ವಲಸೆ ಕಾರ್ಮಿಕರ ಖಾತೆಗೆ 10 ಸಾವಿರ ರೂ. ಹಾಕಿ: ದೀದಿ ಕೇಂದ್ರಕ್ಕೆ ಆಗ್ರಹ

ಕೊಲ್ಕತಾ,ಜೂನ್3: ಕೊರೊನಾ ವೈರಸ್‌ನಿಂದ ಸಂಕಷ್ಟಕ್ಕೆ ಸಿಲುಕಿರುವವರಲ್ಲಿ ವಲಸೆ ,ಅಸಂಘಟಿತ ವಲಯದ ಕಾರ್ಮಿಕರೇ ಹೆಚ್ಚು.ಹೀಗಾಗಿ ಅವರ ಖಾತೆಗಳಿಗೆ 10 ಸಾವಿರ ರೂ ಜಮೆ ಮಾಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

Recommended Video

      ಏಕದಿನದಲ್ಲಿ ವೇಗದ 10,000 ರನ್ ದಾಖಲೆ ಬರೆದ ಟಾಪ್ 5 ಬ್ಯಾಟ್ಸ್‌ಮನ್‌ಗಳು | virat kohli | Oneindia Kannada

      ಸಾಕಷ್ಟು ವಲಸೆ ಕಾರ್ಮಿಕರಿಗೆ ಕೆಲಸವೂ ಇಲ್ಲ, ತಮ್ಮ ಊರಿಗೆ ಹಿಂದಿರುಗಿದರೆ ಮನೆಯಲ್ಲೂ ಹಣವಿಲ್ಲ, ಆಹಾರವನ್ನು ಪಡೆಯುವುದೂ ಕೂಡ ಕಷ್ಟವಾಗಿದೆ. ಬಹಳಷ್ಟು ಮಂದಿ ಊರಿಗೆ ತೆರಳಲು ವಾಹನಗಳ ವ್ಯವಸ್ಥೆ ಇಲ್ಲದೆ ನಡೆದುಕೊಂಡು, ಸೈಕಲ್ ನಲ್ಲಿ ಬಂದು, ಯಾವುದೋ ಟ್ರಕ್ ಗಳಲ್ಲಿ ಬಂದು ಹಸಿವು ತಾಳಲಾರದೆ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ.

      ಹೀಗಾಗಿ ಕೊರೊನಾ ಲಾಕ್ಡೌನ್ ಇಂದಾಗಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಪಾರು ಮಾಡುವುದು ಸರ್ಕಾರದ ಕರ್ತವ್ಯವಾಗಿದೆ. ಸರ್ಕಾರದ ಬಳಿ ಇರುವ ಪಿಎಂ ಕೇರ್ಸ್ ನಿಧಿಯಿಂದ ಪ್ರತಿಯೊಬ್ಬರ ಖಾತೆಗೆ 10 ಸಾವಿರ ರೂ. ಹಣೆ ಜಮೆ ಮಾಡುವ ಅಗತ್ಯವಿದೆ ಎಂದು ಹೇಳಿದರು.

       Mamata Banerjee Appeals Transfer Rs 10 Thousand To Each Migrant Labours

      ಪಶ್ಚಿಮ‌ ಬಂಗಾಳಕ್ಕೆ ಸಾಕಷ್ಟು ಮಂದಿ‌ ವಲಸೆ ಕಾರ್ಮಿಕರು ಬೇರೆ ಬೇರೆ ಊರುಗಳಿಂದ ಆಗಮಿಸಿದ್ದಾರೆ. ಆದರೆ ಅವರು ಊರುಗಳಿಗೆ ಕಾಲಿಟ್ಟ ಸಂದರ್ಭದಲ್ಲಿಯೇ ಚಂಡ ಮಾರುತ ಸಂಭವಿಸಿ ಬಹಳಷ್ಟು ಮಂದಿ‌ಮನೆಯನ್ನೂ ಕಳೆದುಕೊಂಡು ದಿಕ್ಕಾಪಾಲಾಗಿದ್ದಾರೆ. ಅವರಿಗೆ ತುರ್ತು ಸಹಾಯ ಮಾಡುವ ಅಗತ್ಯವಿದೆ ಎಂದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+