ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂಗಾಳ ಚುನಾವಣಾ ನಂತರದ ಹಿಂಸಾಚಾರದ ಸಿಬಿಐ ತನಿಖೆಗೆ ಎನ್‌ಎಚ್‌ಆರ್‌ಸಿ ಶಿಫಾರಸು

|
Google Oneindia Kannada News

ಕೋಲ್ಕತ್ತಾ, ಜು.15: ಪಶ್ಚಿಮ ಬಂಗಾಳದ ಮತದಾನದ ನಂತರದ ಹಿಂಸಾಚಾರದ ಆರೋಪಗಳನ್ನು ತನಿಖೆ ಮಾಡುವ ಎನ್‌ಎಚ್‌ಆರ್‌ಸಿ ಸಮಿತಿಯು ರಾಜ್ಯದ ಪರಿಸ್ಥಿತಿ "ಕಾನೂನಿನ ನಿಯಮದ ಬದಲು ಆಡಳಿತಗಾರನ ಕಾನೂನಿನ ಅಭಿವ್ಯಕ್ತಿ" ಎಂದು ಪ್ರತಿಪಾದಿಸಿದೆ.

ಈ ಬಗ್ಗೆ ಎನ್‌ಎಚ್‌ಆರ್‌ಸಿ ಸಮಿತಿಯು ಕಲ್ಕತ್ತಾ ಹೈಕೋರ್ಟ್‌ನ ಮುಂದೆ ನೀಡಿದ ವರದಿಯಲ್ಲಿ ಉಲ್ಲೇಖ ಮಾಡಿದೆ. ಹಾಗೆಯೇ "ಕೊಲೆ ಮತ್ತು ಅತ್ಯಾಚಾರದಂತಹ ಗಂಭೀರ ಅಪರಾಧಗಳು" ಕುರಿತು ಸಿಬಿಐ ತನಿಖೆಯನ್ನು ಶಿಫಾರಸು ಮಾಡಿದೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುತ್ರ ಅಭಿಜಿತ್‌ ಟಿಎಂಸಿಗೆ ಸೇರ್ಪಡೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪುತ್ರ ಅಭಿಜಿತ್‌ ಟಿಎಂಸಿಗೆ ಸೇರ್ಪಡೆ

ಹೈಕೋರ್ಟ್‌ನ ಐದು ನ್ಯಾಯಾಧೀಶರ ಪೀಠದ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷರು ರಚಿಸಿದ ಸಮಿತಿಯು ಈ ಪ್ರಕರಣಗಳನ್ನು ರಾಜ್ಯದ ಹೊರಗೆ ವಿಚಾರಣೆ ನಡೆಸಬೇಕು ಎಂದು ಹೇಳಿದೆ.

NHRC report on West Bengal post-poll violence recommends CBI probe

"ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹಿಂಸಾತ್ಮಕ ಘಟನೆಗಳ ಪ್ರಾದೇಶಿಕ-ತಾತ್ಕಾಲಿಕ ವಿಸ್ತರಣೆಯು ಬಲಿಪಶುಗಳ ದುಃಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರದ ಭೀಕರ ನಿರಾಸಕ್ತಿಯನ್ನು ಪ್ರತಿಬಿಂಬಿಸುತ್ತದೆ," ಎಂದಿದೆ.

"ಕೊಲೆ, ಅತ್ಯಾಚಾರ ಮುಂತಾದ ಘೋರ ಅಪರಾಧಗಳನ್ನು ತನಿಖೆಗಾಗಿ ಸಿಬಿಐಗೆ ಹಸ್ತಾಂತರಿಸಬೇಕು. ಈ ಪ್ರಕರಣಗಳನ್ನು ರಾಜ್ಯದ ಹೊರಗೆ ವಿಚಾರಣೆಗೆ ಒಳಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ," ಎಂದು ಜೂನ್ 13 ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ.

"ಬಂಗಾಳದಲ್ಲಿ ಮತದಾನದ ನಂತರದ ಹಿಂಸಾಚಾರದ ಪರಿಣಾಮವಾಗಿ ಜನರು ಹಲ್ಲೆಗೆ ಒಳಗಾಗಿದ್ದಾರೆ. ಹಲವಾರು ಮಂದಿ ಮನೆಗಳಿಂದ ಪಲಾಯನ ಮಾಡಿದ್ದಾರೆ. ಆಸ್ತಿಪಾಸ್ತಿ ನಾಶವಾಗಿದೆ," ಎಂದು ಹೈಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

"ಇದು ಮುಖ್ಯ ವಿರೋಧ ಪಕ್ಷದ ಬೆಂಬಲಿಗರ ವಿರುದ್ಧ ಆಡಳಿತ ಪಕ್ಷದ ಬೆಂಬಲಿಗರು ಮಾಡಿದ ಪ್ರತೀಕಾರದ ಹಿಂಸಾಚಾರ," ಎಂದು ಎನ್‌ಎಚ್‌ಆರ್‌ಸಿ ಸಮಿತಿ ತನ್ನ ಹೇಳಿಕೆಗಳಲ್ಲಿ ತೀಕ್ಷ್ಣವಾಗಿ ತಿಳಿಸಿದೆ.

(ಒನ್‌ಇಂಡಿಯಾ ಸುದ್ದಿ)

English summary
NHRC report on West Bengal post-poll violence recommends CBI probe into "grievous offences like murder and rape".
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X