ಅಫಿಡವಿಟ್ನಲ್ಲಿ ಪತ್ನಿ ಹೆಸರೇಕಿಲ್ಲ? ಕಾಂಗ್ರೆಸ್ ಅಭ್ಯರ್ಥಿಗೆ ಮಮತಾ ತರಾಟೆ
ಕೋಲ್ಕತಾ, ಏಪ್ರಿಲ್ 18: ಪಶ್ಚಿಮ ಬಂಗಾಳದ ಬೆರ್ಹಂಪೋರ್ನಲ್ಲಿ ಚುನಾವಣಾ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಅಭ್ಯರ್ಥಿಯು ಅಫಿಡವಿಟ್ನಲ್ಲಿ ತಮ್ಮ ಮೊದಲ ಹೆಂಡತಿಯ ವಿವರ ನಮೂದಿಸದಿರುವುದರ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.
ಬೆರ್ಹಂಪೋರ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಧೀರ್ ಚೌಧುರಿ ಅವರನ್ನು ಮಣಿಸಲು ಮೂರು ದಿನದಲ್ಲಿ ಸತತ ನಾಲ್ಕು ಸಭೆಗಳನ್ನು ನಡೆಸಿರುವ ಮಮತಾ, ಈಗ ಅವರ ವಿರುದ್ಧ ವೈಯಕ್ತಿಕ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಚೌಧುರಿ ಅವರು ಪ್ರತಿ ವಾಗ್ದಾಳಿ ನಡೆಸಿದ್ದಾರೆ.
'ಅವರು ಏಕೆ ತಮ್ಮ ಹಳೆಯ ಪತ್ನಿಯ ಹೆಸರನ್ನು ನಮೂದಿಸಿಲ್ಲ? ಅವರು ಈಗ ಏನು ಮಾಡುತ್ತಿದ್ದಾರೆ ಎನ್ನುವುದು ನನಗೆ ಸಂಬಂಧಿಸದ ವಿಚಾರ. ಆದರೆ, ಚೌಧುರಿ ಅವರ ಅಫಿಡವಿಟ್ನಲ್ಲಿ ಪತ್ನಿಯ ಹೆಸರು ಏಕೆ ಇಲ್ಲ? ಇದು ಸತ್ಯವನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಸಮವಲ್ಲವೇ? ಎಂದು ಮಮತಾ ಕಿಡಿಕಾರಿದ್ದಾರೆ.

ಮಮತಾ ಪ್ರಶ್ನೆಗಳಿಗೆ ಅಷ್ಟೇ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಚೌಧುರಿ, 'ನನ್ನ ಬಗ್ಗೆ ರಾಜಕೀಯವಾಗಿ ಹೇಳಲು ಮಮತಾ ಬ್ಯಾನರ್ಜಿ ಅವರಿಗೆ ಏನೂ ಉಳಿದಿಲ್ಲ. ಹೀಗಾಗಿ ಅವರು ವಾಗ್ದಾಳಿಯನ್ನು ವೈಯಕ್ತಿಕ ಮಟ್ಟಕ್ಕೆ ಇಳಿಸಿದ್ದಾರೆ. ವೈಯಕ್ತಿಕ ದಾಳಿಗಳು ಮುರ್ಷಿದಾಬಾದ್ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ಗೆ ಸಹಾಯ ಮಾಡುವುದಿಲ್ಲ' ಎಂದು ಹೇಳಿದ್ದಾರೆ.
ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಾಂಗ್ರೆಸ್ನ ಪ್ರಭಾವಿ ಮುಖಂಡರಾಗಿರುವ ಚೌಧುರಿ, ನಾಲ್ಕು ಬಾರಿ ಬೆರ್ಹಂಪೋರ್ ಕ್ಷೇತ್ರದಿಂದ ಸಂಸತ್ಗೆ ಆಯ್ಕೆಯಾಗಿದ್ದಾರೆ.
ಈ ಜಿಲ್ಲೆಯಲ್ಲಿ ಮೂರು ಲೋಕಸಭಾ ಕ್ಷೇತ್ರಗಳಿವೆ. ಈ ಮೂರೂ ಸಾಮಾನ್ಯವಾಗಿ ಕಾಂಗ್ರೆಸ್ ಹಿಡಿತದಲ್ಲಿಯೇ ಇರುತ್ತವೆ. ಚೌಧುರಿ ಅವರ ಎದುರು ಮಮತಾ ಆಪ್ತ ಸುಭೇಂದು ಅಧಿಕಾರಿ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications