ಗೂಳಿಗೆ ಕೆಂಪು ಬಟ್ಟೆ ತೋರಿಸಿದಂತಾಗಿದೆ "ಜೈಶ್ರೀರಾಮ್" ಘೋಷಣೆ; ಹರಿಯಾಣ ಸಚಿವ
ಕೋಲ್ಕತ್ತಾ, ಜನವರಿ 23: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಕೋಲ್ಕತ್ತಾದ ವಿಕ್ಟೋರಿಯಾ ಮೆಮೋರಿಯಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಸಂದರ್ಭ ಸಿಎಂ ಮಮತಾ ಬ್ಯಾನರ್ಜಿ ಭಾಷಣ ಮಾಡಲು ನಿರಾಕರಿಸಿದ ಸಂಗತಿಯೂ ನಡೆಯಿತು.
ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಉಪಸ್ಥಿತರಿದ್ದು, ಭಾಷಣಕ್ಕೆ ಮಮತಾ ಬ್ಯಾನರ್ಜಿ ವೇದಿಕೆ ಮೇಲೆ ಬರುತ್ತಿದ್ದಂತೆಯೇ ಕೆಲವರು "ಜೈಶ್ರೀರಾಮ್" ಎಂದು ಘೋಷಣೆ ಕೂಗಿದ್ದಾರೆ. ಇದರಿಂದ ಸಿಡಿಮಿಡಿಗೊಂಡ ಮಮತಾ ಬ್ಯಾನರ್ಜಿ ಕೆಲವೇ ಮಾತುಗಳನ್ನು ಆಡಿ ವೇದಿಕೆಯಿಂದ ನಿರ್ಗಮಿಸಿದರು.
"ಇದು ಸರ್ಕಾರಿ ಕಾರ್ಯಕ್ರಮ. ಯಾವುದೇ ಪಕ್ಷದ ಕಾರ್ಯಕ್ರಮವಲ್ಲ. ಈ ಕಾರ್ಯಕ್ರಮದಲ್ಲಿ ಘನತೆ ಕಾಯ್ದುಕೊಳ್ಳಬೇಕು" ಎಂದು ಕೋಪದಿಂದಲೇ ಭಾಷಣ ಆರಂಭಿಸಿ ನೇತಾಜಿ ಅವರ ಜನ್ಮದಿನವನ್ನು ಕೋಲ್ಕತ್ತಾದಲ್ಲಿ ಆಚರಿಸಲು ತೀರ್ಮಾನಿಸಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಎಂದಷ್ಟೇ ಹೇಳಿ ವೇದಿಕೆಯಿಂದ ನಿರ್ಗಮಿಸಿದರು.
ಆನಂತರ ಈ ಘಟನೆ ಕುರಿತು ಚರ್ಚೆಗಳೂ ಆರಂಭವಾಗಿವೆ. ಬಿಜೆಪಿ-ತೃಣಮೂಲ ಕಾಂಗ್ರೆಸ್ ನಡುವಿದ್ದ ಸಮರದ ಬೆಂಕಿಗೆ ತುಪ್ಪ ಸುರಿದಂತೆ ಆಗಿದೆ.
ಈ ಸಂಗತಿ ಕುರಿತು ಪ್ರತಿಕ್ರಿಯಿಸಿರುವ ಹರಿಯಾಣ ಸಚಿವ ಅನಿಲ್ ವಿಜ್, "ಮಮತಾ ಬ್ಯಾನರ್ಜಿಗೆ ಜೈಶ್ರೀರಾಮ್ ಎಂದು ಘೋಷಣೆ ಕೂಗಿರುವುದು ಗೂಳಿಗೆ ಕೆಂಪು ಬಟ್ಟೆ ತೋರಿಸಿದಂತೆ ಆಗಿದೆ. ಹೀಗಾಗೇ ತಮ್ಮ ಭಾಷಣ ನಿಲ್ಲಿಸಿದ್ದಾರೆ" ಎಂದು ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದಾರೆ.

ತೃಣಮೂಲ ಕಾಂಗ್ರೆಸ್ ಸದಸ್ಯರು ಜೈಶ್ರೀರಾಮ್ ಘೋಷಣೆ ಕೂಗಿರುವ ನಡೆಯನ್ನು ಖಂಡಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಎಂಪಿ ಡೇರಕ್ ಒಬ್ರಿಯಾನ್, ಮಮತಾ ಬ್ಯಾನರ್ಜಿ ಮಾತನಾಡಿದ ವಿಡಿಯೋ ಹಂಚಿಕೊಂಡು, "ಘನತೆ ಎಂಬುದನ್ನು ಕಲಿಸಲು ಸಾಧ್ಯವಿಲ್ಲ. ದಡ್ಡ ಜನರಿಗೆ ಘನತೆಯಾಗಿ ಇರಲು ಹೇಳಿಕೊಡಲೂ ಸಾಧ್ಯವಿಲ್ಲ. ಈ ವಿಡಿಯೋ ನೋಡಿ, ಘನತೆಗೆ ತಕ್ಕಂತೆ ಉತ್ತರ ನೀಡಿದ ಸಿಎಂ ಮಮತಾ ಬ್ಯಾನರ್ಜಿಯವರನ್ನು ನೋಡಿ" ಎಂದು ಟ್ವೀಟ್ ಮಾಡಿದ್ದಾರೆ.
"ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ರಾಜಕೀಯ, ಧರ್ಮದ ಘೋಷಣೆಗಳನ್ನು ಕೂಗುವುದನ್ನು ನಾನು ಖಂಡಿಸುತ್ತೇನೆ" ಎಂದು ಟಿಎಂಸಿ ಲೋಕಸಭಾ ಸಂಸದೆ ನುಸ್ರತ್ ಜಹಾನ್ ರೂಹಿ ಕೂಡ ಟ್ವೀಟ್ ಮಾಡಿದ್ದಾರೆ. ಒಟ್ಟಾರೆ ಬಿಜೆಪಿ-ಟಿಎಂಸಿ ನಡುವೆ ಇದ್ದ ಕದನ ಈ ಘಟನೆಯಿಂದ ಮತ್ತಷ್ಟು ಹೆಚ್ಚಾದಂತೆ ಆಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications