300 ವೈದ್ಯರ ರಾಜೀನಾಮೆ, ಬಂಗಾಳದಲ್ಲಿ ಮುಗಿಲು ಮುಟ್ಟಿದ್ದ ಆಕ್ರೋಶ
ಕೋಲ್ಕತ್ತಾ, ಜೂನ್ 15: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಆಕ್ರೋಶ ಮುಗಿಲು ಮುಟ್ಟಿದೆ. ಇದುವರೆಗೆ ಸುಮಾರು 300 ಕ್ಕೂ ಹೆಚ್ಚು ಸರ್ಕಾರಿ ವೈದ್ಯರು ರಾಜೀನಾಮೆ ನೀಡಿದ್ದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಈ ಹಿನ್ನೆಲೆಯಲ್ಲಿ ಶನಿವಾರ ತಮ್ಮೊಂದಿಗೆ ಮಾತುಕತೆಗೆ ಬರುವಂತೆ ಕಿರಿಯ ವೈದ್ಯರುಗಳನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಮಂತ್ರಿಸಿದ್ದಾರೆ.
ಆದರೆ ವೈದ್ಯರ ಬಗ್ಗೆ ಕೀಳಾಗಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರೇ ಎನ್ ಆರ್ ಎಸ್ ಆಸ್ಪತ್ರೆಗೆ ಬಂದು ನಮ್ಮನ್ನು ಭೇಟಿ ಮಾಡಬೇಕು, ಕ್ಷಮೆ ಕೇಳಬೇಕು ಎಂದು ವೈದ್ಯರು ಆಗ್ರಹಿಸಿದ್ದಾರೆ.

ಶುಕ್ರವಾರ ಕೋಲ್ಕತ್ತದ ಎಸ್ ಎಸ್ ಕೆಎಂ ಆಸ್ಪತ್ರೆಗೆ ತೆರಳಿದ್ದ ಮಮತಾ ಬ್ಯಾನರ್ಜಿ, "ವೈದ್ಯರನ್ನು ಸಂಧಾನಕ್ಕೆ ಕರೆದರೆ ಅವರು ನನ್ನನ್ನು ಅವಾಚ್ಯ ಪದಗಳಿಂದ ನಿಂದಿಸಿದರು. ಆದರೂ ನಾನು ಅವರನ್ನು ಕ್ಷಮಿಸಿದ್ದೇನೆ. ಪ್ರತಿಭಟನೆ ಮಾಡುತ್ತಿರುವವ ವೈದ್ಯರೆಲ್ಲ ಬಂಗಾಳದವರಲ್ಲ. ಅವರೆಲ್ಲ ಹೊರಗಿನಿಂದ ಬಂದವರು. ರಾಜ್ಯದಲ್ಲಿ ಶಾಂತಿ ಕದಡಲು ಬಿಜಿಪಿ ಮತ್ತು ಸಿಪಿಎಂ ಮಾಡುತ್ತಿರುವ ಕುತಂತ್ರ ಇದು" ಎಂದು ಆರೋಪಿಸಿದ್ದರು.
ಇದರಿಂದ ಮತ್ತಷ್ಟು ಆಕ್ರೋಶಗೊಂಡ ವೈದ್ಯರು, ಮಮತಾ ಬ್ಯಾನರ್ಜಿ ಅವರು ಭೇಷರತ್ ಕ್ಷಮೆ ಕೇಳಬೇಕು, ಇಲ್ಲವೆಂದರೆ ಈ ಹೋರಾಟ ಉಗ್ರರೂಪ ಪಡೆಯಲಿದೆ ಎಂದು ಗುಡುಗಿದ್ದಾರೆ.
-
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ












Click it and Unblock the Notifications