ಪ.ಬಂಗಾಳದಲ್ಲಿ ಆರು ಬಿಜೆಪಿ ಕಾರ್ಯಕರ್ತರ ಮೇಲೆ ಬಾಂಬ್ ದಾಳಿ
ಕೋಲ್ಕತ್ತಾ, ಮಾರ್ಚ್ 6: ಕೆಲವು ದುಷ್ಕರ್ಮಿಗಳು ನಡೆಸಿದ ಕಚ್ಚಾ ಬಾಂಬ್ ದಾಳಿಯಲ್ಲಿ ಆರು ಮಂದಿ ಬಿಜೆಪಿ ಕಾರ್ಯಕರ್ತರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಮದುವೆಯಿಂದ ಬಿಜೆಪಿ ಕಾರ್ಯಕರ್ತರು ಹಿಂದಿರುಗುತ್ತಿದ್ದ ಸಂದರ್ಭ ಗುಂಪಿನ ಮೇಲೆ ದುಷ್ಕರ್ಮಿಗಳು ಏಕಾಏಕಿ ಬಾಂಬ್ ಎಸೆದಿದ್ದಾರೆ. ಗಾಯಗೊಂಡರವನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿದೆ.
ಮತ ಹಾಕದ ಜನರನ್ನು ಮುಂದೆ ನೋಡಿಕೊಳ್ಳುತ್ತೇವೆ; ಟಿಎಂಸಿ ಶಾಸಕನ ಬೆದರಿಕೆ
ಶೋವನ್ ದೇವನಾಥ್, ವಿಕ್ರಮ್ ಶಿಲ್, ಅರ್ಪಣ್ ದೇವನಾಥ್, ಸ್ವಪನ್ ಕುರಾಲಿ, ಮಹಾದೇವ ನಾಯಕ್ ಹಾಗೂ ಇತರರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.
ಈ ಬಾಂಬ್ ದಾಳಿ ಹಿಂದೆ ತೃಣಮೂಲ ಕಾಂಗ್ರೆಸ್ ಕೈವಾಡ ಇದೆ ಎಂದು ಬಿಜೆಪಿ ಕಾರ್ಯಕರ್ತರು ದೂರಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಆರಂಭವಾಗಲಿದೆ. ಈ ಬಾರಿ ಟಿಎಂಸಿ ಹಾಗೂ ಬಿಜೆಪಿ ನಡುವೆ ಕಠಿಣ ಸ್ಪರ್ಧೆ ಏರ್ಪಟ್ಟಿದ್ದು, ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 294 ಕ್ಷೇತ್ರಗಳು ಚುನಾವಣೆ ಎದುರಿಸುತ್ತಿವೆ.