ಬಿಜೆಪಿ ದ್ವೇಷದ ರಾಜಕೀಯಕ್ಕೆ ಬ್ರೇಕ್ ಬೀಳಲಿದೆ; ಮಮತಾ ಬ್ಯಾನರ್ಜಿ
ಕೋಲ್ಕತಾ ಮೇ 31: "ದೇಶಾದ್ಯಂತ ಬಿಜೆಪಿಯ ದ್ವೇಷ ಮತ್ತು ಹಿಂಸೆಯ ರಾಜಕೀಯಕ್ಕೆ ಬ್ರೇಕ್ ಬೀಳಲಿದೆ. 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಸೇರಿ ಕೇಸರಿ ಪಕ್ಷವನ್ನು ಸೋಲಿಸಬೇಕಿದೆ" ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆ ನೀಡಿದರು.
ಪಶ್ಚಿಮ ಬಂಗಾಳದ ಪುರಲಿಯಲ್ಲಿ ಮಂಗಳವಾರ ನಡೆದ ಟಿಎಂಸಿ ಕಾರ್ಯಕರ್ತರ ಸಮಾವೇಶದಲ್ಲಿ ಮಮತಾ ಬ್ಯಾನರ್ಜಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಎಂಟು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.
"ಬಿಜೆಪಿ ಸರಕಾರ ಕಲಬೆರೆಕೆ ಸರಕಾರವಾಗಿದೆ. ನೋಟು ಅಮಾನೀಕರಣದಿಂದ ದೇಶದ ಆರ್ಥಿಕತೆ ಕುಸಿಯುವಂತೆ ಮಾಡಿತು. ಕೇಂದ್ರ ಸರಕಾರ ಪ್ರತಿಪಕ್ಷಗಳನ್ನು ಹಣಿಯಲು ಸರಕಾರಿ ಇಲಾಖೆಗಳನ್ನು ಬಳಸಿಕೊಳ್ಳುತ್ತಿದೆ,'' ಎಂದು ಆರೋಪಿಸಿದರು.
"ಯಾವುದೇ ಕಾರಣಕ್ಕೂ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಸರಕಾರ ಬಹುಮತ ಪಡೆಯುವುದಿಲ್ಲ. ಕೇಂದ್ರದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರುವ ಯಾವುದೇ ಸಾಧ್ಯತೆಗಳಿಲ್ಲ. 2024 ರ ವೇಳೆಗೆ ಬಿಜೆಪಿಯ ದ್ವೇಷ ಮತ್ತು ಹಿಂಸೆಯ ರಾಜಕೀಯ ಅಂತ್ಯವಾಗಲಿದೆ,'' ಎಂದು ಹೇಳಿದರು.
"ಪುರಲಿಯ ಮಣ್ಣು ಮಮತ್ತು ಬಂಗಾಳದ ಮಣ್ಣು ನನಗೆ ಜನರಿಗಾಗಿ ಹೋರಾಡಲು ಶಕ್ತಿಯನ್ನು ನೀಡಿದೆ. ಜನರ ಹಿತ ಕಾಪಾಡುವ ವಿಚಾರ ಬಂದಾಗ ನಾನು ಧೈರ್ಯವಾಗಿ ಹೋರಾಡುತ್ತೇನೆ,'' ಎಂದರು.

ಬಿಜೆಪಿಯಿಂದ ಜನರ ಜೀವನ ಹಾಳು
"ಹುಸಿ ಭರವಸೆಯೊಂದಿಗೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿತು. ಎಂಟು ವರ್ಷಗಳ ಬಿಜೆಪಿಯ ಯೋಜನೆಗಳು ಹಳ್ಳ ಹಿಡಿದಿವೆ. ಸಾಮಾನ್ಯ ಜನರ ಜೀವನವನ್ನು ಬಿಜೆಪಿ ಸರಕಾರ ಹಾಳು ಮಾಡಿದೆ. ಕೇಂದ್ರ ಸರಕಾರದ ದುರಾಡಳಿತದ ವಿರುದ್ಧ ಜನರು ಬೇಸತ್ತು ಹೋಗಿದ್ದಾರೆ,'' ಎಂದು ಮಮತಾ ಬ್ಯಾನರ್ಜಿ ದೂರಿದರು.
"ಪ್ರತಿಪಕ್ಷಗಳನ್ನು ಸುಮ್ಮನಾಗಿಸಲು ಕೇಂದ್ರ ಸರಕಾರ ಸಿಬಿಐ ಮತ್ತು ಇಡಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಸಿಬಿಐ ಮತ್ತು ಇಡಿ ಮೊದಲು ಬಿಜೆಪಿಯ ಭಷ್ಟ ರಾಜಕಾರಣಿಗಳನ್ನು ಬಂಧಿಸಬೇಕು,'' ಎಂದು ಒತ್ತಾಯಿಸಿದರು.

ಕೇಂದ್ರದಿಂದ ಸಿಬಿಐ, ಇಡಿ ದುರ್ಬಳಕೆ
"ಕೇಂದ್ರ ಸರಕಾರ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಮತ್ತು ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ಸಿಬಿಐ ಮತ್ತು ಇಡಿ ಪ್ರಯೋಗಿಸುತ್ತಿದೆ. ಬಿಜೆಪಿ ಸಚಿವರ ಕಥೆ ಏನು? ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಭ್ರಷ್ಟ ಬಿಜೆಪಿ ಸಚಿವರನ್ನು ಜೈಲಿಗೆ ಕಳುಹಿಸಬೇಕಿದೆ,'' ಎಂದು ಮಮತಾ ಬ್ಯಾನರ್ಜಿ ಆಗ್ರಹಿಸಿದರು.
ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಸಂಬಂಧ ಆಪ್ ನಾಯಕ ಸತ್ಯೇಂದ್ರ ಜೈನ್ರನ್ನುಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇನಾಲಯ ನಂತರ ಅವರನ್ನು ಬಂಧಿಸಿದೆ.

ಟಿಎಂಸಿ ನಾಯಕರ ವಿರುದ್ಧಸಮನ್ಸ್ ಜಾರಿ
"ಅಂತಾರಾಷ್ಟ್ರೀಯ ಗಡಿಗಳ ಮೂಲಕ ಜಾನುವಾರುಗಳನ್ನು ಹೇಗೆ ಕಳ್ಳಸಾಗಣೆ ಮಾಡಲಾಗುತ್ತಿದೆ?. ಹಲವು ಪಕ್ರರಣಗಳಿಗೆ ಸಂಬಂಧಿಸಿದಂತೆ ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವು ಟಿಎಂಸಿ ನಾಯಕರ ವಿರುದ್ಧ ಕೇಂದ್ರ ಸರಕಾರಿ ಏಜೆನ್ಸಿಗಳಿಂದ ಸಮನ್ಸ್ ಜಾರಿಗೊಳಿಸಲಾಗಿದೆ,'' ಎಂದು ದೂರಿದರು.

ಕೇಂದ್ರದ ವಿರುದ್ಧ ಪ್ರತಿಭಟನೆ
"ಮಹತ್ಮಾ ಗಾಂಧಿ ನರೇಗಾ ಯೋಜನೆ ಸೇರಿದಂತೆ ಹಲವು ಯೋಜನೆಗಳಲ್ಲಿ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರಕಾರದ ತಾರತಮ್ಯ ಖಂಡಿಸಿ ಪಶ್ಚಿಮ ಬಂಗಾಳಾದ ರಾಜ್ಯಾದ್ಯಂತ ಜೂನ್ 5 ಮತ್ತು 6 ರಂದು ಪ್ರತಿಭಟನೆ ನಡೆಸಲಾಗುತ್ತದೆ,'' ಎಂದು ಟಿಎಂಸಿ ಅಧಿನಾಯಕಿ ತಿಳಿಸಿದರು. 2021ರಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದ ಉಪ ಚುನಾವಣೆಯಲ್ಲಿ 9 ಸ್ಥಾನಗಳ ಪೈಕಿ ಬಿಜೆಪಿ ಆರರಲ್ಲಿ ಜಯಗಳಿಸಿತು. ಟಿಎಂಸಿಗೆ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಮಾತ್ರ ಸಾಧ್ಯವಾಯಿತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications