ಮಮತಾ ಬ್ಯಾನರ್ಜಿ 'ಭಯೋತ್ಪಾದಕರ ರಾಜಕೀಯ ತಾಯಿ' ಎಂದ ಬಿಜೆಪಿ ನಾಯಕ
ಕೋಲ್ಕತ್ತಾ, ನವೆಂಬರ್ 15: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಸೌಮಿತ್ರಾ ಖಾನ್, "ಮಮತಾ ಬ್ಯಾನರ್ಜಿ ದೇಶದ ಎಲ್ಲಾ ಭಯೋತ್ಪಾದಕರ ರಾಜಕೀಯ ತಾಯಿ," ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ವ್ಯಾಪ್ತಿಯನ್ನು 15 ಕಿಲೋಮೀಟರ್ನಿಂದ 50 ಕಿಲೋಮೀಟರ್ಗೆ ವಿಸ್ತರಿಸುವ ಕೇಂದ್ರದ ಕ್ರಮವನ್ನು ಮಧ್ಯಸ್ಥಿಕೆ ವಹಿಸಿ ಹಿಂಪಡೆಯಬೇಕು ಎಂದು ಒತ್ತಾಯಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿರುವ ಬಿಜೆಪಿ ನಾಯಕ ಸೌಮಿತ್ರಾ ಖಾನ್, "ಮಮತಾ ಬ್ಯಾನರ್ಜಿ ದೇಶದ ಎಲ್ಲಾ ಭಯೋತ್ಪಾದಕರ ರಾಜಕೀಯ ತಾಯಿ," ಎಂದಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಆಗ್ರಹವನ್ನು ಕೇಳಬೇಡಿ ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿದ ಸೌಮಿತ್ರಾ ಖಾನ್, "ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳವನ್ನು ನಾಶ ಮಾಡಿದಂತೆ ಇಡೀ ದೇಶವನ್ನೇ ನಾಶ ಮಾಡಲು ಬಯಸಿದ್ದಾರೆ," ಎಂದು ದೂರಿದ್ದಾರೆ.

"ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಡೀ ದೇಶವನ್ನೇ ಧರ್ಮಶಾಲೆಯನ್ನಾಗಿಸುವ ಯತ್ನವನ್ನು ಮಾಡುತ್ತಿದ್ದಾರೆ," ಎಂದು ಆರೋಪ ಮಾಡಿದ್ದಾರೆ. "ಮಮತಾ ಬ್ಯಾನರ್ಜಿ ಪೌರತ್ವ ತಿದ್ದುಪಡಿ ಕಾಯ್ದೆಯು ಸಂಸತ್ತಿನಲ್ಲಿ ಅನುಮೋದನೆ ಆದಾಗ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಮಮತಾ ಬ್ಯಾನರ್ಜಿ ದೇಶದ ಎಲ್ಲಾ ಭಯೋತ್ಪಾದಕರ ರಾಜಕೀಯ ತಾಯಿ," ಎಂದು ಟೀಕೆ ಮಾಡಿದ್ದಾರೆ.
"ಎನ್ಆರ್ಸಿ ಕಾಯ್ದೆ ಅನುಮೋದನೆ ಆದ ಸಂದರ್ಭದಲ್ಲಿ ಅದಕ್ಕೂ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ್ದಾರೆ. ಯಾಕೆಂದರೆ ಮಮತಾ ಬ್ಯಾನರ್ಜಿ ದೇಶವನ್ನು ಧರ್ಮಶಾಲೆಯನ್ನಾಗಿಸಲು ಮುಂದಾಗಿದ್ದಾರೆ. ಭಾರತವು ಮಮತಾ ಬ್ಯಾನರ್ಜಿಯ ಧರ್ಮಶಾಲೆ ಎಂದಾದರೆ, ರೋಹಿಗ್ಯಾರು ಭಾರತಕ್ಕೆ ಬರಲಿದ್ದಾರೆ. ಇಲ್ಲಿಯ ಜನರನ್ನು ಕೊಲ್ಲಲಿದ್ದಾರೆ. ಅವರು ಭಾರತ ಸರ್ಕಾರದ ಹಣವನ್ನು ದೋಚಲು ಇಲ್ಲಿಗೆ ಬರುತ್ತಾರೆ. ಭಾರತವು ರೋಹಿಗ್ಯಾರು ಭಾರತಕ್ಕೆ ಆಗಮಿಸಿ, ಇಲ್ಲಿನ ಜನರನ್ನು ಕೊಂದು, ಸರ್ಕಾರದ ಹಣವನ್ನು ದೋಚುವ ಧರ್ಮಶಾಲೆ ಆಗಬೇಕೇ," ಎಂದು ಪ್ರಶ್ನಿಸಿದರು.
ರೋಹಿಗ್ಯಾರಿಗೆ ಮಮತಾ ಬೆಂಬಲ ಎಂದ ಸೌಮಿತ್ರಾ ಖಾನ್
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೇಶದ ಭದ್ರತೆಯನ್ನು ಕೊನೆ ಮಾಡುವ ನಿಟ್ಟಿನಲ್ಲಿ ರೋಹಿಗ್ಯರಿಗೆ ಬೆಂಬಲವನ್ನು ನೀಡುತ್ತಿದ್ದಾರೆ ಎಂದು ಕೂಡಾ ಬಿಜೆಪಿ ನಾಯಕ ಸೌಮಿತ್ರಾ ಖಾನ್ ದೂರಿದ್ದಾರೆ. "ಮಮತಾ ಬ್ಯಾನರ್ಜಿ ದೇಶದ ಭದ್ರತೆಗೆ ತೊಂದರೆ ಉಂಟು ಮಾಡುವ ರೋಹಿಗ್ಯರಿಗೆ ಬೆಂಬಲ ನೀಡುತ್ತಿದ್ದಾರೆ. ಪಶ್ಚಿಮ ಬಂಗಾಳದ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ವ್ಯಾಪ್ತಿಯನ್ನು 15 ಕಿಲೋಮೀಟರ್ನಿಂದ 50 ಕಿಲೋಮೀಟರ್ಗೆ ವಿಸ್ತರಿಸುವ ಕೇಂದ್ರದ ಕ್ರಮದಿಂದಾಗಿ ಭಯೋತ್ಪಾದಕರು ಭಾರತಕ್ಕೆ ಆಗಮಿಸಲು ಸಾಧ್ಯವಾಗುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಅಸಮಾಧಾನಗೊಂಡಿದ್ದಾರೆ. ಇದರಿಂದಾಗಿ ಈ ಕೇಂದ್ರದ ಕ್ರಮವನ್ನು ವಿರೋಧ ಮಾಡುತ್ತಿದ್ದಾರೆ. ಇದು ಮಮತಾರ ರಾಜಕೀಯ," ಎಂದು ಆರೋಪ ಮಾಡಿದ್ದಾರೆ.
ಪಶ್ಚಿಮ ಬಂಗಾಳ ಸಂಸತ್ತಿನಲ್ಲಿ ನಿರ್ಣಯವನ್ನು ಮಂಡನೆ ಮಾಡಲಿರುವ ಬಗ್ಗೆ ಮಾಧ್ಯಮಗಳು ಪ್ರಶ್ನೆ ಮಾಡಿದಾಗ ಇದಕ್ಕೆ ಪ್ರತಿಕ್ರಿಯೆ ನೀಡಿದ ಸೌಮಿತ್ರಾ ಖಾನ್, "ಮುಖ್ಯಮಂತ್ರಿಗೆ ರಾಜ್ಯದ ಮೇಲೆ ನಂಬಿಕೆ ಇಲ್ಲ. ಸಿಎಂ ಮಮತಾ ಸಂಸತ್ತಿನ ನೀತಿಯನ್ನು ಕೂಡಾ ಪಾಲಿಸುವುದಿಲ್ಲ," ಎಂದು ಹೇಳಿದರು. "ಭಾರತದ ರಚನೆಯ ಮೇಲೆ ಮಮತಾ ಬ್ಯಾನರ್ಜಿ ಎಂದಾದರೂ ನಂಬಿಕೆ ಇರಿಸಿದ್ದಾರೆಯೇ?, ಮಮತಾ ಬ್ಯಾನರ್ಜಿ ರಾಜ್ಯಗಳ ಮೇಲೆ ನಂಬಿಕೆ ಇರಿಸಿಲ್ಲ, ಸಂಸತ್ತಿನ ನೀತಿಯನ್ನು ಮಮತಾ ಪಾಲನೆ ಮಾಡುವುದಿಲ್ಲ. ದೇಶವನ್ನು ವಿರೋಧ ಮಾಡುವುದೇ ಮಮತಾ ಬ್ಯಾನರ್ಜಿಯ ಉದ್ಯೋಗವಾಗಿ ಬಿಟ್ಟಿದೆ," ಎಂದು ಲೇವಡಿ ಮಾಡಿದರು.
(ಒನ್ಇಂಡಿಯಾ ಸುದ್ದಿ)
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral










Click it and Unblock the Notifications