ಅಕ್ರಮ ವಲಸಿಗ ಹಿಂದೂಗಳ ಗಡಿಪಾರು ಇಲ್ಲ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್
ನವದೆಹಲಿ, ಸೆಪ್ಟೆಂಬರ್ 23: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಪಟ್ಟಿಯಲ್ಲಿ ಹಿಂದೂಗಳ ಹೆಸರು ಬಿಟ್ಟುಹೋಗಿದ್ದರೂ ಅವರನ್ನು ದೇಶದಿಂದ ಗಡಿಪಾರು ಮಾಡುವುದಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಭರವಸೆ ನೀಡಿದ್ದಾರೆ.
ಕೋಲ್ಕತಾದಲ್ಲಿ ಭಾನುವಾರ ಬಿಜೆಪಿ ಮತ್ತು ಸಂಘದ ನಡುವೆ ನಡೆದ ಗೋಪ್ಯ ಸಭೆಯಲ್ಲಿ ಮಾತನಾಡಿದ ಭಾಗ್ವತ್ ಅವರು ಹಿಂದೂಗಳು ಭಯಪಡಬೇಕಿಲ್ಲ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.
ಅಸ್ಸಾಂನಲ್ಲಿ ಆಗಸ್ಟ್ 31ರಂದು ಎನ್ಆರ್ಸಿಯ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಹೆಸರು ಕೈತಪ್ಪಿರುವ ಹಿಂದೂಗಳು ಕೂಡ ದೇಶದಿಂದ ಗಡಿಪಾರಾಗುವ ಭಯ ವ್ಯಕ್ತಪಡಿಸಿದ್ದಾರೆ ಎನ್ನುವುದು ಸಭೆಯಲ್ಲಿ ಚರ್ಚೆಗೆ ಬಂದಿತ್ತು. ಅಂತಿಮ ಪಟ್ಟಿಯಲ್ಲಿ 19 ಲಕ್ಷ ಜನರನ್ನು ಕೈಬಿಡಲಾಗಿದ್ದು, ಅದರಲ್ಲಿ ಅನೇಕರು ಬಂಗಾಳಿ ಹಿಂದೂಗಳಿದ್ದಾರೆ.

'ಒಬ್ಬನೇ ಒಬ್ಬ ಹಿಂದೂ ದೇಶದಿಂದ ಹೊರಹೋಗದಂತೆ ಆಗಬಾರದು ಎಂದು ಮೋಹನ್ ಭಾಗ್ವತ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಬೇರೆ ದೇಶಗಳಲ್ಲಿ ಹಿಂಸೆಗೊಳಗಾಗಿ, ಶಿಕ್ಷೆ ಅನುಭವಿಸಿ ಬಂದ ಹಿಂದೂಗಳು ಇಲ್ಲಿಯೇ ಇರಲಿದ್ದಾರೆ' ಎಂದು ಆರೆಸ್ಸೆಸ್ ಸದಸ್ಯರೊಬ್ಬರು ತಿಳಿಸಿದ್ದಾರೆ.
ಅಕ್ರಮ ವಲಸಿಗರನ್ನು ಗುರುತಿಸಲು ಆಂದೋಲನ ನಡೆಸಿರುವ ಆರೆಸ್ಸೆಸ್, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಬಂದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಲು ಪೌರತ್ವ ತಿದ್ದುಪಡಿ ಮಸೂದೆ (ಸಿಎಬಿ) ತರುವಂತೆ ಕೂಡ ಒತ್ತಾಯಿಸಿದೆ.
ಕಿರುಕುಳಕ್ಕೆ ಒಳಗಾದ ಹಿಂದೂಗಳಿಗೆ ಪೌರತ್ವ ನೀಡಬೇಕೆಂದು ಆಗ್ರಹಿಸಿರುವ ಆರೆಸ್ಸೆಸ್, ಹಿಂದೂ ಸಮುದಾಯಕ್ಕೆ ಇರುವ ಏಕೈಕ ಜಾಗ ಭಾರತವಾಗಿದೆ ಎಂದು ಪ್ರತಿಪಾದಿಸಿದೆ.
ಪಶ್ಚಿಮ ಬಂಗಾಳದಲ್ಲಿ ಎನ್ಆರ್ಸಿ ಹೊರಬರುವುದಕ್ಕೂ ಮುನ್ನ ಪೌರತ್ವ (ತಿದ್ದುಪಡಿ) ಮಸೂದೆ ಜಾರಿ ಮಾಡಬೇಕಾದ ಅಗತ್ಯವಿದೆ ಎಂದು ಆರೆಸ್ಸೆಸ್ ಮುಖಂಡರು ಮತ್ತು ಕೆಲವು ನಾಯಕರು ಒತ್ತಿಹೇಳಿದ್ದಾರೆ.
'ಬಂಗಾಳದಲ್ಲಿ ಸಿಎಬಿ ಮೊದಲು ಜಾರಿಯಾಗಲಿದೆ. ಬಳಿಕ ಎನ್ಆರ್ಸಿಯನ್ನು ತರಲಾಗುವುದು. ರಾಜ್ಯದಲ್ಲಿರುವ ಹಿಂದೂಗಳು ಇದರ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ' ಎಂದು ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರೊಬ್ಬರು ತಿಳಿಸಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications