ಮಮತಾಗೆ ಚುನಾವಣಾ ಆಯೋಗದಿಂದ ಮತ್ತೊಂದು ನೋಟಿಸ್
ಕೋಲ್ಕತ್ತಾ, ಏಪ್ರಿಲ್ 9: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗ ಮತ್ತೊಂದು ನೋಟಿಸ್ ಜಾರಿ ಮಾಡಿದೆ.
ಕೇಂದ್ರೀಯ ಪಡೆ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣಾ ಆಯೋಗ ಮತ್ತೊಂದು ನೋಟಿಸ್ ನೀಡಿದೆ.
ಪ್ರತಿದಿನವೂ ಹಿಂದೂ-ಮುಸ್ಲಿಂ ಎನ್ನುವ ಮೋದಿ ವಿರುದ್ಧ ಏಕೆ ದೂರು ದಾಖಲಾಗಿಲ್ಲ?
ಮಾರ್ಚ್ 28 ಮತ್ತು ಏಪ್ರಿಲ್ 7 ರಂದು ಸಿಆರ್ಪಿಎಫ್ ಭದ್ರತಾ ಪಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆ ಮೇರೆಗೆ ಮತದಾರರನ್ನು ಬೆದರಿಸುತ್ತಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಏಪ್ರಿಲ್ 10ರೊಳಗೆ ವಿವರಣೆ ನೀಡುವಂತೆ ಆಯೋಗ ತಿಳಿಸಿದೆ. ಇದು ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗ ನೀಡಿರುವ ಎರಡನೇ ನೋಟಿಸ್ ಆಗಿದೆ.
ಏಪ್ರಿಲ್ 8 ರಂದು ಚುನಾವಣಾ ಆಯೋಗದಿಂದ ಮೊದಲ ನೋಟಿಸ್
ಈ ಹಿಂದೆ, ಒಂದು ಸಮುದಾಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಬುಧವಾರ ನೋಟಿಸ್ ನೀಡಿತ್ತು.
ಮುಸ್ಲಿಂ ಸಮುದಾಯದವರಲ್ಲಿ ಏನು ಮನವಿ ಮಾಡಿದ್ದರು?
ಹೂಗ್ಲಿಯಲ್ಲಿ ಚುನಾವಣಾ ಪ್ರಚಾರ ನಡೆಸುವಾಗ, ಮುಸ್ಲಿಂ ಸಮುದಾಯದ ಮತಗಳು ಬೇರೆ ಪಕ್ಷಗಳ ನಡುವೆ ವಿಭಜನೆಗೆ ಅವಕಾಶ ನೀಡದಂತೆ ಮತದಾರರಲ್ಲಿ ಅವರು ಮನವಿ ಮಾಡಿಕೊಂಡ ಆರೋಪದ ಮೇರೆಗೆ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ನೀಡಲಾಗಿತ್ತು.
ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಗೆ ಆಯೋಗದ ನೋಟಿಸ್
48 ಗಂಟೆಗಳಲ್ಲಿ ತಮ್ಮ ಹೇಳಿಕೆ ವಿವರಿಸಬೇಕು
ಮಮತಾ ಬ್ಯಾನರ್ಜಿ ನೋಟಿಸ್ ಸ್ವೀಕರಿಸಿದ 48 ಗಂಟೆಗಳ ಒಳಗೆ ತನ್ನ ಹೇಳಿಕೆಗಳನ್ನು ವಿವರಿಸಲು ನಿರ್ದೇಶಿಸಲಾಗಿದೆ, ಒಂದು ವೇಳೆ ವಿಫಲವಾದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ನೇತೃತ್ವದ ಬಿಜೆಪಿ ನಿಯೋಗದ ದೂರಿನ ಆಧಾರದ ಮೇಲೆ ನೋಟಿಸ್ ನೀಡಲಾಗಿದೆ.
ಮಮತಾ ಬ್ಯಾನರ್ಜಿ ಅವರು ಹೇಳಿದ್ದೇನು?
ನಾನು ನನ್ನ ಅಲ್ಪಸಂಖ್ಯಾತ ಸಹೋದರ ಸಹೋದರಿಯರನ್ನು ಮಡಿಸಿದ ಕೈಗಳಿಂದ ವಿನಂತಿಸುತ್ತಿದ್ದೇನೆ, ದೆವ್ವದ ಮಾತನ್ನು ಕೇಳಿದ ನಂತರ ಅಲ್ಪಸಂಖ್ಯಾತ ಮತಗಳನ್ನು ವಿಭಜಿಸಬೇಡಿ,ಬಿಜೆಪಿಯಿಂದ ಹಣವನ್ನು ತೆಗೆದುಕೊಂಡವರು. ಅವರು ಅನೇಕ ಕೋಮು ಹೇಳಿಕೆಗಳನ್ನು ರವಾನಿಸುತ್ತಾರೆ ಮತ್ತು ಪ್ರಾರಂಭಿಸುತ್ತಾರೆ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಘರ್ಷಣೆಗಳು, ಸಿಪಿಎಂ ಮತ್ತು ಬಿಜೆಪಿಯ ಒಡನಾಡಿಗಳು ಅಲ್ಪಸಂಖ್ಯಾತ ಮತಗಳನ್ನು ವಿಭಜಿಸಲು ಬಿಜೆಪಿ ನೀಡಿದ ಹಣದಿಂದ ಸುತ್ತುತ್ತಿದ್ದಾರೆ ಎನ್ನುವ ಹೇಳಿಕೆಯನ್ನು ನೀಡಿದ್ದರು.