'ಎಕ್ಸ್ ಪೈರಿ ಪಿಎಂ' ಎಂಬ ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ
ಕೂಚ್ ಬೆಹರ್ (ಪಶ್ಚಿಮ ಬಂಗಾಲ), ಏಪ್ರಿಲ್ 3: ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ್ದರು. ಇದೇ ದಿನವೇ ಮಮತಾ ತಿರುಗೇಟು ನೀಡಿದ್ದಾರೆ. ಮೋದಿ ಅವರನ್ನು ಎಕ್ ಪೈರಿ ಬಾಬು ಎಂದು ಲೇವಡಿ ಮಾಡಿದ್ದಾರೆ. ಇದಕ್ಕೂ ಮುನ್ನ ಪಶ್ಚಿಮ ಬಂಗಾಲದ ಅಭಿವೃದ್ಧಿಗೆ ಅಡ್ಡಿ ಇರುವ ಸ್ಪೀಡ್ ಬ್ರೇಕರ್ ದೀದಿ ಎಂದು ಮೋದಿ ಜರಿದಿದ್ದರು.
ಪಶ್ಚಿಮ ಬಂಗಾಲ ಸರಕಾರ ಜನರು ಹಾಗೂ ರಾಜ್ಯದ ಏಳ್ಗೆಗಾಗಿ ತುಂಬ ಕೆಲಸ ಮಾಡಿದೆ ಎಂದು ಕೂಚ್ ಬೆಹರ್ ಜಿಲ್ಲೆಯಲ್ಲಿ ನಡೆದ ಚುನಾವಣೆ ಸಭೆಯಲ್ಲಿ ಅವರು ಹೇಳಿದ್ದಾರೆ. ಟಿಎಂಸಿ ಆಡಳಿತಾವಧಿಯಲ್ಲಿ ಬಂಗಾಲದಲ್ಲಿ ರೈತರ ಆದಾಯ ಮೂರು ಪಟ್ಟು ಹೆಚ್ಚಾಗಿದೆ ಎಂದಿದ್ದಾರೆ.
'ದೀದಿ' ಪಶ್ಚಿಮ ಬಂಗಾಳದಲ್ಲಿ ಸ್ಪೀಡ್ ಬ್ರೇಕರ್ ಇದ್ದಂತೆ : ನರೇಂದ್ರ ಮೋದಿ ವಾಗ್ಬಾಣ
ಮೋದಿ ಅವರನ್ನು ಎಕ್ಸ್ ಪೈರಿ ಬಾಬು ಹಾಗೂ ಎಕ್ಸ್ ಪೈರಿ ಪಿಎಂ ಎಂದು ಲೇವಡಿ ಮಾಡಿದ ಅವರು, ಧೈರ್ಯವಿದ್ದರೆ ಸಾರ್ವಜನಿಕ ಸಭೆಯಲ್ಲಿ ಅಥವಾ ಟೀವಿಯಲ್ಲಿ ನನ್ನೊಂದಿಗೆ ನೇರ ಚರ್ಚೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿ ಎಂದು ಸವಾಲು ಹಾಕಿದರು.
"ನಾನು ಮೋದಿಯಲ್ಲ, ನಾನು ಸುಳ್ಳು ಹೇಳುವುದಿಲ್ಲ" ಎಂದ ಮಮತಾ, ಪಶ್ಚಿಮ ಬಂಗಾಲದಲ್ಲಿ ಟಿಎಂಸಿ ಮಾಡಿರುವ ಕೆಲಸಗಳ ಬಗ್ಗೆ ತಪ್ಪಾದ ಹೇಳಿಕೆಗಳನ್ನು ನೀಡಿದ್ದಾರೆ. ಮೋದಿ ಆಡಳಿತಾವಧಿಯಲ್ಲಿ ದೇಶದಲ್ಲಿ ಹನ್ನೆರಡು ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.