ಕಾಶ್ಮೀರದ ಬಗ್ಗೆ ಅಂತೂ ಹೊರಬಂತು ದೀದಿ ಪ್ರತಿಕ್ರಿಯೆ!
ಕೋಲ್ಕತ್ತಾ, ಆಗಸ್ಟ್ 06: "ಇಂಥ ಮಹತ್ವದ ನಿರ್ಧಾರ ತೆಗೆದುಕೊಳ್ಳುವಾಗ ಎಲ್ಲಾ ರಾಜಕೀಯ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ನಾವು ಈ ಮಸೂದೆಯ ಪರ ಮತಹಾಕುವುದಕ್ಕೆ ಸಾಧ್ಯವಿಲ್ಲ" ಎಂದು 370 ನೇ ವಿಧಿ ರದ್ದತಿಯ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.
ಸೋಮವಾರ ಕೇಂದ್ರ ಸರ್ಕಾರ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯಿತು. ಆದರೆ ಈ ಬಗ್ಗೆ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕುತೂಹಲ ಸೃಷ್ಟಿಯಾಗಿತ್ತು. ಆದರೆ ಕುತೂಹಲಕ್ಕೆ ತಣ್ಣೀರೆರಚುವಂತೆ ಅವರು ಯಾವ ಪ್ರತಿಕ್ರಿಯೆಯನ್ನೂ ನೀಡದೆ ತಟಸ್ಥವಾಗುಳಿದಿದ್ದರು.
ವಿವಾದಾತ್ಮಕ ವಿಷಯವಾಗಿರುವುದರಿಂದ ಯಾವ ರೀತಿಯ ಪ್ರತಿಕ್ರಿಯೆ ನೀಡಿದರೂ ಸಮಸ್ಯೆಯಾಗುತ್ತದೆಂದು ಟಿಎಂಸಿಯ ಸ್ಟ್ರಾಟಜಿಸ್ಟ್ ಪ್ರಶಾಂತ್ ಕಿಶೋರ್ ಅವರು ನೀದಿದ ಸಲಹೆಯ ಮೇರೆಗೆ ದೀದಿ ಮೌನವಾಗಿದ್ದಾರೆ ಎನ್ನಲಾಗಿತ್ತು.

ಆದರೆ ಪತ್ರಕರ್ತರ ಒತ್ತಾಯದ ಮೇರೆಗೆ ಈ ಕುರಿತು ಮಮತಾ ಬ್ಯಾನರ್ಜಿ ಇಂದು ಪ್ರತಿಕ್ರಿಯೆ ನೀಡಿದ್ದು, "ನಾವು ಈ ಮಸೂದೆಯನ್ನು ಬೆಂಬಲಿಸುವುದಿಲ್ಲ, ಇದರ ಪರ ಮತ ಹಾಕುವುದಿಲ್ಲ. ಅವರು ಎಲ್ಲಾ ರಾಜಕೀಯ ಪಕ್ಷ ಮತ್ತು ಕಾಶ್ಮೀರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ನಿರ್ಧಾರಕ್ಕೆ ಬರಬೇಕಿತ್ತು. ಕಾಶ್ಮೀರ ವಿಷಯದಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾದರೆ ನೀವು(ಕೇಂದ್ರ ಸರ್ಕಾರ) ಎಲ್ಲರೊಂದಿಗೂ ಚರ್ಚಿಸಬೇಕು" ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
"ಫಾರೂಖ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಅವರ ಬಗ್ಗೆ ನನಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಅವರಿಗೆ ಉಸಿರುಕಟ್ಟಿಸುವಂಥ ವಾತಾವರಣ ಸೃಷ್ಟಿಸಬೇಡಿ ಎಂದು ನಾನು ಸರ್ಕಾರಕ್ಕೆ 'ಮನವಿ' ಮಾಡುತ್ತೇನೆ. ಅವರು ಉಗ್ರರಲ್ಲ. ಪ್ರಜಾಪ್ರಭುತ್ವದ ದೃಷ್ಟಿಯಿಂದ ಅವರನ್ನು ಬಿಡುಗಡೆಗೊಳಿಸಬೇಕು" ಎಂದು ಸಹನೆಯಿಂದಲೇ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಎಂದರೆ ಸಿಡಿಮಿಡಿ ಎನ್ನುತ್ತಿದ್ದ ಮಮತಾ ಬ್ಯಾನರ್ಜಿ ಅವರು ಇಂಥ ಮಹತ್ವದ ವಿಚಾರದ ಕುರಿತು ಇಷ್ಟೆಲ್ಲ ತಣ್ಣಗೆ ಪ್ರತಿಕ್ರಿಯೆ ನೀಡಿದ್ದು ಅಚ್ಚರಿ ಮೂಡಿಸಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications