ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀತಿ ಆಯೋಗದ ಸಭೆಗೆ ಬರೊಲ್ಲ: ಮೋದಿಗೆ ದೀದಿ ಪತ್ರ

|
Google Oneindia Kannada News

ಕೋಲ್ಕತಾ, ಜೂನ್ 7: ಇದೇ ತಿಂಗಳು ನಡೆಯಲಿರುವ ನೀತಿ ಆಯೋಗದ ಸಭೆಗೆ ತಾವು ಹಾಜರಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮಮತಾ ಬ್ಯಾನರ್ಜಿ, ಜೂನ್ 15ರಂದು ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಮತ್ತೆ ರಣಕಹಳೆ ಊದಿದ ಮಮತಾ, ಬಿಜೆಪಿ ವಿಜಯಯಾತ್ರೆಗೆ ನಿಷೇಧಮತ್ತೆ ರಣಕಹಳೆ ಊದಿದ ಮಮತಾ, ಬಿಜೆಪಿ ವಿಜಯಯಾತ್ರೆಗೆ ನಿಷೇಧ

ನೀತಿ ಆಯೋಗಕ್ಕೆ ಯಾವುದೇ ಆರ್ಥಿಕ ಅಧಿಕಾರವಿಲ್ಲ. ಅಲ್ಲದೆ ಅದಕ್ಕೆ ರಾಜ್ಯಗಳ ಯೋಜನೆಗಳನ್ನು ಬೆಂಬಲಿಸುವ ಅಧಿಕಾರವೂ ಇಲ್ಲ. ಹೀಗಿರುವಾಗ ಯಾವುದೇ ಆರ್ಥಿಕ ಅಧಿಕಾರ ಹೊಂದಿಲ್ಲದ ಸಂಸ್ಥೆಯ ಸಭೆಗೆ ಹಾಜರಾಗುವುದರಿಂದ ನನಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Mamata Banerjee letter to Narendra Modi will not attend the Niti Aayoga meeting

ಈ ಹಿಂದೆಯೂ ಮಮತಾ ಬ್ಯಾನರ್ಜಿ ಅವರು ನೀತಿ ಆಯೋಗದ ಸಭೆಗಳಿಗೆ ಗೈರು ಹಾಜರಾಗಿದ್ದರು. ಯೋಜನಾ ಆಯೋಗವನ್ನು ರದ್ದುಗೊಳಿಸಿ ಹೊಸ ಸ್ವರೂಪದ ನೀತಿ ಆಯೋಗ ರಚಿಸಿದ್ದಕ್ಕೆ ಅಸಮಾಧಾನಗೊಂಡಿದ್ದ ಅವರು ಸಭೆಗಳನ್ನು ಬಹಿಷ್ಕರಿಸಿದ್ದರು.

ಬಿಜೆಪಿ ಹಣಿಯಲು ಮಾಸ್ಟರ್ ಪ್ಲಾನ್: ದೀದಿ ಪಾಳೆಯಕ್ಕೆ ಪ್ರಶಾಂತ್ ಕಿಶೋರ್ ಬಿಜೆಪಿ ಹಣಿಯಲು ಮಾಸ್ಟರ್ ಪ್ಲಾನ್: ದೀದಿ ಪಾಳೆಯಕ್ಕೆ ಪ್ರಶಾಂತ್ ಕಿಶೋರ್

ಶಕ್ತುಯುತ ಸಹಕಾರದ ಗಣತಂತ್ರಕ್ಕಾಗಿ ಅಂತರ್ ರಾಜ್ಯ ಸಮಿತಿಯನ್ನು ರಚಿಸುವಂತೆ ಮಮತಾ ಬ್ಯಾನರ್ಜಿ ಸಲಹೆ ನೀಡಿದ್ದರು.

English summary
West Bengal Chief Minister in a letter to Prime Minister Narendra Modi said She will not attend the meeting of Niti Aayoga on June 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X