ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಲ್ಕತ್ತಾದಲ್ಲಿ RSS ಕಾರ್ಯಕರ್ತನ ಹತ್ಯೆ ಪ್ರಕರಣ: ಕಾರಣ ಬಾಯ್ಬಿಟ್ಟ ಆರೋಪಿ

|
Google Oneindia Kannada News

ಕೊಲ್ಕತ್ತಾ, ಅಕ್ಟೋಬರ್ 15: ಕೊಲ್ಕತ್ತಾದಲ್ಲಿ ಅಕ್ಟೋಬರ್ 10 ರಂದು ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನೊಬ್ಬನ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು, ಆತ ತಾನು ಕೊಲೆ ಮಾಡಲು ಕಾರಣವೇನು ಎಂದು ಬಾಯ್ಬಿಟ್ಟಿದ್ದಾನೆ.

ಹೃದಯಾಘಾತ ಸರಣಿ ಸಾವು, ಕೇರಳದ ನಿಗೂಢ ಹತ್ಯೆ ರಹಸ್ಯ ಬಯಲುಹೃದಯಾಘಾತ ಸರಣಿ ಸಾವು, ಕೇರಳದ ನಿಗೂಢ ಹತ್ಯೆ ರಹಸ್ಯ ಬಯಲು

ತಾನು ಹಣಕ್ಕಾಗಿ ಈ ಕೊಲೆ ಮಾಡಿದ್ದೇನೆ ಎಂದು ಆರೋಪಿ ಉತ್ಪಾಲ್ ಬೆಹೆರಾ ಒಪ್ಪಿಕೊಂಡಿದ್ದಾನೆ. ಉತ್ಪಾಲ್, ಬೊಂಧು ಪಾಲ್ ಅವರಿಗೆ 24,000 ರೂಪಾಯಿಗಳನ್ನು ನೀಡಿದ್ದರು. ಅದನ್ನು ವಾಪಸ್ ಕೇಳಲು ಹೋದಾಗ ಅವಾಚ್ಯ ಪದಗಳಿಂದ ನಿಂದಿಸಿದ್ದರು. ಆದ್ದರಿಂದ ಪ್ರತೀಕಾರ ತೀರಿಸಿಕೊಳ್ಳಲು ನಾನು ಅವರನ್ನು ಕೊಂದೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲಿಸರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ RSS ಕಾರ್ಯಕರ್ತ, ಗರ್ಭಿಣಿ ಪತ್ನಿ, ಮಗುವಿನ ಬರ್ಬರ ಹತ್ಯೆಪಶ್ಚಿಮ ಬಂಗಾಳದಲ್ಲಿ RSS ಕಾರ್ಯಕರ್ತ, ಗರ್ಭಿಣಿ ಪತ್ನಿ, ಮಗುವಿನ ಬರ್ಬರ ಹತ್ಯೆ

ಅಕ್ಟೋಬರ್ 10 ರಂದು ಆರೆಸ್ಸೆಸ್ ಕಾರ್ಯಕರ್ತ ಬೊಂಧು ಪ್ರಕಾಶ್ ಪಾಲ್, ಗರ್ಭಿಣಿ ಪತ್ನಿ ಬ್ಯೂಟಿ ಪಾಲ್ ಮತ್ತು ಪುತ್ರ ಆನಂದ್ ಪಾಲ್ ಅವರನ್ನು ಅವರ ಮನೆಯಲ್ಲೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಮಾಡಲಾಗಿತ್ತು.

Kolkata RSS Workers Murder Case: Accused Tell The Reason

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ನ ಜಿಯಾಗಂಜ್ ಎಂಬಲ್ಲಿ ಈ ಕುಟುಂಬ ವಾಸವಿತ್ತು. ಕೆಲವು ದುಷ್ಕರ್ಮಿಗಳು ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಕೊಲೆ ಮಾಡಲು ಬಳಸಿದ ಆಯುಧವನ್ನು ಪೊಲೀಸರು ಪತ್ತೆ ಮಾಡಿದ್ದರು. ನಂತರ ಉತ್ಪಾಲ್ ಬೆಹೆರಾ ಎಂಬ ಆರೋಪಿಯನ್ನು ಬಂಧಿಸಲಾಗಿತ್ತು.

English summary
RSS Worker's Family murder Case in West Bengal: Accused Admits He Killed RSS worker For Money
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X