ಶಾರದಾ ಹಗರಣ: ಸಿಬಿಐ ವಿಚಾರಣೆಗೆ ಹಾಜರಾಗದ ರಾಜೀವ್ ಕುಮಾರ್
ಕೋಲ್ಕತಾ, ಸೆಪ್ಟೆಂಬರ್ 14: ಶಾರದಾ ಚಿಟ್ ಫಂಡ್ ಹಗರಣದಲ್ಲಿ ಸಿಬಿಐನಿಂದ ಸಮನ್ಸ್ ಪಡೆದಿರುವ ಕೋಲ್ಕತಾದ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರು ಶನಿವಾರ ವಿಚಾರಣೆಗೆ ಹಾಜರಾಗಲಿಲ್ಲ.
ಮಮತಾ ಬ್ಯಾನರ್ಜಿಗೆ ಬೆಂಬಿಡದ 'ಶಾರದಾ': ರಕ್ಷಣೆ ಹಿಂಪಡೆದ ಕೋಲ್ಕತ್ತ ಹೈಕೋರ್ಟ್
ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಆರೋಪಿಯಾಗಿರುವ ರಾಜೀವ್ ಕುಮಾರ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಶುಕ್ರವಾರ ಸಮನ್ಸ್ ನೀಡಿತ್ತು. ಈ ಪ್ರಕರಣದಲ್ಲಿ ರಾಜೀವ್ ಕುಮಾರ್ ಅವರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಲಾಗಿತ್ತು. ಅದನ್ನು ಕಲ್ಕತಾ ಹೈಕೋರ್ಟ್ ಹಿಂದಕ್ಕೆ ಪಡೆದುಕೊಂಡಿತ್ತು. ಅದರ ಬೆನ್ನಲ್ಲೇ ರಾಜೀವ್ ಕುಮಾರ್ ಅವರಿಗೆ ಶನಿವಾರ ಬೆಳಿಗ್ಗೆ 10 ಗಂಟೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿತ್ತು.
ಈ ಹಗರಣ ಬೆಳಕಿಗೆ ಬಂದ ಸಂದರ್ಭದಲ್ಲಿ ತನಿಖೆ ನಡೆಸಲು ಪಶ್ಚಿಮ ಬಂಗಾಳ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ದಳದಲ್ಲಿ (ಎಸ್ಐಟಿ) ರಾಜೀವ್ ಕುಮಾರ್ ಇದ್ದರು. ಬಳಿಕ ಈ ಪ್ರಕರಣವನ್ನು 2014ರಲ್ಲಿ ಸಿಬಿಐಗೆ ಒಪ್ಪಿಸಿ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.
ಮಮತಾ ಬ್ಯಾನರ್ಜಿಗೆ ಹಿನ್ನಡೆ: ಆಪ್ತ ಪೊಲೀಸ್ ಅಧಿಕಾರಿಗೆ ಬಂಧನ ಭೀತಿ
ರಾಜೀವ್ ಕುಮಾರ್ ಅವರು ವಿಚಾರಣೆಗೆ ಗೈರಾಗಿರುವುದರಿಂದ ಮುಂದಿನ ಕಾನೂನು ಕ್ರಮದ ಬಗ್ಗೆ ಚರ್ಚಿಸಲು ಸಿಬಿಐ ಅಧಿಕಾರಿಗಳ ತಂಡವು ಸಂಸ್ಥೆಯ ವಕೀಲ ವೈ.ಜೆ. ದಾಸ್ತುರ್ ಅವರ ನಿವಾಸಕ್ಕೆ ತೆರಳಿತ್ತು.
ಮಾರ್ಚ್ನಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಸಿಬಿಐ ಸಂಗ್ರಹಿಸಿರುವ ಸಾಕ್ಷ್ಯಗಳು ಬಹಳ ಗಂಭೀರವಾಗಿವೆ. ರಾಜೀವ್ ಕುಮಾರ್ ಅವರ ವಿರುದ್ಧ ಕ್ರಮಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಸಿಬಿಐಗೆ ಸೂಚಿಸಿತ್ತು.
ಮಾಜಿ ಪೊಲೀಸ್ ಆಯುಕ್ತರ ವಿರುದ್ಧದ ಆರೋಪ ಗಂಭೀರ: ದೀದಿಗೆ ಮುಜುಗರ
ರಾಜೀವ್ ಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಲು ಫೆಬ್ರವರಿಯಲ್ಲಿ ಕೋಲ್ಕತ್ತಾದ ಅವರ ನಿವಾಸಕ್ಕೆ ತೆರಳಿದ್ದ ಸಿಬಿಐ ತಂಡವನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೂಚನೆ ಮೇರೆಗೆ ಬಂಧಿಸಲಾಗಿತ್ತು. ಇದು ತೀವ್ರ ವಿವಾದ ಸೃಷ್ಟಿಸಿತ್ತು.