ಕೋಲ್ಕತ್ತಾ: ಅಪಾರ್ಟ್ಮೆಂಟ್ನಲ್ಲಿ ಮಾಡೆಲ್ ಶವ ಪತ್ತೆ
ಕೋಲ್ಕತ್ತಾ, ಮೇ 27: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ರೂಪದರ್ಶಿ ಬಿದಿಶಾ ಡೇ ಮಜುಂದಾರ್ ಶವ ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಆಕೆಯ ಸ್ನೇಹಿತೆ ಸಹ ಸಾವನ್ನಪ್ಪಿದ್ದರು.
ಮೃತ ರೂಪದರ್ಶಿಯನ್ನು ಮಂಜುಷಾ ನಿಯೋಗಿ ಎಂದು ಗುರುತಿಸಲಾಗಿದೆ. ಇವರು ಬಿದಿಶಾ ಡೇ ಮಜುಂದಾರ್ ಸ್ನೇಹಿತೆಯಾಗಿದ್ದರು. ಅವರ ಶವ ಎರಡು ದಿನದ ಹಿಂದೆ ಪತ್ತೆಯಾಗಿತ್ತು.
ಮಂಜುಷಾ ಕೋಲ್ಕತ್ತಾ ನಗರದ ಪಟೌಲಿ ಪ್ರದೇಶದ ಅಪಾರ್ಟ್ಮೆಂಟ್ ಒಂದರಲ್ಲಿ ಬಾಡಿಗೆಗೆ ನೆಲೆಸಿದ್ದರು. ಬ್ರೈಡಲ್ ಮೇಕಪ್ ಫೋಟೋ ಶೂಟ್ಗಳಲ್ಲಿ ಮಂಜುಷಾ ಜನಪ್ರಿಯ ಮಾಡೆಲ್ ಆಗಿದ್ದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯ ನಂತರ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಖಿನ್ನತೆಗೆ ಒಳಗಾಗಿದ್ದ ಮಂಜುಷಾ; ಮಂಜುಷಾ ಸಾವಿನ ಬಗ್ಗೆ ಆಕೆಯ ತಾಯಿ ಪ್ರತಿಕ್ರಿಯೆ ನೀಡಿದ್ದಾರೆ. "ಗೆಳತಿ ಬಿದಿಶಾ ಸಾವಿನ ನಂತರ ಮಂಜುಷಾ ಖಿನ್ನತೆಗೆ ಒಳಗಾಗಿದ್ದಳು. ಸ್ನೇಹಿತೆಯ ಮರಣದಿಂದ ತುಂಬ ನೊಂದಿದ್ದ ಆಕೆ, ಸದಾ ಬಿದಿಶಾ ಬಗ್ಗೆ ಮಾತನಾಡುತ್ತಿದ್ದಳು,'' ಎಂದು ತಿಳಿಸಿದ್ದಾರೆ.

ಮಾಡೆಲ್ಗಳ ಸರಣಿ ಸಾವು: ಕೋಲ್ಕತ್ತಾದ ಡಮ್ ಡಮ್ ಪ್ರದೇಶದ ಫ್ಲ್ಯಾಟ್ ಒಂದರಲ್ಲಿ ಬುಧವಾರ ಬಿದಿಶಾ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೀಗ ಮಂಜುಷಾ ಮೃತದೇಹ ಕೂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಹದಿನೈದು ದಿನಗಳ ಹಿಂದೆ ಜನಪ್ರಿಯ ಕಿರುತೆರೆ ನಟಿ ಪಲ್ಲವಿ ಡೇ ಶವ ಕೋಲ್ಕತ್ತಾದ ಗಾರ್ಫಾ ಪ್ರದೇಶದ ಅಪಾರ್ಟ್ಮೆಂಟ್ನಲ್ಲಿ ಪತ್ತೆಯಾಗಿತ್ತು.
ಆಪ್ತಸಮಾಲೋಚನೆಗಾಗಿ ಸಹಾಯವಾಣಿಗಾಗಿ ಸಂಪರ್ಕಿಸಿ
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications