ಕೊರೊನಾ ಸೋಂಕಿನಿಂದ ವ್ಯಕ್ತಿ ಸಾವು:2 ದಿನ ಐಸ್ಕ್ರೀಂ ಫ್ರೀಜರ್ನಲ್ಲಿ ದೇಹ
ಕೊಲ್ಕತ್ತ, ಜುಲೈ 2: ಕೊರೊನಾ ಸೋಂಕಿನಿಂದ ಮೃತಪಟ್ಟ 71 ವರ್ಷದ ವ್ಯಕ್ತಿಯ ಮೃತದೇಹವನ್ನು 2 ದಿನಗಳ ಕಾಲ ಐಸ್ಕ್ರೀಂ ಫ್ರೀಜರ್ನಲ್ಲಿ ಇರಿಸಿರುವ ಘಟನೆ ಕೊಲ್ಕತ್ತದಲ್ಲಿ ನಡೆದಿದೆ.
Recommended Video
ಅವರು ಮನೆಯಲ್ಲಿಯೇ ಸಾವನ್ನಪ್ಪಿದ್ದರು, ಕೊರೊನಾ ಪರೀಕ್ಷೆ ಮಾಡಿಸದೆ ಅಂತ್ಯಕ್ರಿಯೆ ನಡೆಸುವಂತಿಲ್ಲ ಎಂದು ತಿಳಿಸಲಾಗಿತ್ತು. ಕೊರೊನಾ ಪರೀಕ್ಷೆ ಮಾಡಿ ವರದಿ ಬರಲು ಕನಿಷ್ಠ 48 ಗಂಟೆಗಳ ಸಮಯ ಬೇಕು.
ಅದಕ್ಕೂ ಮುನ್ನ ಮೃತದೇಹವನ್ನು ಶವಾಗಾರದಲ್ಲಿ ಇರಿಸಲು ಕೂಡ ಅನುಮತಿ ಇಲ್ಲದ ಕಾರಣ ಅನಿವಾರ್ಯವಾಗಿ ಎರಡು ದಿನ ಮೃತದೇಹವನ್ನು ಕುಟುಂಬದವರು ಐಸ್ಕ್ರೀಂ ಫ್ರೀಜರ್ನಲ್ಲಿ ಇರಿಸಿದ್ದರು.
ಕೊರೊನಾ ಪರೀಕ್ಷೆ ನಡೆಸದಿದ್ದರೆ ಮರಣ ಪ್ರಮಾಣಪತ್ರ ಕೂಡ ಲಭ್ಯವಾಗುವುದಿಲ್ಲ. ಆರೋಗ್ಯ ಇಲಾಖೆಎಯಾಗಿಲಿ, ಸ್ಥಳೀಯ ಆಡಳಿತವಾಗಲಿ, ಪೊಲೀಸ್, ರಾಜಕಾರಣಗಳು ಯಾರೂ ಕೂಡ ಸಹಾಯ ಮಾಡಲಿಲ್ಲ.

ಮಂಗಳವಾರ ಮನೆಗೆ ಐಸ್ಕ್ರೀಂ ಫ್ರೀಜರ್ ತಂದು ಅದರೊಳಗೆ ಶವವನ್ನು ಇರಿಸಿದ್ದರು. ಅವರ ಸಾವನ ವರದಿ ಕೊರೊನಾ ಪಾಸಿಟಿವ್ ಬಂದಿತ್ತು.ವ್ಯಕ್ತಿ ಮೃತಪಟ್ಟು 48 ಗಂಟೆಗಳ ಬಳಿಕ ಶವವನ್ನು ಹೊರತೆಗೆಯಲಾಗಿದೆ. ವ್ಯಕ್ತಿ ಮೃತದೇಹವಿದ್ದ ಮನೆಯನ್ನು ಸ್ಯಾನಿಟೈಸ್ ಮಾಡಲಾಗಿದೆ.
ಸೋಮವಾರ ಉಸಿರಾಟದ ತೊಂದರೆಯಿದ್ದ ಕಾರಣ ಆಸ್ಪತ್ರೆಗೆ ತೆರಳಿದ್ದರು. ಕೊರೊನಾ ಟೆಸ್ಟ್ ಮಾಡಿಸಲು ತಿಳಿಸಿದ್ದರು. ಬಳಿಕ ಆರೋಗ್ಯ ಮತ್ತಷ್ಟು ಹದಗೆಟ್ಟ ಕಾರಣ ಮನೆಗೆ ಹಿಂದಿರುಗಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications