ಮಮತಾ ಬ್ಯಾನರ್ಜಿಗೆ ಬೆಂಬಿಡದ 'ಶಾರದಾ': ರಕ್ಷಣೆ ಹಿಂಪಡೆದ ಕೋಲ್ಕತ್ತ ಹೈಕೋರ್ಟ್
ಕೋಲ್ಕತಾ, ಸೆ 13: ಕೇಂದ್ರ ತನಿಖಾ ದಳ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ, ಮತ್ತೊಂದು ಸುತ್ತಿನ ರಾಜಕೀಯ ಮೇಲಾಟಕ್ಕೆ ವೇದಿಕೆ ಸಿದ್ದವಾಗುತ್ತಿದೆ.
ಶಾರದಾ ಚಿಟ್ ಫಂಡ್ ಹಗರಣ ಪ್ರಕರಣದಲ್ಲಿ ಸಿಬಿಐ ಬಂಧನದಿಂದ ರಕ್ಷಣೆ ಕೋರಿ ಮಹಾನಗರದ ಮಾಜಿ ಪೊಲೀಸ್ ಆಯುಕ್ತರು ಕೋರ್ಟ್ ಮೊರೆ ಹೋಗಿದ್ದರು. ಈಗ, ರಕ್ಷಣೆಯನ್ನು ಶುಕ್ರವಾರ (ಸೆ 13) ಕೋಲ್ಕತಾ ಹೈಕೋರ್ಟ್ ಹಿಂಪಡೆದುಕೊಂಡಿದೆ.
ಮಮತಾ ಬ್ಯಾನರ್ಜಿಯವರ ಪರಮಾಪ್ತ ಮತ್ತು ಕೋಲ್ಕತಾ ಮಹಾನಗರದ ಪೊಲೀಸ್ ಆಯುಕ್ತರಾದ ರಾಜೀವ್ ಕುಮಾರ್ ಅವರನ್ನು ಬಂಧಿಸಲು ಕೆಲವು ತಿಂಗಳ ಹಿಂದೆ ಸಿಬಿಐ ಮುಂದಾಗಿತ್ತು. ಆ ವೇಳೆ, ಸಿಬಿಐ ಅಧಿಕಾರಿಗಳಿಗೇ ಮಮತಾ ಕೋಟೆಯನ್ನು ಹಾಕಿದ್ದರು.

ಈಗ ಹೊರಬಿದ್ದಿರುವ ಕೋಲ್ಕತಾ ಹೈಕೋರ್ಟಿನ ತೀರ್ಪು ಮಾಜಿ ಪೊಲೀಸ್ ಆಯುಕ್ತರು ಮತ್ತು ಮಮತಾ ಬ್ಯಾನರ್ಜಿಗೆ ಆದ ತೀವ್ರ ಹಿನ್ನಡೆಯೆಂದೇ ವ್ಯಾಖ್ಯಾನಿಸಲಾಗುತ್ತಿದೆ. ಹೈಕೋರ್ಟ್ ರಕ್ಷಣೆ ಸ್ಥಗಿತಗೊಂಡಿರುವುದರಿಂದ, ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಬಂಧನದ ಭೀತಿ ಎದುರಾಗಿದೆ.
"ಯಾವುದೇ ವಾರಂಟ್ ಇಲ್ಲದೆ ಪೊಲೀಸ್ ಕಮಿಷನರ್ ಮನೆಗೆ ಬರಲು ನಿಮಗೆಷ್ಟು ಧೈರ್ಯ" ಎಂದು ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಧಮ್ಕಿ ನೀಡಿದ್ದ ಮಮತಾ, 'ಸಂವಿಧಾನವನ್ನು ಉಳಿಸಿ' ಎಂದು ಧರಣಿ ಕುಳಿತಿದ್ದರು.
ಕಳೆದ ಫೆಬ್ರವರಿ ತಿಂಗಳಲ್ಲಿ, ಸಿಬಿಐ ಮತ್ತು ಕೋಲ್ಕತಾ ಪೊಲೀಸ್ ಕಮಿಷನರ್ ನಡುವಿನ ಸಂಘರ್ಷ ತಾರಕಕ್ಕೇರಿತ್ತು. ಕೋಲ್ಕತಾ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅವರ ವಿಚಾರಣೆಗೆಂದು ಬಂದಿದ್ದ ಐವರು ಸಿಬಿಐ ಅಧಿಕಾರಿಗಳನ್ನೇ ಪೊಲೀಸ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದು, ವಶಕ್ಕೆ ತೆಗೆದುಕೊಳ್ಳಲಾಗಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications