ಬಂಗಾಳ ಚುನಾವಣಾ ನಂತರದ ಹಿಂಸಾಚಾರದ ಸಿಬಿಐ ತನಿಖೆಗೆ ಎನ್ಎಚ್ಆರ್ಸಿ ಶಿಫಾರಸು
ಕೋಲ್ಕತ್ತಾ, ಜು.15: ಪಶ್ಚಿಮ ಬಂಗಾಳದ ಮತದಾನದ ನಂತರದ ಹಿಂಸಾಚಾರದ ಆರೋಪಗಳನ್ನು ತನಿಖೆ ಮಾಡುವ ಎನ್ಎಚ್ಆರ್ಸಿ ಸಮಿತಿಯು ರಾಜ್ಯದ ಪರಿಸ್ಥಿತಿ "ಕಾನೂನಿನ ನಿಯಮದ ಬದಲು ಆಡಳಿತಗಾರನ ಕಾನೂನಿನ ಅಭಿವ್ಯಕ್ತಿ" ಎಂದು ಪ್ರತಿಪಾದಿಸಿದೆ.
ಈ ಬಗ್ಗೆ ಎನ್ಎಚ್ಆರ್ಸಿ ಸಮಿತಿಯು ಕಲ್ಕತ್ತಾ ಹೈಕೋರ್ಟ್ನ ಮುಂದೆ ನೀಡಿದ ವರದಿಯಲ್ಲಿ ಉಲ್ಲೇಖ ಮಾಡಿದೆ. ಹಾಗೆಯೇ "ಕೊಲೆ ಮತ್ತು ಅತ್ಯಾಚಾರದಂತಹ ಗಂಭೀರ ಅಪರಾಧಗಳು" ಕುರಿತು ಸಿಬಿಐ ತನಿಖೆಯನ್ನು ಶಿಫಾರಸು ಮಾಡಿದೆ.
ಹೈಕೋರ್ಟ್ನ ಐದು ನ್ಯಾಯಾಧೀಶರ ಪೀಠದ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ಎಚ್ಆರ್ಸಿ) ಅಧ್ಯಕ್ಷರು ರಚಿಸಿದ ಸಮಿತಿಯು ಈ ಪ್ರಕರಣಗಳನ್ನು ರಾಜ್ಯದ ಹೊರಗೆ ವಿಚಾರಣೆ ನಡೆಸಬೇಕು ಎಂದು ಹೇಳಿದೆ.

"ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹಿಂಸಾತ್ಮಕ ಘಟನೆಗಳ ಪ್ರಾದೇಶಿಕ-ತಾತ್ಕಾಲಿಕ ವಿಸ್ತರಣೆಯು ಬಲಿಪಶುಗಳ ದುಃಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರದ ಭೀಕರ ನಿರಾಸಕ್ತಿಯನ್ನು ಪ್ರತಿಬಿಂಬಿಸುತ್ತದೆ," ಎಂದಿದೆ.
"ಕೊಲೆ, ಅತ್ಯಾಚಾರ ಮುಂತಾದ ಘೋರ ಅಪರಾಧಗಳನ್ನು ತನಿಖೆಗಾಗಿ ಸಿಬಿಐಗೆ ಹಸ್ತಾಂತರಿಸಬೇಕು. ಈ ಪ್ರಕರಣಗಳನ್ನು ರಾಜ್ಯದ ಹೊರಗೆ ವಿಚಾರಣೆಗೆ ಒಳಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ," ಎಂದು ಜೂನ್ 13 ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ.
"ಬಂಗಾಳದಲ್ಲಿ ಮತದಾನದ ನಂತರದ ಹಿಂಸಾಚಾರದ ಪರಿಣಾಮವಾಗಿ ಜನರು ಹಲ್ಲೆಗೆ ಒಳಗಾಗಿದ್ದಾರೆ. ಹಲವಾರು ಮಂದಿ ಮನೆಗಳಿಂದ ಪಲಾಯನ ಮಾಡಿದ್ದಾರೆ. ಆಸ್ತಿಪಾಸ್ತಿ ನಾಶವಾಗಿದೆ," ಎಂದು ಹೈಕೋರ್ಟ್ಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.
"ಇದು ಮುಖ್ಯ ವಿರೋಧ ಪಕ್ಷದ ಬೆಂಬಲಿಗರ ವಿರುದ್ಧ ಆಡಳಿತ ಪಕ್ಷದ ಬೆಂಬಲಿಗರು ಮಾಡಿದ ಪ್ರತೀಕಾರದ ಹಿಂಸಾಚಾರ," ಎಂದು ಎನ್ಎಚ್ಆರ್ಸಿ ಸಮಿತಿ ತನ್ನ ಹೇಳಿಕೆಗಳಲ್ಲಿ ತೀಕ್ಷ್ಣವಾಗಿ ತಿಳಿಸಿದೆ.
(ಒನ್ಇಂಡಿಯಾ ಸುದ್ದಿ)
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications