ನಿಜವಾದ ಹಿಂದೂ ಧರ್ಮ ಇದಲ್ಲ, ಇತಿಹಾಸ ಬದಲಾಯಿಸಲಾಗುತ್ತಿದೆ: ದೀದಿ

ಕೋಲ್ಕತ್ತಾ, ಫೆಬ್ರವರಿ 11: ನಿಜವಾದ ಹಿಂದೂ ಧರ್ಮವನ್ನು ಮರೆತು, ನಿಜವಾದ ಇತಿಹಾಸವನ್ನು ಬದಲಿಸುವ ಪ್ರಯತ್ನದಲ್ಲಿ ಕೆಲವರಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ದೆಹಲಿಯಲ್ಲಿ ಮೊದಲ ಅಮರ್ ಜವಾನ್ ಜ್ಯೋತಿಯನ್ನು ತೆಗೆದು ಹಾಕಲಾಯಿತು ಮತ್ತು ಅವರು ನೇತಾಜಿಯ ಹೊಲೊಗ್ರಾಮ್ ಅನ್ನು ಸ್ಥಾಪಿಸಿದರು. ಈಗ ಹೊಲೊಗ್ರಾಮ್ ಸಹ ಕಾಣೆಯಾಗಿದೆ. ಅವರು ಚುನಾವಣೆಗಳಿದ್ದಾಗ ಮಾತ್ರ ಐಕಾನ್‌ಗಳ ಹೆಸರನ್ನು ನೆನಪಿಸಿಕೊಳ್ಳುತ್ತಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿ ಎಲ್ಲವನ್ನೂ ನಾಶಪಡಿಸುತ್ತಿದೆ. ಅವರು ಇತಿಹಾಸವನ್ನು ಬದಲಿಸುತ್ತಿದ್ದಾರೆ. ಮಹಿಳೆಯರು, ದಲಿತರು ಮತ್ತು ಆದಿವಾಸಿಗಳನ್ನು ಹಿಂಸಿಸುತ್ತಿದ್ದಾರೆ.

Real Hinduism Forgotten, History Being Changed: Mamata Banerjee

ನಿಜವಾದ ಹಿಂದೂ ಧರ್ಮವನ್ನು ಮರೆತುಬಿಡುತ್ತಿದ್ದಾರೆ. ಚುನಾವಣೆಗಳು ಬಂದಾಗ ಅವರು 'ಸಾಧು' (ಸಂತ) ಆಗುತ್ತಾರೆ ಮತ್ತು ತಮ್ಮನ್ನು ತಾವು ಸಂತ ಎಂದು ತೋರಿಸಿಕೊಳ್ಳುತ್ತಾರೆ ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ವಿರುದ್ಧವೂ ದೀದಿ ವಾಗ್ದಾಳಿ ನಡೆಸಿದರು. ಚುನಾವಣೆಗೆ ಮುನ್ನ ಕೆಲವು ವಲಸೆ ಹಕ್ಕಿಗಳು ಪಾಪ್ ಅಪ್ ಆಗುತ್ತವೆ ಎಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹೆಸರನ್ನು ಉಲ್ಲೇಖಿಸದೆ ಮಾತನಾಡಿದರು.

ರೈತರ ಪ್ರತಿಭಟನೆಯನ್ನು ಉಲ್ಲೇಖಿಸಿ ಮಾತನಾಡಿ, ರೈತರು ದೀರ್ಘಕಾಲ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಅವರಿಗೆ ಕನಿಷ್ಠ ಬೆಂಬಲ ಬೆಲೆ ಇನ್ನು ಸಿಕ್ಕಿಲ್ಲ ಎಂದು ಹೇಳಿದರು. ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮತ್ತು ಹೂಡಿಕೆ ಹಿಂತೆಗೆದುಕೊಳ್ಳುವಿಕೆಯ ಕುರಿತು ಅವರು ಸರ್ಕಾರದ ಮೇಲೆ ದಾಳಿ ನಡೆಸಿದರು.

ದೇಶವು ಮಾರಾಟವಾದರೆ, ಜನರು ಹೇಗೆ ಬದುಕುತ್ತಾರೆ. ಅವರು ಎನ್‌ಆರ್‌ಸಿಯನ್ನು ಪರಿಚಯಿಸುವ ಮೂಲಕ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತಾರೆ. ಆದರೆ, ನಾವು ಜನರ ಹಕ್ಕುಗಳನ್ನು ರಕ್ಷಿಸುತ್ತೇವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+