Breaking: ಮಮತಾ ಬ್ಯಾನರ್ಜಿ ಅವರ ಸಂಪುಟ ಬುಧವಾರ ಪುನಾರಚನೆ
ಕೊಲ್ಕತ್ತಾ, ಆ.01: ಪಶ್ಚಿಮ ಬಂಗಾಳ ಸಚಿವರಾಗಿದ್ದ ಪಾರ್ಥ ಚಟರ್ಜಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವ ಬೆನ್ನಲ್ಲೇ ಬುಧವಾರ (ಆ.3) ಸಂಪುಟ ಪುನಾರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದರು.
ತನ್ನ ಸಂಪುಟದ ಮಾಜಿ ಸಚಿವ ಮತ್ತು ಆಪ್ತ ಪಾರ್ಥ ಚಟರ್ಜಿ ಮೇಲೆ ಇತ್ತೀಚೆಗೆ ನಡೆದ ದಾಳಿಗಳ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ, ಬುಧವಾರ ರಾಜ್ಯದಲ್ಲಿ ನಾಲ್ಕು ಅಥವಾ ಐದು ಹೊಸ ಮುಖಗಳನ್ನು ಒಳಗೊಂಡ ಸಂಪುಟ ಪುನಾರಚನೆ ನಡೆಯಲಿದೆ ಎಂದು ಘೋಷಿಸಿದರು.
"ನಾವು ಸಚಿವರಾದ ಸುಬ್ರತಾ ಮುಖರ್ಜಿ, ಸಾಧನ್ ಪಾಂಡೆ ಅವರನ್ನು ಕಳೆದುಕೊಂಡಿದ್ದೇವೆ. ಪಾರ್ಥ ಚಟರ್ಜಿ ಅವರು ಜೈಲಿನಲ್ಲಿದ್ದಾರೆ. ಆದ್ದರಿಂದ ಅವರ ಎಲ್ಲಾ ಕೆಲಸಗಳನ್ನು ಮಾಡಬೇಕು. ನಾನು ಒಬ್ಬಂಟಿಯಾಗಿ ಎಲ್ಲವನ್ನೂ ನಿಭಾಯಿಸಲು ಸಾಧ್ಯವಿಲ್ಲ" ಎಂದು ಹೇಳಿದರು.

ಜೊತೆಗೆ ಇಡೀ ಸಚಿವ ಸಂಪುಟವನ್ನು ವಿಸರ್ಜಿಸಿ ಹೊಸ ಸಂಪುಟವನ್ನು ರಚಿಸುವ ಯೋಜನೆ ಇಲ್ಲ ಎಂದು ಹೇಳಿದರು.
ಪಶ್ಚಿಮ ಬಂಗಾಳ ಶಾಲಾ ಉದ್ಯೋಗ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಪಾರ್ಥ ಚಟರ್ಜಿ ಅವರನ್ನು ಬಂಧಿಸಿದ ನಂತರ ಪಶ್ಚಿಮ ಬಂಗಾಳ ಸರ್ಕಾರ ಜುಲೈ 28 ರಂದು ಅವರನ್ನು ಅವರ ಸಚಿವ ಸ್ಥಾನದಿಂದ ವಜಾಗೊಳಿಸಿತು.

ಇತ್ತ, ಕೋಲ್ಕತ್ತಾದಲ್ಲಿರುವ ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಮನೆಗಳಿಂದ ರಾಶಿಗಟ್ಟಲೆ ನಗದು ಮತ್ತು ಕಿಲೋಗಟ್ಟಲೆ ಚಿನ್ನವನ್ನು ವಶಪಡಿಸಿಕೊಂಡ ದಿನಗಳ ನಂತರ, ಹಣವು ತನಗೆ ಸೇರಿದ್ದಲ್ಲ ಎಂದು ಪಾರ್ಥ ಚಟರ್ಜಿ ಹೇಳಿದ್ದು, ತನ್ನನ್ನು ಬಂಧಿಸುವ ಷಡ್ಯಂತ್ರ ಇದಾಗಿದೆ ಎಂದಿದ್ದಾರೆ.
ಜಿಲ್ಲೆಗಳ ಸಂಖ್ಯೆ 23 ರಿಂದ 30 ಕ್ಕೆ ಹೆಚ್ಚಿಸಲಾಗಿದೆ.
"ಮೊದಲು ಬಂಗಾಳದಲ್ಲಿ 23 ಜಿಲ್ಲೆಗಳಿದ್ದವು. ಈಗ ಅದನ್ನು 30 ಕ್ಕೆ ಹೆಚ್ಚಿಸಲಾಗಿದೆ. ಸುಂದರ್ಬನ್, ಇಚ್ಚೆಮಟಿ, ರಾಣಘಾಟ್, ಬಿಷ್ಣುಪುರ್, ಜಂಗಿಪುರ್, ಬೆಹ್ರಾಂಪುರ ಮತ್ತು ಇಬಸಿರ್ಹತ್ ಎಂದು ಜಿಲ್ಲೆಗಳಿಗೆ ಹೆಸರಿಸಲಾಗುವುದು" ಎಂದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications