ ಗೆಲ್ಲಲು ಬಿಜೆಪಿಗೆ ಸಾಧ್ಯವಾಗಿತ್ತು. ಒಡಿಶಾದಲ್ಲಿ 21 ಸ್ಥಾನಗಳ ಪೈಕಿ 1 ಕ್ಷೇತ್ರದಲ್ಲಿ ಮಾತ್ರ ಜಯಿಸಿತ್ತು.

ಬಿಜೆಪಿಯ ನಂ.1 ಹಾಗೂ ನಂ.2 ನಾಯಕರು ಈ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮೂಲಕ ಎದುರಾಳಿಗಳಿಗೆ ಅಚ್ಚರಿ, ಆಘಾತ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿಯಿದೆ.
ಮೋದಿ ಅವರು ಒಡಿಶಾದ ಧಾರ್ಮಿಕ ತಾಣ ಪುರಿಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ. ವಾರಣಾಸಿ ಕ್ಷೇತ್ರದ ಹಾಲಿ ಸಂಸದರಾಗಿರುವ ಮೋದಿ ಅವರು ಕರಾವಳಿ ತೀರದ ನಗರಿ ಪುರಿಯನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ.
ಅಮಿತ್ ಶಾ ಅವರು ಕೋಲ್ಕತಾ ಉತ್ತರ ಕ್ಷೇತ್ರವಲ್ಲದೆ, ಅಸಾನೋಲ್ ಕ್ಷೇತ್ರವನ್ನು ಪರಿಗಣಿಸುತ್ತಿದ್ದಾರೆ. 2014ರಲ್ಲಿ ಬಿಜೆಪಿ ಈ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರ ಹಾಕಿತ್ತು. ಶೇ 37ರಷ್ಟು ಮತಪಾಲು ಗಳಿಸಿ ಜಯ ದಾಖಲಿಸಿತ್ತು. ಟಿಎಂಸಿ ಮತ ಪಾಲು ಶೇ30.6ಕ್ಕೆ ಕುಸಿಯಿತು. ಸಿಪಿಐಎಂ ಶೇ22ರಷ್ಟು ಮತಪಾಲು ಪಡೆದು ಮೂರನೇ ಸ್ಥಾನಕ್ಕೆ ಕುಸಿದಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications