ಯಾವುದೇ ಪ್ರತಿಭಟನೆಗಳಿಗೆ ಅವಕಾಶ ನೀಡಬಾರದು: ಮುಸ್ಲಿಂ ಇಮಾಮ್ಸ್ ಸಂಘ
ಕೋಲ್ಕತಾ, ಜೂ.13: ''ಪ್ರವಾದಿ ಮೊಹಮ್ಮದ್ರನ್ನು ಅವಮಾನಿಸಿದ ಬಿಜೆಪಿ ನಾಯಕರ ವಿರುದ್ಧ ಕೋಲ್ಕತಾದಲ್ಲಿ ಯಾವುದೇ ಪ್ರತಿಭಟನೆಗಳಿಗೆ ಅವಕಾಶ ನೀಡಬಾರದು. ಹಿಂಸಾತ್ಮಕ ಕೃತ್ಯಗಳಿಂದ ಜನರನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ,'' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಲ್ಲಿ ಬಂಗಾಳದ ಮುಸ್ಲಿಂ ಧರ್ಮಗುರುಗಳ ಸಂಘ ಭಾನುವಾರ ತಡರಾತ್ರಿ ಆಗ್ರಹಿಸಿದೆ.
ಆಂದೋಲನ, ಪ್ರತಿಭಟನೆ ಹೆಸರಿನಲ್ಲಿ ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗದಂತೆ, ಆ ಮೂಲಕ ಪಟ್ಟಭದ್ರ ಹಿತಾಸಕ್ತಿಗಳ ಕೈ ಗೊಂಬೆಯಾಗದಂತೆ ಬಂಗಾಳದ ಮುಸ್ಲಿಂ ಇಮಾಮ್ಸ್ ಸಂಘ ಅಲ್ಪಸಂಖ್ಯಾತ ಸಮುದಾಯದ ಜನರಲ್ಲಿ ಮನವಿ ಮಾಡಿಕೊಂಡಿದೆ.
ಈ ಕುರಿತು ಮನವಿ ಮಾಡಿರುವ ಇಮಾಮ್ಸ್ ಸಂಘದ ಅಧ್ಯಕ್ಷ ಎಂ.ಡಿ.ಯಾಹಿಯಾ ಅವರ ವಿಡಿಯೋ ಹರಿದಾಡುತ್ತಿದೆ. ವಿಡಿಯೋದಲ್ಲಿ, ಪ್ರತಿಭಟನೆ, ಕಲ್ಲು ತೂರಾಟ, ಪೊಲೀಸರ ಮೇಲಿನ ದಾಳಿಯಿಂದ ಆಸ್ತಿಪಾಸ್ತಿಗಳು ಹಾನಿಯಾಗಿ ನಷ್ಟ ಉಂಟಾಗುತ್ತದೆ. ಹಿರಿಯರು, ಮಹಿಳೆಯರು ಮಕ್ಕಳು ಸೇರಿದಂತೆ ಸಾರ್ವಜನಿಕರರು ತೊಂದರೆ ಅನುಭವಿಸಬೇಕಾಗುತ್ತದೆ. ಅಲ್ಲದೇ ಆರ್ಥಿಕ ಪರಿಸ್ಥಿತಿಯು ಸಹ ಹದಗೆಡುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಸೇರಿದಂತೆ ಬಿಜೆಪಿ ಇಬ್ಬರು ನಾಯಕರು ಪ್ರವಾದಿಗಳ ವಿರುದ್ಧ ಹೇಳಿಕೆ ನೀಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಆದರೆ ಇದರ ವಿರುದ್ಧ ಈಗಾಗಲೇ ಹೌರಾ, ಮರ್ಸಿದಾಬಾದ್ ಮತ್ತು ನಾಡಿಯಾ ಜಿಲ್ಲೆಗಳ ಹಲವಡೆ ಹಿಂಸಾತ್ಮಕ ಪ್ರತಿಭಟನೆಗಳು ಜರುಗಿವೆ. ಇಂತಹ ಕೃತ್ಯಗಳಿಂದ ಜನರನ್ನು ಹಿಡಿದಿಟ್ಟು ಕೊಳ್ಳತ್ತೇವೆ ಎಂದುಕೊಂಡರೆ ಅದು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.
ಪೊಲೀಸರ ಮೇಲೆ ಕಲ್ಲೂ ತೂರುವುದು, ಲಾಠಿ ಚಾರ್ಜನಿಂದ ಖ್ಯಾತಿ ಹೆಚ್ಚಿಸಿಕೊಳ್ಳಲು ಆಗದು. ಪ್ರವಾದಿ ವಿರುದ್ಧ ಹೇಳಿಕೆ ನೀಡಿರುವ ಬಿಜೆಪಿ ನಾಯಕರ ವಿರುದ್ಧ ಕ್ರಮ ಜರುಗಿಸಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಪ್ರತಿಭಟಿಸಬೇಕು. ಪ್ರತಿಭಟನೆಗೆ ಎಲ್ಲರಿಗೂ ಸ್ವಾತಂತ್ರ್ಯವಿದೆ ಎಂದು ಅವರು ಪುನರುಚ್ಚರಿಸಿದರು.
ಬಿಜೆಪಿ ವಿರುದ್ಧ ಮಮತಾ ಗುಡುಗು
Recommended Video
ಪ್ರವಾದಿ ವಿರುದ್ಧ ಹೇಳಿಕೆ ನೀಡಿರುವ ಇಬ್ಬರು ನಾಯಕರು ಬಿಜೆಪಿಯವರು. ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಕೃತ್ಯಗಳಿಗೆ ಬಿಜೆಪಿ ಕಾರಣ. ಇದು ಬಿಜೆಪಿಯ ಪಾಪ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು. ಬಿಜೆಪಿ ಮಾಡಿದ ತಪ್ಪಿಗೆ ರಸ್ತೆ, ರೈಲು ಮಾರ್ಗ ತಡೆದು ಪ್ರತಿಭಟನಾಕಾರರು ಜನರಿಗೆ ತೊಂದರೆ ಕೊಡುತ್ತಿದ್ದಾರೆ. ಬಿಜೆಪಿ ಮಾಡಿರುವ ಪಾಪದಿಂದ ಜನರು ಏಕೆ ಕಷ್ಟ ಅನುಭವಿಸಬೇಕು ಎಂದು ಈ ಹಿಂದೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ಹೊರಹಾಕಿದ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications