ಮೇಲ್ಜಾತಿ ಮೀಸಲಾತಿ, ಮೋದಿ ಆಡಳಿತದ ಬಗ್ಗೆ ಅಮರ್ತ್ಯ ಸೇನ್ ಹೇಳಿದ್ದೇನು?
ಕೋಲ್ಕತ್ತಾ, ಜನವರಿ 9: ಸಾಮಾನ್ಯ ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ ಹತ್ತು ಪರ್ಸೆಂಟ್ ಮೀಸಲಾತಿ ಕಲ್ಪಿಸುವ ಪ್ರಸ್ತಾವವೇ ಗೊಂದಲಮಯ ಚಿಂತನೆ ಎಂದು ನೊಬೆಲ್ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯಸೇನ್ ಬುಧವಾರ ಅಭಿಪ್ರಾಯ ಪಟ್ಟಿದ್ದಾರೆ. ಇದರ ರಾಜಕೀಯ ಹಾಗೂ ಆರ್ಥಿಕ ಪ್ರಭಾವಗಳ ಬಗ್ಗೆ ಗಂಭೀರ ಪ್ರಶ್ನೆಗಳು ಏಳುತ್ತವೆ ಎಂದಿದ್ದಾರೆ.
ಯುಪಿಎ ಅವಧಿಯಲ್ಲಿ ಸಾಧಿಸಿದ ಉತ್ತಮ ಆರ್ಥಿಕ ಪ್ರಗತಿಯನ್ನು ಮುಂದುವರಿಸಿಕೊಂಡು ಹೋಗಲು ಮೋದಿ ಸರಕಾರಕ್ಕೆ ಸಾಧ್ಯವಾಯಿತು. ಆದರೆ ಅದನ್ನು ಉದ್ಯೋಗ ಸೃಷ್ಟಿ, ಬಡತನ ನಿರ್ಮೂಲನೆ, ಆರೋಗ್ಯ ಸುರಕ್ಷೆ ಹಾಗೂ ಎಲ್ಲರಿಗೂ ಶಿಕ್ಷಣ ದೊರೆಯುವಂತೆ ಮಾಡಲು ಆಗಲಿಲ್ಲ ಎಂದಿದ್ದಾರೆ.
ಮೇಲ್ಜಾತಿಯ ಕಡಿಮೆ ಆದಾಯದವರಿಗೆ ಮೀಸಲಾತಿ ಒದಗಿಸುವುದು ಬೇರೆಯದೇ ರೀತಿಯ ಸಮಸ್ಯೆ. ಇಡೀ ಜನಸಂಖ್ಯೆಯೇ ಮೀಸಲಾತಿ ಅಡಿಯಲ್ಲಿ ಬಂದುಬಿಟ್ಟರೆ ಅದರಿಂದ ಮೀಸಲಾತಿ ವ್ಯವಸ್ಥೆಯನ್ನೇ ತೆಗೆದಂತೆ. ಇದೊಂದು ಗೊಂದಲಮಯ ಚಿಂತನೆ. ಆದರೆ ಈ ಚಿಂತನೆಯು ಗಂಭೀರವಾದ ರಾಜಕೀಯ ಹಾಗೂ ಆರ್ಥಿಕ ಪರಿಣಾಮ ಬೀರಬಹುದು. ಅವುಗಳನ್ನು ಗಂಭೀರವಾಗಿ ಪ್ರಶ್ನಿಸಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮೋದಿ ಅಧಿಕಾರಕ್ಕೆ ಬರುವ ಮುಂಚೆ ಭಾರತ ಸಾಧಿಸಿದ್ದ ಆರ್ಥಿಕ ಬೆಳವಣಿಗೆಯನ್ನು ಹಾಗೇ ಮುಂದುವರಿಸಿಕೊಂಡು ಬರುವಲ್ಲಿ ಈಗಿನ ಸರಕಾರ ಯಶಸ್ವಿಯಾಗಿದೆ. ನಾವದನ್ನು ಮುಂದುವರಿಸಿದ್ದೇವೆ ಎಂದು ಮೋದಿ ಹೇಳಬಹುದು. ಭಾರತದ ಆರ್ಥಿಕ ಪ್ರಗತಿಯಲ್ಲಿ ದೊಡ್ಡ ಇಳಿಕೆ ಆಗಿಲ್ಲ ಎಂದು ಅಮರ್ತ್ಯಸೇನ್ ಹೇಳಿದ್ದಾರೆ.
ಅಪನಗದೀಕರಣ ಹಾಗೂ ಜಿಎಸ್ ಟಿ ಜಾರಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿರುವ ಅಮರ್ತ್ಯಸೇನ್, ಅಪನಗದೀಕರಣ ನಕಾರಾತ್ಮಕ ಅಥವಾ ಕೆಟ್ಟ ಆರ್ಥಿಕ ನೀತಿ ಹಾಗೂ ಜಿಎಸ್ ಟಿ ತೀರಾ ಕೆಟ್ಟದಾಗಿ ಅನುಷ್ಠಾನಕ್ಕೆ ತರಲಾಯಿತು ಎಂಬುದನ್ನೆಲ್ಲ ಚುನಾವಣೆಯ ಯಶಸ್ಸು ಹಾಗೂ ವೈಫಲ್ಯಕ್ಕೆ ತರಬಾರದು ಎಂದಿದ್ದಾರೆ.
ಅಪನಗದೀಕರಣ ಹಾಗೂ ಜಿಎಸ್ ಟಿ ಜಾರಿಯಿಂದ ಏನಾದರೂ ಈಚಿನ ಪಂಚ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿತೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದಕ್ಕೆ ಉತ್ತರಿಸಲು ಚುನಾವಣೆ ಬಗ್ಗೆ ಅಧ್ಯಯನ ಮಾಡಿರಬೇಕು. ಆದರೆ ನಾನದನ್ನು ಮಾಡಿಲ್ಲ ಎಂದಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications