ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂಗಾಳ ಹಿಂಸಾಚಾರ: ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

|
Google Oneindia Kannada News

ಕೋಲ್ಕತ್ತಾ, ಜೂ.19: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ಹಿಂಸಾಚಾರದಲ್ಲಿ ಹತ್ಯೆಗೀಡಾದ ಇಬ್ಬರು ಬಿಜೆಪಿ ಕಾರ್ಯಕರ್ತರ ಕುಟುಂಬಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಶುಕ್ರವಾರ ಹಿಂದಕ್ಕೆ ಸರಿದಿದ್ದಾರೆ.

ನ್ಯಾಯಮೂರ್ತಿ ಬ್ಯಾನರ್ಜಿ ರಜಾ ನ್ಯಾಯಪೀಠದ ಮುಖ್ಯಸ್ಥರಾಗಿದ್ದರು, ಈ ಪೀಠದಲ್ಲಿ ನ್ಯಾಯಮೂರ್ತಿ ಎಂ.ಆರ್. ಶಾ ಕೂಡಾ ಇದ್ದಾರೆ. ''ಈ ಪ್ರಕರಣವನ್ನು ಮಂಗಳವಾರ ವಿಚಾರಣೆಗೆ ಮತ್ತೊಂದು ನ್ಯಾಯಪೀಠದ ಮುಂದಿರಿದಬಹುದೇ,'' ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿನಂತಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಶಾ, "ನೋಂದಾವಣೆ ನಿರ್ಧರಿಸುತ್ತದೆ," ಎಂದು ತಿಳಿಸಿದ್ದಾರೆ.

'ಪಡಿತರ ಚೀಟಿ ಇಲ್ಲದೆಯೇ ವಲಸೆ ಕಾರ್ಮಿಕರಿಗೆ ಆಹಾರ ದೊರೆಯುವುದು ಹೇಗೆ?' - ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ'ಪಡಿತರ ಚೀಟಿ ಇಲ್ಲದೆಯೇ ವಲಸೆ ಕಾರ್ಮಿಕರಿಗೆ ಆಹಾರ ದೊರೆಯುವುದು ಹೇಗೆ?' - ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

ಈ ಪ್ರಕರಣವನ್ನು ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ಬಿ.ಆರ್. ಗವಾಯಿಯನ್ನು ಒಳಗೊಂಡ ಪೀಠ, ಬೇಸಿಗೆ ರಜಾದಿನಗಳ ಮೊದಲಾರ್ಧದಲ್ಲಿ ಮೇ ತಿಂಗಳಲ್ಲಿ ಆಲಿಸಿದೆ. ಬಳಿಕ ನ್ಯಾಯಮೂರ್ತಿ ಬ್ಯಾನರ್ಜಿ ನ್ಯಾಯಪೀಠದ ಮುಂದೆ ವಿಚಾರಣೆಗೆ ಈ ಅರ್ಜಿ ಬಂದಿದೆ.

Not Before Me : Supreme Court judge withdraws from Bengal violence case

ಬಿಸ್ವಜಿತ್ ಸರ್ಕಾರ್‌ ಎಂಬುವವರು ಸಲ್ಲಿಸಿದ ಈ ಅರ್ಜಿಯನ್ನು ಮೇ 18 ರಂದು ಊರ್ಜಿತಗೊಳಿಸಿದ್ದ ನ್ಯಾಯಾಲಯ ವಿಚಾರಣೆಗೆ ಸಮ್ಮತಿಸಿತ್ತು. ಈ ವಿಚಾರವಾಗಿ ಕೇಂದ್ರ ಮತ್ತು ಪಶ್ಚಿಮ ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೋರಲಾಗಿತ್ತು.

ಬಿಸ್ವಜಿತ್‌ ಅವರ ಅಣ್ಣ ಚುನಾವಣೋತ್ತರ ಗಲಭೆಯಲ್ಲಿ ಕೊಲೆಯಾಗಿದ್ದರು. ಬಿಸ್ವಜಿತ್‌ ಅವರ ಜೊತೆಗೆ ಸ್ವರ್ಣಲತಾ ಅಧಿಕಾರಿ ಎಂಬುವವರೂ ಅರ್ಜಿ ಸಲ್ಲಿಸಿದ್ದಾರೆ. ಅವರ ಪತಿಯೂ ಮತದಾನ ಸಂಬಂಧಿತ ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟಿದ್ದರು ಎನ್ನಲಾಗಿದೆ.

(ಒನ್‌ಇಂಡಿಯಾ ಸುದ್ದಿ)

English summary
Justice Indira Banerjee on Friday withdrew from hearing a petition filed by the families of two BJP activists killed allegedly in the post poll violence in West Bengal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X