Breaking: ಮಮತಾ ಬ್ಯಾನರ್ಜಿ ಅವರ ಸಂಪುಟ ಬುಧವಾರ ಪುನಾರಚನೆ
ಕೊಲ್ಕತ್ತಾ, ಆ.01: ಪಶ್ಚಿಮ ಬಂಗಾಳ ಸಚಿವರಾಗಿದ್ದ ಪಾರ್ಥ ಚಟರ್ಜಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವ ಬೆನ್ನಲ್ಲೇ ಬುಧವಾರ (ಆ.3) ಸಂಪುಟ ಪುನಾರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದರು.
ತನ್ನ ಸಂಪುಟದ ಮಾಜಿ ಸಚಿವ ಮತ್ತು ಆಪ್ತ ಪಾರ್ಥ ಚಟರ್ಜಿ ಮೇಲೆ ಇತ್ತೀಚೆಗೆ ನಡೆದ ದಾಳಿಗಳ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ, ಬುಧವಾರ ರಾಜ್ಯದಲ್ಲಿ ನಾಲ್ಕು ಅಥವಾ ಐದು ಹೊಸ ಮುಖಗಳನ್ನು ಒಳಗೊಂಡ ಸಂಪುಟ ಪುನಾರಚನೆ ನಡೆಯಲಿದೆ ಎಂದು ಘೋಷಿಸಿದರು.
"ನಾವು ಸಚಿವರಾದ ಸುಬ್ರತಾ ಮುಖರ್ಜಿ, ಸಾಧನ್ ಪಾಂಡೆ ಅವರನ್ನು ಕಳೆದುಕೊಂಡಿದ್ದೇವೆ. ಪಾರ್ಥ ಚಟರ್ಜಿ ಅವರು ಜೈಲಿನಲ್ಲಿದ್ದಾರೆ. ಆದ್ದರಿಂದ ಅವರ ಎಲ್ಲಾ ಕೆಲಸಗಳನ್ನು ಮಾಡಬೇಕು. ನಾನು ಒಬ್ಬಂಟಿಯಾಗಿ ಎಲ್ಲವನ್ನೂ ನಿಭಾಯಿಸಲು ಸಾಧ್ಯವಿಲ್ಲ" ಎಂದು ಹೇಳಿದರು.

ಜೊತೆಗೆ ಇಡೀ ಸಚಿವ ಸಂಪುಟವನ್ನು ವಿಸರ್ಜಿಸಿ ಹೊಸ ಸಂಪುಟವನ್ನು ರಚಿಸುವ ಯೋಜನೆ ಇಲ್ಲ ಎಂದು ಹೇಳಿದರು.
ಪಶ್ಚಿಮ ಬಂಗಾಳ ಶಾಲಾ ಉದ್ಯೋಗ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಪಾರ್ಥ ಚಟರ್ಜಿ ಅವರನ್ನು ಬಂಧಿಸಿದ ನಂತರ ಪಶ್ಚಿಮ ಬಂಗಾಳ ಸರ್ಕಾರ ಜುಲೈ 28 ರಂದು ಅವರನ್ನು ಅವರ ಸಚಿವ ಸ್ಥಾನದಿಂದ ವಜಾಗೊಳಿಸಿತು.

ಇತ್ತ, ಕೋಲ್ಕತ್ತಾದಲ್ಲಿರುವ ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಮನೆಗಳಿಂದ ರಾಶಿಗಟ್ಟಲೆ ನಗದು ಮತ್ತು ಕಿಲೋಗಟ್ಟಲೆ ಚಿನ್ನವನ್ನು ವಶಪಡಿಸಿಕೊಂಡ ದಿನಗಳ ನಂತರ, ಹಣವು ತನಗೆ ಸೇರಿದ್ದಲ್ಲ ಎಂದು ಪಾರ್ಥ ಚಟರ್ಜಿ ಹೇಳಿದ್ದು, ತನ್ನನ್ನು ಬಂಧಿಸುವ ಷಡ್ಯಂತ್ರ ಇದಾಗಿದೆ ಎಂದಿದ್ದಾರೆ.
ಜಿಲ್ಲೆಗಳ ಸಂಖ್ಯೆ 23 ರಿಂದ 30 ಕ್ಕೆ ಹೆಚ್ಚಿಸಲಾಗಿದೆ.
"ಮೊದಲು ಬಂಗಾಳದಲ್ಲಿ 23 ಜಿಲ್ಲೆಗಳಿದ್ದವು. ಈಗ ಅದನ್ನು 30 ಕ್ಕೆ ಹೆಚ್ಚಿಸಲಾಗಿದೆ. ಸುಂದರ್ಬನ್, ಇಚ್ಚೆಮಟಿ, ರಾಣಘಾಟ್, ಬಿಷ್ಣುಪುರ್, ಜಂಗಿಪುರ್, ಬೆಹ್ರಾಂಪುರ ಮತ್ತು ಇಬಸಿರ್ಹತ್ ಎಂದು ಜಿಲ್ಲೆಗಳಿಗೆ ಹೆಸರಿಸಲಾಗುವುದು" ಎಂದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications