'ಹಿಂದೂ ಪಾಕಿಸ್ತಾನ' ಹೇಳಿಕೆ ನೀಡಿದ್ದ ಸಂಸದ ಶಶಿ ತರೂರ್ ಗೆ ಬಂಧನ ವಾರೆಂಟ್
ಕೋಲ್ಕತ್ತಾ (ಪಶ್ಚಿಮ ಬಂಗಾಲ), ಆಗಸ್ಟ್ 13: 'ಹಿಂದೂ ಪಾಕಿಸ್ತಾನ' ರಚನೆ ಬಗ್ಗೆ ಕಳೆದ ವರ್ಷ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಸಂಸದ (ತಿರುವನಂತಪುರ ಲೋಕಸಭಾ ಕ್ಷೇತ್ರ) ಶಶಿ ತರೂರ್ ಅವರಿಗೆ ಕೋಲ್ಕತ್ತಾ ಕೋರ್ಟ್ ಮಂಗಳವಾರ ಬಂಧನ ವಾರೆಂಟ್ ಹೊರಡಿಸಿದೆ. ವಕೀಲರಾದ ಸುಮೀತ್ ಚೌಧರಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಾರೆಂಟ್ ಹೊರಡಿಸಲಾಗಿದೆ.
ಕಳೆದ ವರ್ಷ ಜುಲೈನಲ್ಲಿ ಶಶಿ ತರೂರ್ ಹೇಳಿಕೆ ನೀಡಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಗೆದ್ದಲ್ಲಿ ಅದು 'ಹಿಂದೂ ಪಾಕಿಸ್ತಾನ್' ರಚನೆಯ ಸನ್ನಿವೇಶವನ್ನು ನಿರ್ಮಿಸುತ್ತದೆ ಎಂದು ಹೇಳಿದ್ದರು.
"ಒಂದು ವೇಳೆ ಅವರು (ಬಿಜೆಪಿ) ಲೋಕಸಭೆಯಲ್ಲಿ ಗೆಲುವು ಪುನರಾವರ್ತಿಸಿದರೆ ನಮಗೆ ಅರ್ಥವಾಗಿರುವ ನಮ್ಮ ಪ್ರಜಾತಂತ್ರ ಸಂವಿಧಾನ ಉಳಿಯುವುದಿಲ್ಲ ಸಂವಿಧಾನದಿಂದ ಅವರಿಗೆ ತೆಗೆಯಬೇಕಾದ ಅಂಶಗಳನ್ನು ತೆಗೆದು, ಭಾರತಕ್ಕೆ ಹೊಸ ಸಂವಿಧಾನ ಬರೆಯುತ್ತಾರೆ" ಎಂದಿದ್ದರು.

ಹೊಸ ಸಂವಿಧಾನವು ಹಿಂದೂ ರಾಷ್ಟ್ರದ ಸಿದ್ಧಾಂತದೊಂದಿಗೆ ರಚನೆ ಆಗುತ್ತದೆ. ಅದರಲ್ಲಿ ಅಲ್ಪಸಂಖ್ಯಾತರಿಗೆ ಸಮಾನತೆ ತೆಗೆಯಲಾಗುತ್ತದೆ. ಆ ಮೂಲಕ ಹಿಂದೂ ಪಾಕಿಸ್ತಾನ್ ನಿರ್ಮಾಣ ಆಗುತ್ತದೆ. ಮತ್ತು ನಮ್ಮ ಸ್ವಾತಂತ್ರ್ಯ ಹೋರಾಟದ ಮಹಾ ನಾಯಕರಾದ ಮಹಾತ್ಮ ಗಾಂಧಿ, ನೆಹರೂ, ಸರ್ದಾರ್ ಪಟೇಲ್, ಮೌಲಾನಾ ಆಜಾದ್ ಮತ್ತಿತರರು ಹೋರಾಟ ನಡೆಸಿರುವುದು ಇದಕ್ಕಾಗಿ ಅಲ್ಲ ಎಂದಿದ್ದರು ಶಶಿ ತರೂರ್.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications