ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

300 ವೈದ್ಯರ ರಾಜೀನಾಮೆ, ಬಂಗಾಳದಲ್ಲಿ ಮುಗಿಲು ಮುಟ್ಟಿದ್ದ ಆಕ್ರೋಶ

|
Google Oneindia Kannada News

ಕೋಲ್ಕತ್ತಾ, ಜೂನ್ 15: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಆಕ್ರೋಶ ಮುಗಿಲು ಮುಟ್ಟಿದೆ. ಇದುವರೆಗೆ ಸುಮಾರು 300 ಕ್ಕೂ ಹೆಚ್ಚು ಸರ್ಕಾರಿ ವೈದ್ಯರು ರಾಜೀನಾಮೆ ನೀಡಿದ್ದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಈ ಹಿನ್ನೆಲೆಯಲ್ಲಿ ಶನಿವಾರ ತಮ್ಮೊಂದಿಗೆ ಮಾತುಕತೆಗೆ ಬರುವಂತೆ ಕಿರಿಯ ವೈದ್ಯರುಗಳನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಮಂತ್ರಿಸಿದ್ದಾರೆ.

ಆದರೆ ವೈದ್ಯರ ಬಗ್ಗೆ ಕೀಳಾಗಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರೇ ಎನ್ ಆರ್ ಎಸ್ ಆಸ್ಪತ್ರೆಗೆ ಬಂದು ನಮ್ಮನ್ನು ಭೇಟಿ ಮಾಡಬೇಕು, ಕ್ಷಮೆ ಕೇಳಬೇಕು ಎಂದು ವೈದ್ಯರು ಆಗ್ರಹಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮುಷ್ಕರ ಏಕೆ? ಹಿನ್ನೆಲೆಯೇನು?ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮುಷ್ಕರ ಏಕೆ? ಹಿನ್ನೆಲೆಯೇನು?

Over 300 Doctors resigned in West Bengal, protest continues

ಶುಕ್ರವಾರ ಕೋಲ್ಕತ್ತದ ಎಸ್ ಎಸ್ ಕೆಎಂ ಆಸ್ಪತ್ರೆಗೆ ತೆರಳಿದ್ದ ಮಮತಾ ಬ್ಯಾನರ್ಜಿ, "ವೈದ್ಯರನ್ನು ಸಂಧಾನಕ್ಕೆ ಕರೆದರೆ ಅವರು ನನ್ನನ್ನು ಅವಾಚ್ಯ ಪದಗಳಿಂದ ನಿಂದಿಸಿದರು. ಆದರೂ ನಾನು ಅವರನ್ನು ಕ್ಷಮಿಸಿದ್ದೇನೆ. ಪ್ರತಿಭಟನೆ ಮಾಡುತ್ತಿರುವವ ವೈದ್ಯರೆಲ್ಲ ಬಂಗಾಳದವರಲ್ಲ. ಅವರೆಲ್ಲ ಹೊರಗಿನಿಂದ ಬಂದವರು. ರಾಜ್ಯದಲ್ಲಿ ಶಾಂತಿ ಕದಡಲು ಬಿಜಿಪಿ ಮತ್ತು ಸಿಪಿಎಂ ಮಾಡುತ್ತಿರುವ ಕುತಂತ್ರ ಇದು" ಎಂದು ಆರೋಪಿಸಿದ್ದರು.

ಅವಾಚ್ಯ ಶಬ್ದಗಳಿಂದ ನಿಂದಿಸಿದ ವೈದ್ಯರನ್ನೂ ಕ್ಷಮಿಸಿದ್ದೇನೆ: ದೀದಿಅವಾಚ್ಯ ಶಬ್ದಗಳಿಂದ ನಿಂದಿಸಿದ ವೈದ್ಯರನ್ನೂ ಕ್ಷಮಿಸಿದ್ದೇನೆ: ದೀದಿ

ಇದರಿಂದ ಮತ್ತಷ್ಟು ಆಕ್ರೋಶಗೊಂಡ ವೈದ್ಯರು, ಮಮತಾ ಬ್ಯಾನರ್ಜಿ ಅವರು ಭೇಷರತ್ ಕ್ಷಮೆ ಕೇಳಬೇಕು, ಇಲ್ಲವೆಂದರೆ ಈ ಹೋರಾಟ ಉಗ್ರರೂಪ ಪಡೆಯಲಿದೆ ಎಂದು ಗುಡುಗಿದ್ದಾರೆ.

English summary
About 300 doctors resigned from government hospitals in West Bengal. Meanwhile, Mamata Banerjee invites protesting junior doctors to meet her.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X