ಅಗ್ನಿಪಥ್ ಮೂಲಕ ಬಿಜೆಪಿಗೆ ಸಶಸ್ತ್ರ ಕಾರ್ಯಕರ್ತರ ಪಡೆ: ಮಮತಾ ಬ್ಯಾನರ್ಜಿ
ಕೋಲ್ಕತಾ, ಜೂನ್ 20: ಆರ್ಎಸ್ಎಸ್ ಯುವಕರನ್ನು ಸೇನೆಗೆ ತುಂಬುವ ಹುನ್ನಾರವೇ 'ಅಗ್ನಿಪಥ್' ಯೋಜನೆ ಎಂದು ಮೊನ್ನೆ ಶನಿವಾರದಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನು ಮಮತಾ ಬ್ಯಾನರ್ಜಿ ಅನುಮೋದಿಸಿದ್ದಾರೆ. ಅಗ್ನಿಪಥ್ ಯೋಜನೆ ಮೂಲಕ ಬಿಜೆಪಿಯವರು ತಮ್ಮದೇ ಸಶಸ್ತ್ರ ಕಾರ್ಯತಕರ್ತರ ಪಡೆಯನ್ನು ನಿರ್ಮಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳು ಆರೋಪ ಮಾಡಿದ್ದಾರೆ.
ನವಯುವಕರನ್ನು ಸೇನೆಗೆ ಅಲ್ಪಾವಧಿ ಸೇವೆಯಾಗಿ ನೇಮಕಾತಿ ಮಾಡಿಕೊಳ್ಳುವ ಯೋಜನೆಯೇ ಅಗ್ನಿಪಥ್. 17.5ರಿಂದ 21 ವರ್ಷ ವಯೋಮಾನದ ಯುವಕರನ್ನು ಭೂಸೇನೆ, ವಾಯು ಸೇನೆ ಮತ್ತು ನೌಕಾ ಸೇನೆಗಳಿಗೆ ಅಗ್ನಿವೀರರಾಗಿ ನೇಮಕ ಮಾಡಿಕೊಳ್ಳುವುದಾಗಿ ಕೇಂದ್ರ ಸರಕಾರ ಘೋಷಣೆ ಮಾಡಿದೆ. ಈ ಸಂಬಂಧ ದೇಶಾದ್ಯಂತ ತೀವ್ರ ಪ್ರತಿಭಟನೆಗಳು ಮತ್ತು ತತ್ಪರಿಣಾಮವಾಗಿ ಹಿಂಸಾಚಾರಗಳು ನಡೆದಿವೆ.
ಅಗ್ನಿಪಥ್ ಯೋಜನೆಯಿಂದಾಗಿ ನಿಯಮಿತ ಯೋಧರ ಆಯ್ಕೆ ಪ್ರಕ್ರಿಯೆ ಕೈಬಿಡಲಾಗುತ್ತದೆ. ನಾಲ್ಕು ವರ್ಷಗಳ ಅವಧಿ ಬಳಿಕ ಕೆಲಸ ಇಲ್ಲದೇ, ಜೀವನದಲ್ಲಿ ಭದ್ರತೆ ಇಲ್ಲದೆ, ಪಿಂಚಣಿ ಇಲ್ಲದೇ ನಿರುದ್ಯೋಗಿಗಳಾಗಿ ಉಳಿದುಹೋಗಬಹುದು ಎಂಬುದು ಸೇನಾ ಉದ್ಯೋಗಾಕಾಂಕ್ಷಿ ಯುವಕರ ಆತಂಕ. ಹೀಗಾಗಿ ಪ್ರತಿಭಟನೆಗಳು ನಡೆಯುತ್ತಿವೆ.

ಅಗ್ನಿವೀರರಿಗೆ ವಾಚ್ಮನ್ ಕೆಲಸ
ನಾಲ್ಕು ವರ್ಷಗಳ ಸೇವೆ ಬಳಿಕ ಸೇನೆಯಿಂದ ಹೊರಬರುವ ಅಗ್ನಿವೀರರು ಗಾರ್ಡ್ ಇತ್ಯಾದಿ ಕೆಲಸಗಳನ್ನು ಮಾಡಬಹುದು ಎಂದು ಬಿಜೆಪಿಯ ಕೆಲ ನಾಯಕರು ಹೇಳಿಕೆ ಕೊಟ್ಟಿದ್ದಿತ್ತು. ಈ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿ, ಅಗ್ನಿವೀರರನ್ನು ಬಿಜೆಪಿ ತನ್ನ ಪಕ್ಷ ಕಚೇರಿಗಳಲ್ಲಿ ವಾಚ್ಮೆನ್ಗಳಾಗಿ ನೇಮಕ ಮಾಡಿಕೊಳ್ಳುವ ಉದ್ದೇಶದಲ್ಲಿದ್ದಂತಿದೆ ಎಂದು ಲೇವಡಿ ಮಾಡಿದ್ದಾರೆ.

ಬಿಜೆಪಿಯ ಸಶಸ್ತ್ರ ಕಾರ್ಯಕರ್ತರ ಪಡೆ
"ಅಗ್ನಿಪಥ್ ಯೋಜನೆ ಮೂಲಕ ಬಿಜೆಪಿ ತನ್ನದೇ ಸಶಸ್ತ್ರ ಕಾರ್ಯಕರ್ತರ ಪಡೆಯನ್ನು ರಚಿಸಲು ಯತ್ನಿಸುತ್ತಿದೆ. ಈ ಅಗ್ನವೀರರು ನಾಲ್ಕು ವರ್ಷಗಳ ಬಳಿಕ ಏನು ತಾನೆ ಮಾಡುತ್ತಾರೆ? ಈ ಯುವಕರ ಕೈಗೆ ಶಸ್ತ್ರಗಳನ್ನು ಕೊಟ್ಟು ಕೂರಿಸಬೇಕೆಂದಿದೆ" ಎಂದು ಕೋಲ್ಕತಾ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ಗುಡುಗಿದ್ಧಾರೆ.

ಉದ್ಯೋಗ ಕೊಡುತ್ತೇನೆಂದು ಹೇಳಿ ವಂಚನೆ
2024ರ ಲೋಕಸಭಾ ಚುನಾವಣೆ ಇರುವ ಹಿನ್ನೆಲೆಯಲ್ಲಿ ಅಗ್ನಿಪಥ್ ಮುಂತಾದ ಯೋಜನೆಗಳ ಮೂಲಕ ಬಿಜೆಪಿ ಜನಸಮೂಹವನ್ನು ಮೂರ್ಖರನ್ನಾಗಿಸುವ ಪ್ರಯತ್ನ ಮಾಡುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಟೀಕಿಸಿದ್ದಾರೆ.
"ಪ್ರತೀ ವರ್ಷವೂ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಅವರು ಭರವಸೆ ನೀಡಿದ್ದರು. ಈಗ ಇಂಥ ಯೋಜನೆಯ ಹೆಸರಿನಲ್ಲಿ ದೇಶದ ಜನರನ್ನು ಏಮಾರಿಸುತ್ತಿದ್ಧಾರೆ" ಎಂದು ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಡೆದ ಈ ಮಾತಿನ ಯುದ್ಧದಲ್ಲಿ ಮಮತಾ ಬ್ಯಾನರ್ಜಿ ಮಾತಿಗೆ ಸಿಟ್ಟಾದ ಬಿಜೆಪಿ ಶಾಸಕರು ಪ್ರತಿಭಟನೆಯಾಗಿ ಸದನದಿಂದ ಹೊರನಡೆದರು.

ಹೆಚ್ಡಿಕೆ ಹೇಳಿದ್ದೇನು?
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಜೂನ್ 19ರಂದು ಚನ್ನಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಅಗ್ನಿಪಥ್ ಯೋಜನೆ ಆರ್ಎಸ್ಎಸ್ನ ಹುನ್ನಾರ ಎಂದು ಆರೋಪ ಮಾಡಿದ್ದರು. ಸೇನೆಯ ಮೇಲೆ ಆರ್ಎಸ್ಎಸ್ನ ಹಿಡಿತ ಹೊಂದಲು ಈ ಯೋಜನೆ ರೂಪಿಸಲಾಗಿದೆ ಎಂದಿದ್ದರು.
"ಹಿಟ್ಲರ್ನ ನಾಜಿ ಆಡಳಿತ ಇದ್ದ ವೇಳೆಯಲ್ಲೇ ಆರ್ ಎಸ್ ಎಸ್ ಹುಟ್ಟಿಕೊಂಡಿತ್ತು. ನಾಜಿಯವರ ರೀತಿ ಸೇನೆಯಲ್ಲಿ ಹಿಡಿತ ಸಾಧಿಸಲು ಆರ್ಎಸ್ಎಸ್ನವರು ಹೊರಟಿದ್ದಾರೆ. ಸೇನೆಗೆ ಆರ್ಎಸ್ಎಸ್ನವರನ್ನು ತುಂಬಲು ಚಿತಾವಣಿ ಮಾಡಲಾಗಿದೆ. ಇದು ಆರ್ಎಸ್ಎಸ್ನವರ ಅಗ್ನಿಪಥ್. ಹತ್ತು ಲಕ್ಷ ಆರ್ಎಸ್ಎಸ್ ಕಾರ್ಯಕರ್ತರನ್ನು ಅಯ್ಕೆ ಮಾಡಿ ನಾಲ್ಕು ವರ್ಷಗಳ ನಂತರ ಶೇ. 25ರಷ್ಟು ಯುವಕರನ್ನು ಉಳಿಸಿಕೊಂಡು ಸೇನೆಯನ್ನು ಸಂಘಮಯ ಮಾಡಲಾಗುತ್ತದೆ. ಉಳಿದ ಶೇ ೭೫ರಷ್ಟು ಯುವಕರನ್ನು ದೇಶಕ್ಕೆ ಹಂಚಿ ನಾಜಿ ಸಂಸ್ಕೃತಿ ಹರಡಲು ಬಿಜೆಪಿ ಹೊರಟಿದೆ" ಎಂದು ಕುಮಾರಸ್ವಾಮಿ ಬಹಳ ಗಂಭೀರವಾದ ಆಪಾದನೆ ಮಾಡಿದ್ದರು.
(ಒನ್ಇಂಡಿಯಾ ಸುದ್ದಿ)
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications