ಪ್ರಧಾನಿ ಹುದ್ದೆಗೆ ರಾಹುಲ್ ಹೆಸರು ಒಪ್ಪಲು ಈಗಲೂ ಮಮತಾ ತಯಾರಿಲ್ಲ
Recommended Video

ಕೋಲ್ಕತಾ, ಡಿಸೆಂಬರ್ 19: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಘಾತ ನೀಡಲು ವಿರೋಧಪಕ್ಷಗಳ ಮಹಾ ಮೈತ್ರಿಕೂಟ ಸಿದ್ಧತೆ ನಡೆಸುತ್ತಿದೆ. ಇಲ್ಲಿ ಅನೇಕ ನಾಯಕರು ಸೇರಿಕೊಂಡಿದ್ದಾರೆ.
ಕಾಂಗ್ರೆಸ್ನ ಮುಂದಾಳತ್ವವನ್ನು ಎಲ್ಲ ಪಕ್ಷಗಳು ಅನಿವಾರ್ಯವಾಗಿ ಒಪ್ಪಿಕೊಂಡರೂ, ಪ್ರಧಾನಿ ಹುದ್ದೆಯ ಅಭ್ಯರ್ಥಿಯನ್ನು ಘೋಷಣೆ ಮಾಡುವ ವಿಚಾರದಲ್ಲಿ ಸಹಮತ ಮೂಡುತ್ತಿಲ್ಲ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಪ್ರಸ್ತಾವ ಮುಂದಿಟ್ಟು ಮೂರು ದಿನಗಳಾಗಿವೆ. ಈ ಆಯ್ಕೆಯ ಬಗ್ಗೆ ಮಾತನಾಡದೆ ಇರಲು ಮಮತಾ ಬ್ಯಾನರ್ಜಿ ಉದ್ದೇಶಿಸಿದ್ದಾರೆ.

ಪ್ರಧಾನಿ ಅಭ್ಯರ್ಥಿ ಬಗ್ಗೆ ಮಾತನಾಡಲು ಇದು ಸೂಕ್ತ ಸಮಯವಲ್ಲ ಎಂದು ಮಮತಾ ಅಭಿಪ್ರಾಯಪಟ್ಟಿದ್ದಾರೆ.
'ಯಾರು ಪ್ರಧಾನಿ ಆಗಬೇಕು ಎಂಬುದರ ಬಗ್ಗೆ ಮಾತನಾಡಲು ಇದು ಸರಿಯಾದ ಗಳಿಗೆಯಲ್ಲ. ನಾವೆಲ್ಲರೂ ಒಳ್ಳೆಯ ರೀತಿಯಲ್ಲಿ ಒಟ್ಟಿಗೆ ಕೆಲಸ ಮಾಡಬೇಕಿದೆ. ಚುನಾವಣೆ ಬಳಿಕ ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸಲಾಗುವುದು' ಎಂದು ಮಮತಾ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಎಸ್ಪಿ, ಬಿಎಸ್ಪಿ ಮತ್ತು ಆರ್ ಎಲ್ಡಿ ಪಕ್ಷಗಳು ಸೀಟು ಹಂಚಿಕೆ ಮಾಡಿಕೊಂಡಿರುವುದನ್ನು ಮಮತಾ ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಈ ಸೀಟು ಹಂಚಿಕೆ ಒಪ್ಪಂದದಲ್ಲಿ ಇಲ್ಲದೆ ಇದ್ದರೆ ಏನಂತೆ? ಇದು ಸ್ಥಳೀಯ ಮಟ್ಟದ ಹೊಂದಾಣಿಕೆ. ಕೆಲವು ಸ್ಥಳಗಳಲ್ಲಿ ಕಾಂಗ್ರೆಸ್ ಒಂಟಿಯಾಗಿ ಚುನಾವಣೆ ಎದುರಿಸಬೇಕಾಗುತ್ತದೆ ಎಂದು ಮಮತಾ, ಕಾಂಗ್ರೆಸ್ಗೆ ಪರಿಪೂರ್ಣ ಬೆಂಬಲ ನೀಡುತ್ತಿಲ್ಲ ಎಂದು ಸೂಚ್ಯವಾಗಿ ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications